AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲತಾ ಮಂಗೇಶ್ಕರ್​ಗೆ ಐಸಿಯುನಲ್ಲೇ ಮುಂದುವರಿದ ಚಿಕಿತ್ಸೆ; ಇನ್ನೂ 10 ದಿನ ವಿಶೇಷ ನಿಗಾದಲ್ಲಿ ಗಾಯಕಿ

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್​ ಅವರನ್ನು ಅಡ್ಮಿಟ್​ ಮಾಡಲಾಗಿದೆ. ಲತಾ ಅವರ ಆರೋಗ್ಯದ ಬಗ್ಗೆ ಎಲ್ಲರಿಗೂ ಚಿಂತೆ ಆಗಿತ್ತು. ಈಗ ಅವರ ಆರೋಗ್ಯ ಸುಧಾರಿಸಿಕೊಳ್ಳುತ್ತಿರುವ ಬಗ್ಗೆ ವೈದ್ಯರಿಂದ ಮಾಹಿತಿ ಸಿಕ್ಕಿರುವುದಕ್ಕೆ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಲತಾ ಮಂಗೇಶ್ಕರ್​ಗೆ ಐಸಿಯುನಲ್ಲೇ ಮುಂದುವರಿದ ಚಿಕಿತ್ಸೆ; ಇನ್ನೂ 10 ದಿನ ವಿಶೇಷ ನಿಗಾದಲ್ಲಿ ಗಾಯಕಿ
ಲತಾ ಮಂಗೇಶ್ಕರ್​
TV9 Web
| Edited By: |

Updated on: Jan 15, 2022 | 4:28 PM

Share

ಕೊವಿಡ್ (Covid 19)ಕಾರಣದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​​ (Lata Mangeshkar) ಅವರಿಗೆ ಐಸಿಯುನಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ನಿಧಾನವಾಗಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೂ ಸುಮಾರು 10 ದಿನಗಳ ಕಾಲ ವಿಶೇಷ ನಿಗಾದಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಯಲಿದೆ. ಆ ಬಳಿಕ ಅವರನ್ನು ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡುವ ಸಾಧ್ಯತೆ ಇದೆ. ಅವರು ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್​ ಅವರನ್ನು ಅಡ್ಮಿಟ್​ ಮಾಡಲಾಗಿದೆ. ಲತಾ ಅವರ ಆರೋಗ್ಯದ ಬಗ್ಗೆ ಎಲ್ಲರಿಗೂ ಚಿಂತೆ ಆಗಿತ್ತು. ಈಗ ಅವರ ಆರೋಗ್ಯ ಸುಧಾರಿಸಿಕೊಳ್ಳುತ್ತಿರುವ ಬಗ್ಗೆ ವೈದ್ಯರಿಂದ ಮಾಹಿತಿ ಸಿಕ್ಕಿರುವುದಕ್ಕೆ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ‘ಲತಾ ಮಂಗೇಶ್ಕರ್​ ಆರೋಗ್ಯ ಸಂಪೂರ್ಣ ಸ್ಥಿರವಾಗಿದೆ. ದೇವರು ನಿಜವಾಗಿಯೂ ಕರುಣಾಮಯಿ. ಲತಾ ಮಂಗೇಶ್ಕರ್​ ಅವರಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿರುವ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ’ ಎಂದು ಲತಾ ಮಂಗೇಶ್ಕರ್​ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ನ್ಯೂಸ್​ 18ಗೆ ಹೇಳಿಕೆ ನೀಡಿದ್ದಾರೆ.

‘ಅತ್ಯುತ್ತಮ ವೈದ್ಯರ ತಂಡ ಲತಾ ಮಂಗೇಶ್ಕರ್​ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರ ಫೈಟರ್​ ಮತ್ತು ವಿನ್ನರ್​. ಆ ರೀತಿಯಲ್ಲೇ ನಾವು ಅವರನ್ನು ನೋಡಿಕೊಂಡು ಬಂದಿರುವುದು. ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿರುವ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಲತಾ ಮಂಗೇಶ್ಕರ್​ ಕುಟುಂಬದವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.

‘ಇದು ಕೊವಿಡ್​ ಆದಕಾರಣ ಅಕ್ಕನನ್ನು ನೋಡಲು ನಮಗೆ ಅನುಮತಿ ಸಿಕ್ಕಿಲ್ಲ. ವೈದ್ಯರು ಮತ್ತು ನರ್ಸ್​ಗಳು ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. ಹೆಚ್ಚು ವಯಸ್ಸು ಆಗಿರುವ ಕಾರಣ ಇನ್ನಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗಬಹುದು ಅಂತ ವೈದ್ಯರು ಹೇಳಿದ್ದಾರೆ’ ಎಂದು ಲತಾ ಅವರ ಸಹೋದರಿ ಉಷಾ ಮಂಗೇಶ್ಕರ್​ ತಿಳಿಸಿದ್ದರು.

ಸಂಗೀತ ಕ್ಷೇತ್ರದಲ್ಲಿ 70 ದಶಕಗಳ ಕಾಲ ಸಕ್ರಿಯರಾಗಿದ್ದವರು ಲತಾ ಮಂಗೇಶ್ಕರ್​. 13ನೇ ವಯಸ್ಸಿನಿಂದಲೇ ಅವರು ಗಾಯನ ಆರಂಭಿಸಿದ್ದರು. ಭಾರತ ರತ್ನ, ಪದ್ಮ ಭೂಷಣ, ಪದ್ಮ ವಿಭೂಷಣ, ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಸೇರಿದಂತೆ ನೂರಾರು ಗೌರವಗಳು ಅವರಿಗೆ ಸಂದಿವೆ. 30 ಸಾವಿರಕ್ಕೂ ಅದಿಕ ಹಾಡುಗಳಿಗೆ ಲತಾ ಧ್ವನಿ ಆಗಿದ್ದಾರೆ. ವಿಶ್ವಾದ್ಯಂತ ಅವರು ಅಭಿಮಾನಿಗಳನ್ನು ಹೊಂದಿದ್ದಾರೆ. ಲತಾ ಮಂಗೇಶ್ಕರ್​ ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: Lata Mangeshkar: ಕೊವಿಡ್​ನಿಂದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ