AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​

ನಟ ಸಲ್ಮಾನ್​ ಖಾನ್​ ಅವರನ್ನು ನೋಡಲು ಬಂದು ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಗಿದೆ. ಪರಿಸ್ಥಿತಿ ಸುಧಾರಿಸಲು ಪೊಲೀಸರಿಂದ ಲಾಠಿಚಾರ್ಜ್​ ಮಾಡಲಾಗಿದೆ. ಕೆಲವು ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳ ಗುಂಪನ್ನು ಪೊಲೀಸರು ಚದುರಿಸಿದ್ದಾರೆ.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​
ಸಲ್ಮಾನ್​ ಖಾನ್​ ಅಭಿಮಾನಿಗಳು
ಮದನ್​ ಕುಮಾರ್​
|

Updated on: Apr 11, 2024 | 7:11 PM

Share

ಎಲ್ಲೆಡೆ ಇಂದು (ಏಪ್ರಿಲ್​ 11) ಈದ್​ (Eid 2024) ಆಚರಣೆ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಹಬ್ಬದ ಆಚರಣೆ ಮಾಡುತ್ತಿದ್ದಾರೆ. ಬಾಲಿವುಡ್​ ಸ್ಟಾರ್​ಗಳಾದ ಸಲ್ಮಾನ್​ ಖಾನ್​ (Salman Khan), ಶಾರುಖ್​ ಖಾನ್​, ಆಮಿರ್​ ಖಾನ್​ ಮುಂತಾದ ನಟರು ಈದ್​ ಆಚರಣೆಯಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿದ್ದ ಅಭಿಮಾನಿಗಳಿಗೆ ಲಾಠಿಯ ರುಚಿ ತೋರಿಸಲಾಗಿದೆ. ಹೌದು, ಸಲ್ಮಾನ್​ ಖಾನ್​ ಅವರ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​ (Lathicharge) ಮಾಡಲಾಗಿದೆ.

ಜನ್ಮದಿನ ಹಾಗೂ ಈದ್​ ಪ್ರಯುಕ್ತ ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರು ತಮ್ಮ ಮನೆಯ ಬಾಲ್ಕನಿಗೆ ಬಂದು ಅಭಿಮಾನಿಗಳಿಗೆ ವಿಶ್​ ಮಾಡುತ್ತಾರೆ. ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ. ಈ ವರ್ಷವೂ ಈದ್​ ಪ್ರಯುಕ್ತ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಬಂದಿದ್ದಾರೆ. ಸಲ್ಮಾನ್​ ಖಾನ್​ ಅವರ ಮನೆ ಎದುರು ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಅವರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ಮುಂಬೈನ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಸಲ್ಮಾನ್​ ಖಾನ್​ ಅಭಿಮಾನಿಗಳು ಜಮಾಯಿಸಿದ್ದರು. ಎಷ್ಟು ಹೊತ್ತು ಕಾದರೂ ಕೂಡ ಸಲ್ಮಾನ್​ ಖಾನ್​ ದರ್ಶನ ನೀಡಲೇ ಇಲ್ಲ. ನೆರೆದಿದ್ದ ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಯಿತು. ಪರಿಸ್ಥಿತಿ ಸುಧಾರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ. ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳನ್ನು ಪೊಲೀಸರು ಚದುರಿಸಿದ್ದಾರೆ. ಲಾಠಿಚಾರ್ಜ್​ ಬಳಿಕ ರಸ್ತೆ ಕ್ಲಿಯರ್ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಸಲ್ಮಾನ್​ ಖಾನ್​ ಅವರು ಈದ್​ ದಿನವೇ ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಈ ಸಿನಿಮಾಗೆ ‘ಸಿಕಂದರ್​’ ಎಂದು ಹೆಸರು ಇಡಲಾಗಿದೆ. ಎ.ಆರ್​. ಮುರುಗದಾಸ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. 2025ರ ಈದ್​ ಸಮಯದಲ್ಲಿ ‘ಸಿಕಂದರ್​’ ಚಿತ್ರ ಬಿಡುಗಡೆ ಆಗಲಿದೆ. ಸಾಜಿದ್​ ನಾಡಿಯದ್ವಾಲಾ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ