AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Funeral: ನೆಚ್ಚಿನ ಗಾಯಕಿಗೆ ದುಃಖದ ವಿದಾಯ; ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಲತಾ ಮಂಗೇಶ್ಕರ್​ ಅಂತ್ಯಸಂಸ್ಕಾರ

ಲತಾ ಮಂಗೇಶ್ಕರ್​ ಅವರು ಭಾನುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ನಿಧನ ಹೊಂದಿದರು. ಮುಂಬೈನ ಖಾಸಗಿ ಆಸ್ಪತ್ರೆ ವೈದ್ಯರು ಈ ವಿಚಾರವನ್ನು ಅಧಿಕೃತ ಮಾಡಿದರು. ಕೊವಿಡ್ ಹಾಗೂ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು.

Lata Mangeshkar Funeral: ನೆಚ್ಚಿನ ಗಾಯಕಿಗೆ ದುಃಖದ ವಿದಾಯ; ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಲತಾ ಮಂಗೇಶ್ಕರ್​ ಅಂತ್ಯಸಂಸ್ಕಾರ
ಲತಾ ಮಂಗೇಶ್ಕರ್​ಗೆ ಅಂತಿಮ ನಮನ
TV9 Web
| Edited By: |

Updated on:Feb 06, 2022 | 7:26 PM

Share

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar)​ ಅವರು ಇಂದು (ಫೆಬ್ರವರಿ 6) ಮುಂಜಾನೆ ನಿಧನ ಹೊಂದಿದರು. ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಅವರಿಗೆ ನೀಡಿದ ಚಿಕಿತ್ಸೆ ಫಲ ಕೊಡಲಿಲ್ಲ. ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ (Mumbai Shivaji Park) ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್​​ ಅವರ ಅಂತಿಮ ಸಂಸ್ಕಾರ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ನಟ ಶಾರುಖ್​ ಖಾನ್​ ಸೇರಿ ಸಾಕಷ್ಟು ಗಣ್ಯರು ಇದಕ್ಕೆ ಸಾಕ್ಷಿ ಆದರು. ಶಿವಾಜಿ ಪಾರ್ಕ್​​ನಲ್ಲಿ ದುಃಖದ ಛಾಯೆ ಆವರಿಸಿತ್ತು. ಎಲ್ಲರೂ ಭಾವುಕರಾಗಿದ್ದರು. ಲೆಜೆಂಡರಿ ಗಾಯಕಿಯನ್ನು ಕಳೆದುಕೊಂಡ ದುಃಖ ಎಲ್ಲರಲ್ಲೂ ಮನೆ ಮಾಡಿತ್ತು.

ಲತಾ ಮಂಗೇಶ್ಕರ್​ ಅವರು ಭಾನುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ನಿಧನ ಹೊಂದಿದರು. ಮುಂಬೈನ ಖಾಸಗಿ ಆಸ್ಪತ್ರೆ ವೈದ್ಯರು ಈ ವಿಚಾರವನ್ನು ಅಧಿಕೃತ ಮಾಡಿದರು. ಕೊವಿಡ್ ಹಾಗೂ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೀಗಾಗಿ, ಲತಾ ದೇಹ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರು ನಿಧನ ಹೊಂದಿದರು.

ಆ ಬಳಿಕ ಲತಾ ಮಂಗೇಶ್ಕರ್​ ದೇಹವನ್ನು ಮುಂಬೈನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಅನುಪಮ್​ ಖೇರ್​ ಸೇರಿದಂತೆ ಬಾಲಿವುಡ್​ನ ಸಾಕಷ್ಟು ದಿಗ್ಗಜರು ಬಂದು ಲತಾ ಅವರ ಅಂತಿಮ ದರ್ಶನ ಪಡೆದರು. ಕೇವಲ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಮನೆಯಿಂದ ಲತಾ ಮಂಗೇಶ್ಕರ್​ ಅವರ ಪಾರ್ಥಿವ ಶರೀರ ತೆರಳುವುದಕ್ಕೂ ಮೊದಲು ಅವರ ಸಹೋದರಿ ಆಶಾ ಭೋಸ್ಲೆ ಅವರು ಅಂತಿಮ ನಮನ ಸಲ್ಲಿಸಿದರು. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಆ ಬಳಿಕ ವಿಶೇಷ ವಾಹನದಲ್ಲಿ ಲತಾ ಮಂಗೇಶ್ಕರ್​ ಪಾರ್ಥಿವ ಶರೀರವನ್ನು ಶಿವಾಜಿ ಪಾರ್ಕ್​ಗೆ ಕರೆತರಲಾಯಿತು. ದಾರಿಯುದ್ದಕ್ಕೂ ಲತಾ ಅವರ ಅಪಾರ ಅಭಿಮಾನಿಗಳು ವಾಹನವನ್ನು ಹಿಂಬಾಲಿಸಿದರು. ಇಡೀ ವಾಹನವನ್ನು ಹೂವಿನಿಂದ ಅಲಂಕರಿಸಲಾಗಿತ್ತು. ದಾರಿಯುದ್ದಕ್ಕೂ ಲತಾ ಅವರನ್ನು ಬೀಳ್ಕೊಡಲು ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ನೆಚ್ಚಿನ ಗಾಯಕಿಗೆ ದುಃಖದ ವಿದಾಯ ಹೇಳಿದರು.

8 ಅರ್ಚಕರು ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಲತಾ ಸಹೋದರ ಹೃದಯನಾಥ್​ ಅವರ ಮಗ ವಿಧಿ ವಿಧಾನಗಳು ಪೂರ್ಣಗೊಳಿಸಿದರು. ಸಾಕಷ್ಟು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಎಲ್ಲರೂ ಲತಾಗೆ ದುಃಖದ ವಿದಾಯ ಹೇಳಿದರು.

ಇದನ್ನೂ ಓದಿ: ‘ನಮ್ಮ ಎದೆಯೊಳಗೆ ಲತಾಜೀ ಸದಾ ಜೀವಂತ’: ಲತಾ ಮಂಗೇಶ್ಕರ್​ ನಿಧನಕ್ಕೆ ಬಾಲಿವುಡ್​ ಸಂತಾಪ

‘ದುಃಖವನ್ನು ಮರೆಮಾಚುವ ನಗು’; ಆಶಾ ಭೋಸ್ಲೆ ಭೇಟಿ ಮಾಡಿ ಸಾಂತ್ವನ ಹೇಳಿದ ಅನುಪಮ್​ ಖೇರ್

Published On - 7:24 pm, Sun, 6 February 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?