AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕ ಬಾದ್​ಶಾಗೆ ಸೇರಿದ ಬಾರ್​ ಮೇಲೆ ಬಾಂಬ್ ದಾಳಿ

singer Badshah: ಪಂಜಾಬಿ ಗಾಯಕ ಸಿಧು ಮೂಸೆವಾಲ ಅನ್ನು ಕೊಲೆ ಮಾಡಿದ್ದ ಅದೇ ಲಾರೆನ್ಸ್ ಬಿಷ್ಣೋಯಿ ಸಹಚರರು ಈಗ ಖ್ಯಾತ ಪಂಜಾಬಿ ಗಾಯಕ ಬಾದ್​ಶಾಗೆ ಸೇರಿದ ನೈಟ್ ಕ್ಲಬ್, ರೆಸ್ಟೊರೆಂಟ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ.

ಗಾಯಕ ಬಾದ್​ಶಾಗೆ ಸೇರಿದ ಬಾರ್​ ಮೇಲೆ ಬಾಂಬ್ ದಾಳಿ
ಮಂಜುನಾಥ ಸಿ.
|

Updated on:Nov 28, 2024 | 7:38 AM

Share

ಸಲ್ಮಾನ್ ಖಾನ್​ಗೆ ಜೀವನ ಬೆದರಿಕೆ ಹಾಕಿರುವ ಹಾಗೂ ಇತ್ತೀಚೆಗಷ್ಟೆ ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ಧಿಖಿಯನ್ನು ಹತ್ಯೆ ಮಾಡಿರುವ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಸಹಚರರು ಇದೀಗ ಖ್ಯಾತ ಪಂಜಾಬಿ ಗಾಯಕ ಬಾದ್​ಶಾಗೆ ಸೇರಿದ ಬಾರ್ ಮತ್ತು ರೆಸ್ಟೊರೆಂಟ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ಚಂಡೀಘಡದಲ್ಲಿರುವ ಬಾದ್​ಶಾ ಮಾಲೀಕತ್ವದ ಬಾರ್ ಮತ್ತು ರೆಸ್ಟೊರೆಂಟ್ ಮುಂಭಾಗದಲ್ಲಿ ಬಾಂಬ್ ಎಸೆಯಲಾಗಿದೆ. ಆದರೆ ಈ ದಾಳಿಯಲ್ಲಿಯೂ ಯಾರಿಗೂ ಹಾನಿ ಆಗಿಲ್ಲ. ಬಾರ್​ಗೂ ಹಾನಿ ಆಗಿಲ್ಲ.

ಬಾದ್​ಶಾರ ನೈಟ್​ಕ್ಲಬ್, ಚಂಢೀಘಡದ ಸೆಕ್ಟರ್ 26 ರಲ್ಲಿದ್ದು, ಇಲ್ಲಿದೆ ಐಟಿ ಮಂದಿ ಸೇರಿದಂತೆ ಶ್ರೀಮಂತ ಯುವಕ-ಯುವತಿಯರು ಪಾರ್ಟಿ ಮಾಡಲು ಆಗಮಿಸುತ್ತಾರೆ. ನವೆಂಬರ್ 27ರ ಮುಂಜಾನೆ 2:45 ರ ವೇಳೆಗೆ ಬೈಕ್​ನಲ್ಲಿ ಬಂದ ಇಬ್ಬರು ಬಾಂಬ್ ಅನ್ನು ನೈಟ್​ಕ್ಲಬ್ ಮುಂದೆ ಎಸೆದು ಪರಾರಿಯಾಗಿದ್ದಾರೆ. ಲಘು ಬಾಂಬ್​ಗಳನ್ನು ಎಸೆಯಲಾಗಿದ್ದು, ಇದರಿಂದ ಯಾವುದೇ ಹಾನಿ ಆಗಿಲ್ಲ. ಆಸ್ತಿಗೂ ಸಹ ಸಣ್ಣ ಪ್ರಮಾಣದ ಹಾನಿ ಆಗಿದೆ ಅಷ್ಟೆ.

ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯಿಯ ಸಹಚರರೇ ಆಗಿರುವ ಗೋಲ್ಡಿ ಬ್ರಾರ್, ರೋಹಿತ್ ಗದಾರ ಅವರುಗಳು ಹೊತ್ತುಕೊಂಡಿದ್ದಾರೆ. ಈ ಬಗ್ಗೆ ಅವರು ಫೇಸ್​ಬುಕ್ ಪೋಸ್ಟ್ ಸಹ ಹಂಚಿಕೊಂಡಿದ್ದಾರೆ. ಬಾದ್​ಶಾಗೆ ಸೇರಿದ ಡಿಯೋರಾ ರೆಸ್ಟಾರೆಂಟ್ ಮತ್ತು ಸಿವಿಲ್ಲೀ ಬಾರ್​ ಮತ್ತು ಲಾಂಜ್ ಅನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಲಾಗಿದ್ದು, ಈ ಹಿಂದೆ ಬಾದ್​ಶಾ ಬಳಿ ಹಫ್ತಾ ಹಣ ಕೇಳಿದ್ದೆವು ಆದರೆ ಆತ ಕೊಡದೇ ನಿರ್ಲಕ್ಷ್ಯ ಮಾಡಿದ್ದ ಇದೇ ಕಾರಣಕ್ಕೆ ಈ ದಾಳಿ ಮಾಡಲಾಗಿದೆ ಎಂದು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಸಲ್ಮಾನ್ ಖಾನ್, ಲಾರೆನ್ಸ್ ಬಿಷ್ಣೋಯಿಗಿಂತಲೂ ಕ್ರೂರ: ಮಾಜಿ ಗೆಳತಿ

2022 ರಲ್ಲಿ ನಿಧನವಾದ ಗಾಯಕ, ರಾಜಕಾರಣಿ ಸಿಧು ಮೂಸೆವಾಲ ಕೊಲೆಗೆ ಗೋಲ್ಡಿ ಬ್ರಾರ್ ಕಾರಣವಾಗಿದ್ದ. ಇದೀಗ ಇದೇ ವ್ಯಕ್ತಿ ಬಾದ್​ಶಾಗೆ ಸೇರಿದ ಆಸ್ತಿಯ ಮೇಲೆ ಬಾಂಬ್ ದಾಳಿ ಮಾಡಿಸಿದ್ದಾರೆ. ಇದೇ ಗ್ಯಾಂಗ್​ನವರು ಗಾಯಕನ ಹನಿ ಸಿಂಗ್, ಇತ್ತೀಚೆಗೆ ಸ್ಟಾರ್ ಆಗಿರುವ ದಿಲ್ಜೀತ್ ದೊಸ್ಸಾಂಜ್ ಅವರಿಗೂ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 am, Thu, 28 November 24

Follow Us
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್