AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕ ಬಾದ್​ಶಾಗೆ ಸೇರಿದ ಬಾರ್​ ಮೇಲೆ ಬಾಂಬ್ ದಾಳಿ

singer Badshah: ಪಂಜಾಬಿ ಗಾಯಕ ಸಿಧು ಮೂಸೆವಾಲ ಅನ್ನು ಕೊಲೆ ಮಾಡಿದ್ದ ಅದೇ ಲಾರೆನ್ಸ್ ಬಿಷ್ಣೋಯಿ ಸಹಚರರು ಈಗ ಖ್ಯಾತ ಪಂಜಾಬಿ ಗಾಯಕ ಬಾದ್​ಶಾಗೆ ಸೇರಿದ ನೈಟ್ ಕ್ಲಬ್, ರೆಸ್ಟೊರೆಂಟ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ.

ಗಾಯಕ ಬಾದ್​ಶಾಗೆ ಸೇರಿದ ಬಾರ್​ ಮೇಲೆ ಬಾಂಬ್ ದಾಳಿ
ಮಂಜುನಾಥ ಸಿ.
|

Updated on:Nov 28, 2024 | 7:38 AM

Share

ಸಲ್ಮಾನ್ ಖಾನ್​ಗೆ ಜೀವನ ಬೆದರಿಕೆ ಹಾಕಿರುವ ಹಾಗೂ ಇತ್ತೀಚೆಗಷ್ಟೆ ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ಧಿಖಿಯನ್ನು ಹತ್ಯೆ ಮಾಡಿರುವ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಸಹಚರರು ಇದೀಗ ಖ್ಯಾತ ಪಂಜಾಬಿ ಗಾಯಕ ಬಾದ್​ಶಾಗೆ ಸೇರಿದ ಬಾರ್ ಮತ್ತು ರೆಸ್ಟೊರೆಂಟ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ಚಂಡೀಘಡದಲ್ಲಿರುವ ಬಾದ್​ಶಾ ಮಾಲೀಕತ್ವದ ಬಾರ್ ಮತ್ತು ರೆಸ್ಟೊರೆಂಟ್ ಮುಂಭಾಗದಲ್ಲಿ ಬಾಂಬ್ ಎಸೆಯಲಾಗಿದೆ. ಆದರೆ ಈ ದಾಳಿಯಲ್ಲಿಯೂ ಯಾರಿಗೂ ಹಾನಿ ಆಗಿಲ್ಲ. ಬಾರ್​ಗೂ ಹಾನಿ ಆಗಿಲ್ಲ.

ಬಾದ್​ಶಾರ ನೈಟ್​ಕ್ಲಬ್, ಚಂಢೀಘಡದ ಸೆಕ್ಟರ್ 26 ರಲ್ಲಿದ್ದು, ಇಲ್ಲಿದೆ ಐಟಿ ಮಂದಿ ಸೇರಿದಂತೆ ಶ್ರೀಮಂತ ಯುವಕ-ಯುವತಿಯರು ಪಾರ್ಟಿ ಮಾಡಲು ಆಗಮಿಸುತ್ತಾರೆ. ನವೆಂಬರ್ 27ರ ಮುಂಜಾನೆ 2:45 ರ ವೇಳೆಗೆ ಬೈಕ್​ನಲ್ಲಿ ಬಂದ ಇಬ್ಬರು ಬಾಂಬ್ ಅನ್ನು ನೈಟ್​ಕ್ಲಬ್ ಮುಂದೆ ಎಸೆದು ಪರಾರಿಯಾಗಿದ್ದಾರೆ. ಲಘು ಬಾಂಬ್​ಗಳನ್ನು ಎಸೆಯಲಾಗಿದ್ದು, ಇದರಿಂದ ಯಾವುದೇ ಹಾನಿ ಆಗಿಲ್ಲ. ಆಸ್ತಿಗೂ ಸಹ ಸಣ್ಣ ಪ್ರಮಾಣದ ಹಾನಿ ಆಗಿದೆ ಅಷ್ಟೆ.

ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯಿಯ ಸಹಚರರೇ ಆಗಿರುವ ಗೋಲ್ಡಿ ಬ್ರಾರ್, ರೋಹಿತ್ ಗದಾರ ಅವರುಗಳು ಹೊತ್ತುಕೊಂಡಿದ್ದಾರೆ. ಈ ಬಗ್ಗೆ ಅವರು ಫೇಸ್​ಬುಕ್ ಪೋಸ್ಟ್ ಸಹ ಹಂಚಿಕೊಂಡಿದ್ದಾರೆ. ಬಾದ್​ಶಾಗೆ ಸೇರಿದ ಡಿಯೋರಾ ರೆಸ್ಟಾರೆಂಟ್ ಮತ್ತು ಸಿವಿಲ್ಲೀ ಬಾರ್​ ಮತ್ತು ಲಾಂಜ್ ಅನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಲಾಗಿದ್ದು, ಈ ಹಿಂದೆ ಬಾದ್​ಶಾ ಬಳಿ ಹಫ್ತಾ ಹಣ ಕೇಳಿದ್ದೆವು ಆದರೆ ಆತ ಕೊಡದೇ ನಿರ್ಲಕ್ಷ್ಯ ಮಾಡಿದ್ದ ಇದೇ ಕಾರಣಕ್ಕೆ ಈ ದಾಳಿ ಮಾಡಲಾಗಿದೆ ಎಂದು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಸಲ್ಮಾನ್ ಖಾನ್, ಲಾರೆನ್ಸ್ ಬಿಷ್ಣೋಯಿಗಿಂತಲೂ ಕ್ರೂರ: ಮಾಜಿ ಗೆಳತಿ

2022 ರಲ್ಲಿ ನಿಧನವಾದ ಗಾಯಕ, ರಾಜಕಾರಣಿ ಸಿಧು ಮೂಸೆವಾಲ ಕೊಲೆಗೆ ಗೋಲ್ಡಿ ಬ್ರಾರ್ ಕಾರಣವಾಗಿದ್ದ. ಇದೀಗ ಇದೇ ವ್ಯಕ್ತಿ ಬಾದ್​ಶಾಗೆ ಸೇರಿದ ಆಸ್ತಿಯ ಮೇಲೆ ಬಾಂಬ್ ದಾಳಿ ಮಾಡಿಸಿದ್ದಾರೆ. ಇದೇ ಗ್ಯಾಂಗ್​ನವರು ಗಾಯಕನ ಹನಿ ಸಿಂಗ್, ಇತ್ತೀಚೆಗೆ ಸ್ಟಾರ್ ಆಗಿರುವ ದಿಲ್ಜೀತ್ ದೊಸ್ಸಾಂಜ್ ಅವರಿಗೂ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 am, Thu, 28 November 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ