AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಕ ಬಾದ್​ಶಾಗೆ ಸೇರಿದ ಬಾರ್​ ಮೇಲೆ ಬಾಂಬ್ ದಾಳಿ

singer Badshah: ಪಂಜಾಬಿ ಗಾಯಕ ಸಿಧು ಮೂಸೆವಾಲ ಅನ್ನು ಕೊಲೆ ಮಾಡಿದ್ದ ಅದೇ ಲಾರೆನ್ಸ್ ಬಿಷ್ಣೋಯಿ ಸಹಚರರು ಈಗ ಖ್ಯಾತ ಪಂಜಾಬಿ ಗಾಯಕ ಬಾದ್​ಶಾಗೆ ಸೇರಿದ ನೈಟ್ ಕ್ಲಬ್, ರೆಸ್ಟೊರೆಂಟ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ.

ಗಾಯಕ ಬಾದ್​ಶಾಗೆ ಸೇರಿದ ಬಾರ್​ ಮೇಲೆ ಬಾಂಬ್ ದಾಳಿ
ಮಂಜುನಾಥ ಸಿ.
|

Updated on:Nov 28, 2024 | 7:38 AM

Share

ಸಲ್ಮಾನ್ ಖಾನ್​ಗೆ ಜೀವನ ಬೆದರಿಕೆ ಹಾಕಿರುವ ಹಾಗೂ ಇತ್ತೀಚೆಗಷ್ಟೆ ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ಧಿಖಿಯನ್ನು ಹತ್ಯೆ ಮಾಡಿರುವ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಸಹಚರರು ಇದೀಗ ಖ್ಯಾತ ಪಂಜಾಬಿ ಗಾಯಕ ಬಾದ್​ಶಾಗೆ ಸೇರಿದ ಬಾರ್ ಮತ್ತು ರೆಸ್ಟೊರೆಂಟ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ಚಂಡೀಘಡದಲ್ಲಿರುವ ಬಾದ್​ಶಾ ಮಾಲೀಕತ್ವದ ಬಾರ್ ಮತ್ತು ರೆಸ್ಟೊರೆಂಟ್ ಮುಂಭಾಗದಲ್ಲಿ ಬಾಂಬ್ ಎಸೆಯಲಾಗಿದೆ. ಆದರೆ ಈ ದಾಳಿಯಲ್ಲಿಯೂ ಯಾರಿಗೂ ಹಾನಿ ಆಗಿಲ್ಲ. ಬಾರ್​ಗೂ ಹಾನಿ ಆಗಿಲ್ಲ.

ಬಾದ್​ಶಾರ ನೈಟ್​ಕ್ಲಬ್, ಚಂಢೀಘಡದ ಸೆಕ್ಟರ್ 26 ರಲ್ಲಿದ್ದು, ಇಲ್ಲಿದೆ ಐಟಿ ಮಂದಿ ಸೇರಿದಂತೆ ಶ್ರೀಮಂತ ಯುವಕ-ಯುವತಿಯರು ಪಾರ್ಟಿ ಮಾಡಲು ಆಗಮಿಸುತ್ತಾರೆ. ನವೆಂಬರ್ 27ರ ಮುಂಜಾನೆ 2:45 ರ ವೇಳೆಗೆ ಬೈಕ್​ನಲ್ಲಿ ಬಂದ ಇಬ್ಬರು ಬಾಂಬ್ ಅನ್ನು ನೈಟ್​ಕ್ಲಬ್ ಮುಂದೆ ಎಸೆದು ಪರಾರಿಯಾಗಿದ್ದಾರೆ. ಲಘು ಬಾಂಬ್​ಗಳನ್ನು ಎಸೆಯಲಾಗಿದ್ದು, ಇದರಿಂದ ಯಾವುದೇ ಹಾನಿ ಆಗಿಲ್ಲ. ಆಸ್ತಿಗೂ ಸಹ ಸಣ್ಣ ಪ್ರಮಾಣದ ಹಾನಿ ಆಗಿದೆ ಅಷ್ಟೆ.

ಈ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯಿಯ ಸಹಚರರೇ ಆಗಿರುವ ಗೋಲ್ಡಿ ಬ್ರಾರ್, ರೋಹಿತ್ ಗದಾರ ಅವರುಗಳು ಹೊತ್ತುಕೊಂಡಿದ್ದಾರೆ. ಈ ಬಗ್ಗೆ ಅವರು ಫೇಸ್​ಬುಕ್ ಪೋಸ್ಟ್ ಸಹ ಹಂಚಿಕೊಂಡಿದ್ದಾರೆ. ಬಾದ್​ಶಾಗೆ ಸೇರಿದ ಡಿಯೋರಾ ರೆಸ್ಟಾರೆಂಟ್ ಮತ್ತು ಸಿವಿಲ್ಲೀ ಬಾರ್​ ಮತ್ತು ಲಾಂಜ್ ಅನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಲಾಗಿದ್ದು, ಈ ಹಿಂದೆ ಬಾದ್​ಶಾ ಬಳಿ ಹಫ್ತಾ ಹಣ ಕೇಳಿದ್ದೆವು ಆದರೆ ಆತ ಕೊಡದೇ ನಿರ್ಲಕ್ಷ್ಯ ಮಾಡಿದ್ದ ಇದೇ ಕಾರಣಕ್ಕೆ ಈ ದಾಳಿ ಮಾಡಲಾಗಿದೆ ಎಂದು ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಸಲ್ಮಾನ್ ಖಾನ್, ಲಾರೆನ್ಸ್ ಬಿಷ್ಣೋಯಿಗಿಂತಲೂ ಕ್ರೂರ: ಮಾಜಿ ಗೆಳತಿ

2022 ರಲ್ಲಿ ನಿಧನವಾದ ಗಾಯಕ, ರಾಜಕಾರಣಿ ಸಿಧು ಮೂಸೆವಾಲ ಕೊಲೆಗೆ ಗೋಲ್ಡಿ ಬ್ರಾರ್ ಕಾರಣವಾಗಿದ್ದ. ಇದೀಗ ಇದೇ ವ್ಯಕ್ತಿ ಬಾದ್​ಶಾಗೆ ಸೇರಿದ ಆಸ್ತಿಯ ಮೇಲೆ ಬಾಂಬ್ ದಾಳಿ ಮಾಡಿಸಿದ್ದಾರೆ. ಇದೇ ಗ್ಯಾಂಗ್​ನವರು ಗಾಯಕನ ಹನಿ ಸಿಂಗ್, ಇತ್ತೀಚೆಗೆ ಸ್ಟಾರ್ ಆಗಿರುವ ದಿಲ್ಜೀತ್ ದೊಸ್ಸಾಂಜ್ ಅವರಿಗೂ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 am, Thu, 28 November 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್