AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Funeral: ನೆಚ್ಚಿನ ಗಾಯಕಿಗೆ ದುಃಖದ ವಿದಾಯ; ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಲತಾ ಮಂಗೇಶ್ಕರ್​ ಅಂತ್ಯಸಂಸ್ಕಾರ

ಲತಾ ಮಂಗೇಶ್ಕರ್​ ಅವರು ಭಾನುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ನಿಧನ ಹೊಂದಿದರು. ಮುಂಬೈನ ಖಾಸಗಿ ಆಸ್ಪತ್ರೆ ವೈದ್ಯರು ಈ ವಿಚಾರವನ್ನು ಅಧಿಕೃತ ಮಾಡಿದರು. ಕೊವಿಡ್ ಹಾಗೂ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು.

Lata Mangeshkar Funeral: ನೆಚ್ಚಿನ ಗಾಯಕಿಗೆ ದುಃಖದ ವಿದಾಯ; ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಲತಾ ಮಂಗೇಶ್ಕರ್​ ಅಂತ್ಯಸಂಸ್ಕಾರ
ಲತಾ ಮಂಗೇಶ್ಕರ್​ಗೆ ಅಂತಿಮ ನಮನ
TV9 Web
| Edited By: |

Updated on:Feb 06, 2022 | 7:26 PM

Share

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar)​ ಅವರು ಇಂದು (ಫೆಬ್ರವರಿ 6) ಮುಂಜಾನೆ ನಿಧನ ಹೊಂದಿದರು. ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಅವರಿಗೆ ನೀಡಿದ ಚಿಕಿತ್ಸೆ ಫಲ ಕೊಡಲಿಲ್ಲ. ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ (Mumbai Shivaji Park) ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್​​ ಅವರ ಅಂತಿಮ ಸಂಸ್ಕಾರ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ನಟ ಶಾರುಖ್​ ಖಾನ್​ ಸೇರಿ ಸಾಕಷ್ಟು ಗಣ್ಯರು ಇದಕ್ಕೆ ಸಾಕ್ಷಿ ಆದರು. ಶಿವಾಜಿ ಪಾರ್ಕ್​​ನಲ್ಲಿ ದುಃಖದ ಛಾಯೆ ಆವರಿಸಿತ್ತು. ಎಲ್ಲರೂ ಭಾವುಕರಾಗಿದ್ದರು. ಲೆಜೆಂಡರಿ ಗಾಯಕಿಯನ್ನು ಕಳೆದುಕೊಂಡ ದುಃಖ ಎಲ್ಲರಲ್ಲೂ ಮನೆ ಮಾಡಿತ್ತು.

ಲತಾ ಮಂಗೇಶ್ಕರ್​ ಅವರು ಭಾನುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ನಿಧನ ಹೊಂದಿದರು. ಮುಂಬೈನ ಖಾಸಗಿ ಆಸ್ಪತ್ರೆ ವೈದ್ಯರು ಈ ವಿಚಾರವನ್ನು ಅಧಿಕೃತ ಮಾಡಿದರು. ಕೊವಿಡ್ ಹಾಗೂ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೀಗಾಗಿ, ಲತಾ ದೇಹ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರು ನಿಧನ ಹೊಂದಿದರು.

ಆ ಬಳಿಕ ಲತಾ ಮಂಗೇಶ್ಕರ್​ ದೇಹವನ್ನು ಮುಂಬೈನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಅನುಪಮ್​ ಖೇರ್​ ಸೇರಿದಂತೆ ಬಾಲಿವುಡ್​ನ ಸಾಕಷ್ಟು ದಿಗ್ಗಜರು ಬಂದು ಲತಾ ಅವರ ಅಂತಿಮ ದರ್ಶನ ಪಡೆದರು. ಕೇವಲ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಮನೆಯಿಂದ ಲತಾ ಮಂಗೇಶ್ಕರ್​ ಅವರ ಪಾರ್ಥಿವ ಶರೀರ ತೆರಳುವುದಕ್ಕೂ ಮೊದಲು ಅವರ ಸಹೋದರಿ ಆಶಾ ಭೋಸ್ಲೆ ಅವರು ಅಂತಿಮ ನಮನ ಸಲ್ಲಿಸಿದರು. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಆ ಬಳಿಕ ವಿಶೇಷ ವಾಹನದಲ್ಲಿ ಲತಾ ಮಂಗೇಶ್ಕರ್​ ಪಾರ್ಥಿವ ಶರೀರವನ್ನು ಶಿವಾಜಿ ಪಾರ್ಕ್​ಗೆ ಕರೆತರಲಾಯಿತು. ದಾರಿಯುದ್ದಕ್ಕೂ ಲತಾ ಅವರ ಅಪಾರ ಅಭಿಮಾನಿಗಳು ವಾಹನವನ್ನು ಹಿಂಬಾಲಿಸಿದರು. ಇಡೀ ವಾಹನವನ್ನು ಹೂವಿನಿಂದ ಅಲಂಕರಿಸಲಾಗಿತ್ತು. ದಾರಿಯುದ್ದಕ್ಕೂ ಲತಾ ಅವರನ್ನು ಬೀಳ್ಕೊಡಲು ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ನೆಚ್ಚಿನ ಗಾಯಕಿಗೆ ದುಃಖದ ವಿದಾಯ ಹೇಳಿದರು.

8 ಅರ್ಚಕರು ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಲತಾ ಸಹೋದರ ಹೃದಯನಾಥ್​ ಅವರ ಮಗ ವಿಧಿ ವಿಧಾನಗಳು ಪೂರ್ಣಗೊಳಿಸಿದರು. ಸಾಕಷ್ಟು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಎಲ್ಲರೂ ಲತಾಗೆ ದುಃಖದ ವಿದಾಯ ಹೇಳಿದರು.

ಇದನ್ನೂ ಓದಿ: ‘ನಮ್ಮ ಎದೆಯೊಳಗೆ ಲತಾಜೀ ಸದಾ ಜೀವಂತ’: ಲತಾ ಮಂಗೇಶ್ಕರ್​ ನಿಧನಕ್ಕೆ ಬಾಲಿವುಡ್​ ಸಂತಾಪ

‘ದುಃಖವನ್ನು ಮರೆಮಾಚುವ ನಗು’; ಆಶಾ ಭೋಸ್ಲೆ ಭೇಟಿ ಮಾಡಿ ಸಾಂತ್ವನ ಹೇಳಿದ ಅನುಪಮ್​ ಖೇರ್

Published On - 7:24 pm, Sun, 6 February 22

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ