AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು? ಇಲ್ಲಿದೆ ಮಾಹಿತಿ

Lata Mangeshkar Health Update: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ತುಸು ಸುಧಾರಣೆಯಾಗಿದೆ. ಈ ಕುರಿತು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಪ್ರತಿತ್ ಸಮ್ದಾನಿ ಎಎನ್​ಐಗೆ ಮಾಹಿತಿ ನೀಡಿದ್ದಾರೆ.

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು? ಇಲ್ಲಿದೆ ಮಾಹಿತಿ
ಲತಾ ಮಂಗೇಶ್ಕರ್​
Follow us
TV9 Web
| Updated By: shivaprasad.hs

Updated on: Jan 30, 2022 | 8:26 AM

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರು ತುಸು ಚೇತರಿಸಿಕೊಂಡಿದ್ದಾರೆ ಎಂದು ಅವರ ಆರೋಗ್ಯ ಮೇಲ್ವಿಚಾರಣೆ ಮಾಡುತ್ತಿರುವ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ. ಸುದ್ದಿಸಂಸ್ಥೆ ಎಎನ್​ಐ ಜತೆ ಮಾತನಾಡಿದ ಅವರು, ‘ಲತಾ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯಾಗಿದೆ. ಎರಡು ದಿನಗಳ ಹಿಂದೆ ಅವರ ವೆಂಟಿಲೇಟರ್ ಸಂಪರ್ಕ ತೆಗೆಯಲಾಗಿತ್ತು. ಆದರೆ ಲತಾ ಅವರಿನ್ನೂ ಐಸಿಯುವಿನಲ್ಲೇ ಇದ್ದಾರೆ’ ಎಂದು ನುಡಿದಿದ್ದಾರೆ. ಜನವರಿಯ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ (Covid) ಪಾಸಿಟಿವ್ ಆಗಿತ್ತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. 92 ವರ್ಷದ ಲತಾ ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದ್ದು, ಯಾರೂ ತಪ್ಪು ಮಾಹಿತಿ ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಅವರ ವಕ್ತಾರರು ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಜತೆಗೆ ಗಾಯಕಿ ಹಾಗೂ ಅವರ ಕುಟುಂಬದ ಖಾಸಗಿತನಕ್ಕೆ ಭಂಗ ತರದಂತೆ ವಕ್ತಾರರು ಕೋರಿಕೊಂಡಿದ್ದರು.

ಎಎನ್​ಐ ಟ್ವೀಟ್ ಇಲ್ಲಿದೆ:

ಲತಾ ಅವರ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಾಗೂ ವದಂತಿಗಳು ಹರಿದಾಡಿದ್ದವು. ಇವುಗಳನ್ನು ಉಲ್ಲೇಖಿಸಿದ್ದ ವಕ್ತಾರರು, ಲತಾ ಅವರ ಖಾತೆಯಿಂದಲೇ ಈ ಹಿಂದೆ ಟ್ವೀಟ್ ಮಾಡಿದ್ದರು. ಲತಾ ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅದರಲ್ಲಿ ತಿಳಿಸಲಾಗಿತ್ತು. ಜತೆಗೆ ಅವರ ಆರೋಗ್ಯ ಸುಧಾರಣೆಗೆ ಎಲ್ಲರೂ ಪ್ರಾರ್ಥಿಸೋಣ ಎಂದು ಮನವಿ ಮಾಡಲಾಗಿತ್ತು.

ಲತಾ ಅವರ ಆರೋಗ್ಯ ಸುಧಾರಣೆಗೆ ಅಭಿಮಾನಿಗಳು ದೇವರ ಮೊರೆಹೋಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಅವರ ಆರೋಗ್ಯ ಸುಧಾರಣೆಗೆ ನಿರಂತರವಾಗಿ ಹಾರೈಕೆ ನಡೆಯುತ್ತಿದೆ. ಕೆಲ ಸಮಯದ ಹಿಂದೆ ಲತಾ ಅವರ ಸಹೋದರಿ ಆಶಾ ಭೋಸ್ಲೆ ಮಾತನಾಡಿದ್ದರು. ಆರೋಗ್ಯ ಸುಧಾರಣೆಗೆ ಮನೆಯಲ್ಲಿ ದೇವರಪೂಜೆ ನಡೆಸಲಾಗುತ್ತಿರುವುದನ್ನು ಅವರು ತಿಳಿಸಿದ್ದರು. ಅಲ್ಲದೇ ಅಭಿಮಾನಿಗಳಲ್ಲಿ ಕೂಡ ಪ್ರಾರ್ಥಿಸಿ ಎಂದು ಕೋರಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಡಾ ಸೌಂದರ್ಯ ಕಾಫಿ ಕುಡಿಯುತ್ತಿದ್ದ ಸ್ಟಾಲ್​​​​ನವರಿಗೆ ಅವರು ಸತ್ತ ನಂತರವೇ ಯಡಿಯೂರಪ್ಪನವರ ಮೊಮ್ಮಗಳು ಅಂತ ಗೊತ್ತಾಗಿದ್ದು

ಉದಯೋನ್ಮುಖ ನಟಿಯ ಜತೆ ಹೃತಿಕ್​ ರೋಷನ್​ ಲವ್ವಿಡವ್ವಿ?​ ಲೀಕ್​ ಆಯ್ತು ಫೋಟೋ

ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ