AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​

ನಟ ಸಲ್ಮಾನ್​ ಖಾನ್​ ಅವರನ್ನು ನೋಡಲು ಬಂದು ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಗಿದೆ. ಪರಿಸ್ಥಿತಿ ಸುಧಾರಿಸಲು ಪೊಲೀಸರಿಂದ ಲಾಠಿಚಾರ್ಜ್​ ಮಾಡಲಾಗಿದೆ. ಕೆಲವು ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳ ಗುಂಪನ್ನು ಪೊಲೀಸರು ಚದುರಿಸಿದ್ದಾರೆ.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​
ಸಲ್ಮಾನ್​ ಖಾನ್​ ಅಭಿಮಾನಿಗಳು
ಮದನ್​ ಕುಮಾರ್​
|

Updated on: Apr 11, 2024 | 7:11 PM

Share

ಎಲ್ಲೆಡೆ ಇಂದು (ಏಪ್ರಿಲ್​ 11) ಈದ್​ (Eid 2024) ಆಚರಣೆ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಹಬ್ಬದ ಆಚರಣೆ ಮಾಡುತ್ತಿದ್ದಾರೆ. ಬಾಲಿವುಡ್​ ಸ್ಟಾರ್​ಗಳಾದ ಸಲ್ಮಾನ್​ ಖಾನ್​ (Salman Khan), ಶಾರುಖ್​ ಖಾನ್​, ಆಮಿರ್​ ಖಾನ್​ ಮುಂತಾದ ನಟರು ಈದ್​ ಆಚರಣೆಯಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿದ್ದ ಅಭಿಮಾನಿಗಳಿಗೆ ಲಾಠಿಯ ರುಚಿ ತೋರಿಸಲಾಗಿದೆ. ಹೌದು, ಸಲ್ಮಾನ್​ ಖಾನ್​ ಅವರ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​ (Lathicharge) ಮಾಡಲಾಗಿದೆ.

ಜನ್ಮದಿನ ಹಾಗೂ ಈದ್​ ಪ್ರಯುಕ್ತ ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರು ತಮ್ಮ ಮನೆಯ ಬಾಲ್ಕನಿಗೆ ಬಂದು ಅಭಿಮಾನಿಗಳಿಗೆ ವಿಶ್​ ಮಾಡುತ್ತಾರೆ. ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ. ಈ ವರ್ಷವೂ ಈದ್​ ಪ್ರಯುಕ್ತ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಬಂದಿದ್ದಾರೆ. ಸಲ್ಮಾನ್​ ಖಾನ್​ ಅವರ ಮನೆ ಎದುರು ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಅವರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ಮುಂಬೈನ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಸಲ್ಮಾನ್​ ಖಾನ್​ ಅಭಿಮಾನಿಗಳು ಜಮಾಯಿಸಿದ್ದರು. ಎಷ್ಟು ಹೊತ್ತು ಕಾದರೂ ಕೂಡ ಸಲ್ಮಾನ್​ ಖಾನ್​ ದರ್ಶನ ನೀಡಲೇ ಇಲ್ಲ. ನೆರೆದಿದ್ದ ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಯಿತು. ಪರಿಸ್ಥಿತಿ ಸುಧಾರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ. ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳನ್ನು ಪೊಲೀಸರು ಚದುರಿಸಿದ್ದಾರೆ. ಲಾಠಿಚಾರ್ಜ್​ ಬಳಿಕ ರಸ್ತೆ ಕ್ಲಿಯರ್ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಸಲ್ಮಾನ್​ ಖಾನ್​ ಅವರು ಈದ್​ ದಿನವೇ ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಈ ಸಿನಿಮಾಗೆ ‘ಸಿಕಂದರ್​’ ಎಂದು ಹೆಸರು ಇಡಲಾಗಿದೆ. ಎ.ಆರ್​. ಮುರುಗದಾಸ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. 2025ರ ಈದ್​ ಸಮಯದಲ್ಲಿ ‘ಸಿಕಂದರ್​’ ಚಿತ್ರ ಬಿಡುಗಡೆ ಆಗಲಿದೆ. ಸಾಜಿದ್​ ನಾಡಿಯದ್ವಾಲಾ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ