AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದ ಕುರಿತು ಮಾಹಿತಿ ನೀಡಿದ ವಕ್ತಾರರು; ವದಂತಿಗಳಿಗೆ ಕಿವಿಗೊಡದಂತೆ ಮನವಿ

Lata Mangeshkar Health Update: ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವದಂಗಿಗಳಿಗೆ ಕಿವಿಗೊಡಬೇಡಿ ಎಂದು ಲತಾ ಅವರ ವಕ್ತಾರರು ಮನವಿ ಮಾಡಿದ್ದಾರೆ.

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದ ಕುರಿತು ಮಾಹಿತಿ ನೀಡಿದ ವಕ್ತಾರರು; ವದಂತಿಗಳಿಗೆ ಕಿವಿಗೊಡದಂತೆ ಮನವಿ
ಲತಾ ಮಂಗೇಶ್ಕರ್
TV9 Web
| Edited By: |

Updated on: Jan 22, 2022 | 12:22 PM

Share

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರು ಇನ್ನೂ ಐಸಿಯುವಿನಲ್ಲಿದ್ದು, ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ಅವರ ವಕ್ತಾರರು ಮಾಹಿತಿ ನೀಡಿದ್ದಾರೆ. ಈ ತಿಂಗಳ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ (Covid) ಪಾಸಿಟಿವ್ ಆಗಿತ್ತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. 92 ವರ್ಷದ ಲತಾ ಅವರು ಇನ್ನೂ ಐಸಿಯುವಿನಲ್ಲೇ ಇದ್ದಾರೆ. ಚಿಕಿತ್ಸೆ ಮುಂದುವರೆಯುತ್ತಿದೆ. ಯಾರೂ ತಪ್ಪು ಮಾಹಿತಿ ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಅವರ ವಕ್ತಾರರು ಮನವಿ ಮಾಡಿದ್ದಾರೆ. ಜತೆಗೆ ಗಾಯಕಿ ಹಾಗೂ ಅವರ ಕುಟುಂಬದ ಖಾಸಗಿತನಕ್ಕೆ ಭಂಗ ತರದಂತೆ ವಕ್ತಾರರು ಕೋರಿಕೊಂಡಿದ್ದಾರೆ. ಪ್ರಸ್ತುತ ಲತಾ ಅವರು ಬ್ರೀಚ್ ಆಸ್ಪತ್ರೆಯ ವೈದ್ಯ ಡಾ.ಪ್ರತೀತ್ ಸಮ್ದಾನಿ ಅವರ ಆರೈಕೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ ಸುದ್ದಿಸಂಸ್ಥೆ ಎಎನ್​ಐ ಲತಾ ಮಂಗೇಶ್ಕರ್ ಅವರ ಆರೋಗ್ಯದ ಕುರಿತು ಮಾಹಿತಿ ಬಿಡುಗಡೆ ಮಾಡಿತ್ತು. ಅದರಲ್ಲಿ ಕುಟುಂಬಸ್ಥರು ಹಾಗೂ ವೈದ್ಯರ ಖಾಸಗಿತನ ಗೌರವಿಸುವಂತೆ ಮತ್ತು ಯಾವುದೇ ವದಂತಿಗಳನ್ನು ನಂಬದಂತೆ ತಿಳಿಸಿದ್ದನ್ನು ಉಲ್ಲೇಖಿಸಲಾಗಿತ್ತು. ಈ ವಾರದ ಆರಂಭದಲ್ಲಿ ಲತಾ ಅವರ ಆರೋಗ್ಯದ ಕುರಿತು ಸುಳ್ಳುಸುದ್ದಿಗಳು ಹರಿದಾಡಿದ್ದವು. ಅದನ್ನು ನಿರಾಕರಿಸಿದ್ದ ವಕ್ತಾರರು, ಲತಾ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎಲ್ಲರೂ ಅವರ ಆರೋಗ್ಯಕ್ಕೆ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದರು.

ಕಳೆದ ವಾರ ವೈದ್ಯ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡುತ್ತಾ, 10-12 ದಿನ ಲತಾ ಅವರನ್ನು ನಿಗಾ ಘಟಕದಲ್ಲಿ ಇಡಲಾಗುವುದು ಎಂದು ತಿಳಿಸಿದ್ದರು. ಕೊರೊನಾ ಜತೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿದೆ ಎಂದು ಅವರು ಹೇಳಿದ್ದರು. ನೆಚ್ಚಿನ ಗಾಯಕಿಯ ಆರೋಗ್ಯ ಸುಧಾರಣೆಗೆ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಲತಾ ಅವರ ಮನೆಯಲ್ಲೂ ವಿಶೇಷ ಪೂಜೆಗಳು ನಡೆಯುತ್ತಿವೆ.

ಇದನ್ನೂ ಓದಿ:

ಸುನೀಲ್​ ಶೆಟ್ಟಿ ಮಕ್ಕಳ ಮದುವೆ ಬಗ್ಗೆ ಸುಳ್ಳು ಸುದ್ದಿ; ಗಾಸಿಪ್ ಹಬ್ಬಿಸಿದವರಿಗೆ ಕ್ಲಾಸ್​ ತೆಗೆದುಕೊಂಡ ಸ್ಟಾರ್​ ನಟ

ಪುನೀತ್​ ನಟನೆಯ ‘ಜೇಮ್ಸ್​’ ಶೂಟಿಂಗ್​ ಮುಕ್ತಾಯ; ರಿಲೀಸ್​ ಡೇಟ್​ ತಿಳಿಯಲು ಕಾದಿರುವ ಅಭಿಮಾನಿಗಳು

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ