AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​

ನಟ ಸಲ್ಮಾನ್​ ಖಾನ್​ ಅವರನ್ನು ನೋಡಲು ಬಂದು ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಗಿದೆ. ಪರಿಸ್ಥಿತಿ ಸುಧಾರಿಸಲು ಪೊಲೀಸರಿಂದ ಲಾಠಿಚಾರ್ಜ್​ ಮಾಡಲಾಗಿದೆ. ಕೆಲವು ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳ ಗುಂಪನ್ನು ಪೊಲೀಸರು ಚದುರಿಸಿದ್ದಾರೆ.

ಈದ್​ ದಿನವೇ ಸಲ್ಮಾನ್​ ಖಾನ್​ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​​​
ಸಲ್ಮಾನ್​ ಖಾನ್​ ಅಭಿಮಾನಿಗಳು
ಮದನ್​ ಕುಮಾರ್​
|

Updated on: Apr 11, 2024 | 7:11 PM

Share

ಎಲ್ಲೆಡೆ ಇಂದು (ಏಪ್ರಿಲ್​ 11) ಈದ್​ (Eid 2024) ಆಚರಣೆ ಮಾಡಲಾಗುತ್ತಿದೆ. ಸೆಲೆಬ್ರಿಟಿಗಳು ಕೂಡ ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಹಬ್ಬದ ಆಚರಣೆ ಮಾಡುತ್ತಿದ್ದಾರೆ. ಬಾಲಿವುಡ್​ ಸ್ಟಾರ್​ಗಳಾದ ಸಲ್ಮಾನ್​ ಖಾನ್​ (Salman Khan), ಶಾರುಖ್​ ಖಾನ್​, ಆಮಿರ್​ ಖಾನ್​ ಮುಂತಾದ ನಟರು ಈದ್​ ಆಚರಣೆಯಲ್ಲಿ ಭಾಗಿ ಆಗಿದ್ದಾರೆ. ಅವರನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿದ್ದ ಅಭಿಮಾನಿಗಳಿಗೆ ಲಾಠಿಯ ರುಚಿ ತೋರಿಸಲಾಗಿದೆ. ಹೌದು, ಸಲ್ಮಾನ್​ ಖಾನ್​ ಅವರ ಮನೆ ಎದುರು ಅಭಿಮಾನಿಗಳ ಮೇಲೆ ಲಾಠಿಚಾರ್ಜ್​ (Lathicharge) ಮಾಡಲಾಗಿದೆ.

ಜನ್ಮದಿನ ಹಾಗೂ ಈದ್​ ಪ್ರಯುಕ್ತ ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರು ತಮ್ಮ ಮನೆಯ ಬಾಲ್ಕನಿಗೆ ಬಂದು ಅಭಿಮಾನಿಗಳಿಗೆ ವಿಶ್​ ಮಾಡುತ್ತಾರೆ. ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ. ಈ ವರ್ಷವೂ ಈದ್​ ಪ್ರಯುಕ್ತ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಬಂದಿದ್ದಾರೆ. ಸಲ್ಮಾನ್​ ಖಾನ್​ ಅವರ ಮನೆ ಎದುರು ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಅವರ ಮೇಲೆ ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ.

ಮುಂಬೈನ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಸಲ್ಮಾನ್​ ಖಾನ್​ ಅಭಿಮಾನಿಗಳು ಜಮಾಯಿಸಿದ್ದರು. ಎಷ್ಟು ಹೊತ್ತು ಕಾದರೂ ಕೂಡ ಸಲ್ಮಾನ್​ ಖಾನ್​ ದರ್ಶನ ನೀಡಲೇ ಇಲ್ಲ. ನೆರೆದಿದ್ದ ಅಭಿಮಾನಿಗಳಿಂದ ಟ್ರಾಫಿಕ್​ ಜಾಮ್​ ಉಂಟಾಯಿತು. ಪರಿಸ್ಥಿತಿ ಸುಧಾರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ. ಮಹಿಳೆಯರು ಕೂಡ ಗುಂಪಿನಲ್ಲಿ ಲಾಠಿ ಏಟು ತಿಂದಿದ್ದಾರೆ. ವಾಹನಗಳ ಓಡಾಟಕ್ಕೆ ಅಡ್ದಿಪಡಿಸಿದ ಅಭಿಮಾನಿಗಳನ್ನು ಪೊಲೀಸರು ಚದುರಿಸಿದ್ದಾರೆ. ಲಾಠಿಚಾರ್ಜ್​ ಬಳಿಕ ರಸ್ತೆ ಕ್ಲಿಯರ್ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ಸಲ್ಮಾನ್​ ಖಾನ್​ ಅವರು ಈದ್​ ದಿನವೇ ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಈ ಸಿನಿಮಾಗೆ ‘ಸಿಕಂದರ್​’ ಎಂದು ಹೆಸರು ಇಡಲಾಗಿದೆ. ಎ.ಆರ್​. ಮುರುಗದಾಸ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. 2025ರ ಈದ್​ ಸಮಯದಲ್ಲಿ ‘ಸಿಕಂದರ್​’ ಚಿತ್ರ ಬಿಡುಗಡೆ ಆಗಲಿದೆ. ಸಾಜಿದ್​ ನಾಡಿಯದ್ವಾಲಾ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ