AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​

ನಟ ಸಲ್ಮಾನ್​ ಖಾನ್​ ಅವರನ್ನು ನೋಡಲು ಬಂದು ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಗಿದೆ. ಪರಿಸ್ಥಿತಿ ಸುಧಾರಿಸಲು ಪೊಲೀಸರಿಂದ ಲಾಠಿಚಾರ್ಜ್​ ಮಾಡಲಾಗಿದೆ. ಕೆಲವು ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳ ಗುಂಪನ್ನು ಪೊಲೀಸರು ಚದುರಿಸಿದ್ದಾರೆ.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​
ಸಲ್ಮಾನ್​ ಖಾನ್​ ಅಭಿಮಾನಿಗಳು
ಮದನ್​ ಕುಮಾರ್​
|

Updated on: Apr 11, 2024 | 7:11 PM

Share

ಎಲ್ಲೆಡೆ ಇಂದು (ಏಪ್ರಿಲ್​ 11) ಈದ್​ (Eid 2024) ಆಚರಣೆ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಹಬ್ಬದ ಆಚರಣೆ ಮಾಡುತ್ತಿದ್ದಾರೆ. ಬಾಲಿವುಡ್​ ಸ್ಟಾರ್​ಗಳಾದ ಸಲ್ಮಾನ್​ ಖಾನ್​ (Salman Khan), ಶಾರುಖ್​ ಖಾನ್​, ಆಮಿರ್​ ಖಾನ್​ ಮುಂತಾದ ನಟರು ಈದ್​ ಆಚರಣೆಯಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿದ್ದ ಅಭಿಮಾನಿಗಳಿಗೆ ಲಾಠಿಯ ರುಚಿ ತೋರಿಸಲಾಗಿದೆ. ಹೌದು, ಸಲ್ಮಾನ್​ ಖಾನ್​ ಅವರ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​ (Lathicharge) ಮಾಡಲಾಗಿದೆ.

ಜನ್ಮದಿನ ಹಾಗೂ ಈದ್​ ಪ್ರಯುಕ್ತ ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರು ತಮ್ಮ ಮನೆಯ ಬಾಲ್ಕನಿಗೆ ಬಂದು ಅಭಿಮಾನಿಗಳಿಗೆ ವಿಶ್​ ಮಾಡುತ್ತಾರೆ. ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ. ಈ ವರ್ಷವೂ ಈದ್​ ಪ್ರಯುಕ್ತ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಬಂದಿದ್ದಾರೆ. ಸಲ್ಮಾನ್​ ಖಾನ್​ ಅವರ ಮನೆ ಎದುರು ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಅವರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ಮುಂಬೈನ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಸಲ್ಮಾನ್​ ಖಾನ್​ ಅಭಿಮಾನಿಗಳು ಜಮಾಯಿಸಿದ್ದರು. ಎಷ್ಟು ಹೊತ್ತು ಕಾದರೂ ಕೂಡ ಸಲ್ಮಾನ್​ ಖಾನ್​ ದರ್ಶನ ನೀಡಲೇ ಇಲ್ಲ. ನೆರೆದಿದ್ದ ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಯಿತು. ಪರಿಸ್ಥಿತಿ ಸುಧಾರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ. ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳನ್ನು ಪೊಲೀಸರು ಚದುರಿಸಿದ್ದಾರೆ. ಲಾಠಿಚಾರ್ಜ್​ ಬಳಿಕ ರಸ್ತೆ ಕ್ಲಿಯರ್ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಸಲ್ಮಾನ್​ ಖಾನ್​ ಅವರು ಈದ್​ ದಿನವೇ ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಈ ಸಿನಿಮಾಗೆ ‘ಸಿಕಂದರ್​’ ಎಂದು ಹೆಸರು ಇಡಲಾಗಿದೆ. ಎ.ಆರ್​. ಮುರುಗದಾಸ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. 2025ರ ಈದ್​ ಸಮಯದಲ್ಲಿ ‘ಸಿಕಂದರ್​’ ಚಿತ್ರ ಬಿಡುಗಡೆ ಆಗಲಿದೆ. ಸಾಜಿದ್​ ನಾಡಿಯದ್ವಾಲಾ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ