AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​

ನಟ ಸಲ್ಮಾನ್​ ಖಾನ್​ ಅವರನ್ನು ನೋಡಲು ಬಂದು ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಗಿದೆ. ಪರಿಸ್ಥಿತಿ ಸುಧಾರಿಸಲು ಪೊಲೀಸರಿಂದ ಲಾಠಿಚಾರ್ಜ್​ ಮಾಡಲಾಗಿದೆ. ಕೆಲವು ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳ ಗುಂಪನ್ನು ಪೊಲೀಸರು ಚದುರಿಸಿದ್ದಾರೆ.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​
ಸಲ್ಮಾನ್​ ಖಾನ್​ ಅಭಿಮಾನಿಗಳು
ಮದನ್​ ಕುಮಾರ್​
|

Updated on: Apr 11, 2024 | 7:11 PM

Share

ಎಲ್ಲೆಡೆ ಇಂದು (ಏಪ್ರಿಲ್​ 11) ಈದ್​ (Eid 2024) ಆಚರಣೆ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಹಬ್ಬದ ಆಚರಣೆ ಮಾಡುತ್ತಿದ್ದಾರೆ. ಬಾಲಿವುಡ್​ ಸ್ಟಾರ್​ಗಳಾದ ಸಲ್ಮಾನ್​ ಖಾನ್​ (Salman Khan), ಶಾರುಖ್​ ಖಾನ್​, ಆಮಿರ್​ ಖಾನ್​ ಮುಂತಾದ ನಟರು ಈದ್​ ಆಚರಣೆಯಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿದ್ದ ಅಭಿಮಾನಿಗಳಿಗೆ ಲಾಠಿಯ ರುಚಿ ತೋರಿಸಲಾಗಿದೆ. ಹೌದು, ಸಲ್ಮಾನ್​ ಖಾನ್​ ಅವರ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​ (Lathicharge) ಮಾಡಲಾಗಿದೆ.

ಜನ್ಮದಿನ ಹಾಗೂ ಈದ್​ ಪ್ರಯುಕ್ತ ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರು ತಮ್ಮ ಮನೆಯ ಬಾಲ್ಕನಿಗೆ ಬಂದು ಅಭಿಮಾನಿಗಳಿಗೆ ವಿಶ್​ ಮಾಡುತ್ತಾರೆ. ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ. ಈ ವರ್ಷವೂ ಈದ್​ ಪ್ರಯುಕ್ತ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಬಂದಿದ್ದಾರೆ. ಸಲ್ಮಾನ್​ ಖಾನ್​ ಅವರ ಮನೆ ಎದುರು ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಅವರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ಮುಂಬೈನ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಸಲ್ಮಾನ್​ ಖಾನ್​ ಅಭಿಮಾನಿಗಳು ಜಮಾಯಿಸಿದ್ದರು. ಎಷ್ಟು ಹೊತ್ತು ಕಾದರೂ ಕೂಡ ಸಲ್ಮಾನ್​ ಖಾನ್​ ದರ್ಶನ ನೀಡಲೇ ಇಲ್ಲ. ನೆರೆದಿದ್ದ ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಯಿತು. ಪರಿಸ್ಥಿತಿ ಸುಧಾರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ. ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳನ್ನು ಪೊಲೀಸರು ಚದುರಿಸಿದ್ದಾರೆ. ಲಾಠಿಚಾರ್ಜ್​ ಬಳಿಕ ರಸ್ತೆ ಕ್ಲಿಯರ್ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಸಲ್ಮಾನ್​ ಖಾನ್​ ಅವರು ಈದ್​ ದಿನವೇ ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಈ ಸಿನಿಮಾಗೆ ‘ಸಿಕಂದರ್​’ ಎಂದು ಹೆಸರು ಇಡಲಾಗಿದೆ. ಎ.ಆರ್​. ಮುರುಗದಾಸ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. 2025ರ ಈದ್​ ಸಮಯದಲ್ಲಿ ‘ಸಿಕಂದರ್​’ ಚಿತ್ರ ಬಿಡುಗಡೆ ಆಗಲಿದೆ. ಸಾಜಿದ್​ ನಾಡಿಯದ್ವಾಲಾ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್