AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು

ಬಾಬಾ ಸಿದ್ಧಿಕಿ ಸಾವಿನಿಂದಾಗಿ ಸಲ್ಮಾನ್​ ಖಾನ್​ ಮತ್ತು ಅವರ ಆಪ್ತರಿಗೆ ಆತಂಕ ಹೆಚ್ಚಾಗಿದೆ. ಸಿದ್ಧಿಕಿ ಹತ್ಯೆಯ ಹೊಣೆಯನ್ನು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ ಹೊತ್ತುಕೊಂಡಿದೆ. ಅಲ್ಲದೇ ಸಲ್ಮಾನ್​ ಖಾನ್​ ಅವರಿಗೆ ಸಹಾಯ ಮಾಡುವ ಎಲ್ಲರಿಗೂ ಇದೇ ಗತಿ ಎಂಬರ್ಥ ಬರುವ ರೀತಿಯಲ್ಲಿ ಪೋಸ್ಟ್​ ಮಾಡಲಾಗಿದೆ. ಹಾಗಾಗಿ ಸಲ್ಮಾನ್​ ಖಾನ್​ ಅವರ ಆಪ್ತ ಬಳಗಕ್ಕೆ ಚಿಂತೆ ಶುರುವಾಗಿದೆ.

ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು
ಸಲ್ಮಾನ್​ ಖಾನ್​, ಬಾಬಾ ಸಿದ್ಧಿಕಿ
ಮದನ್​ ಕುಮಾರ್​
|

Updated on: Oct 13, 2024 | 8:38 PM

Share

ಸಲ್ಮಾನ್​ ಖಾನ್​ ಮೇಲೆ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಹಗೆ ಸಾಧಿಸುತ್ತಿದ್ದಾನೆ. ಕೃಷ್ಣಮೃಗ ಭೇಟೆಗೆ ಪ್ರತಿಕಾರವಾಗಿ ಸಲ್ಮಾನ್​ ಖಾನ್​ ಹತ್ಯೆ ಮಾಡುವುದಾಗಿ ಲಾರೆನ್ಸ್​ ಬಿಷ್ಣೋಯ್​ ಪಣ ತೊಟ್ಟಿರುವುದು ಗೊತ್ತೇ ಇದೆ. ಕೆಲವು ತಿಂಗಳ ಹಿಂದೆ ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಈಗ ಸಲ್ಮಾನ್ ಖಾನ್ ಅವರ ಆಪ್ತರಾದ ಬಾಬಾ ಸಿದ್ಧಿಕಿ ಹತ್ಯೆ ಮಾಡಲಾಗಿದೆ. ಬಾಬಾ ಸಿದ್ಧಿಕಿ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಪೊಲೀಸರು ಈ ಘಟನೆಯ ತನಿಖೆ ನಡೆಸುತ್ತಿರುವಾಗಲೇ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನವರು ಈ ಹತ್ಯೆಯ ಹೊಣೆ ಹೊತ್ತಿದ್ದಾರೆ.

ಲಾರೆನ್ಸ್​ ಬಿಷ್ಣೋಯ್ಸ್ ಗ್ಯಾಂಗ್​ನವರು ಎನ್ನಲಾದ ವ್ಯಕ್ತಿಗಳಿಂದ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಲಾಗಿದೆ. ಅದರ ಸ್ಕ್ರೀನ್​ ಶಾಟ್​ ವೈರಲ್ ಆಗುತ್ತಿದೆ. ಎಲ್ಲರಿಗೂ ತಿಳಿದಿರುವಂತೆ ಬಾಬಾ ಸಿದ್ಧಿಕಿ ಮತ್ತು ಸಲ್ಮಾನ್​ ಖಾನ್​ ನಡುವೆ ಆಪ್ತ ಒಡನಾಟ ಇತ್ತು. ಅನೇಕ ಸಂದರ್ಭಗಳಲ್ಲಿ ಬಾಬಾ ಸಿದ್ಧಿಕಿ ಮನೆಗೆ ಸಲ್ಲು ತೆರಳಿದ್ದರು. ಸಲ್ಮಾನ್​ ಖಾನ್​ಗೆ ಸಹಾಯ ಮಾಡಿದ್ದಕ್ಕಾಗಿ ಸಿದ್ಧಿಕಿಯ ಹತ್ಯೆ ನಡೆದಂತಿದೆ.

ಫೇಸ್​ಬುಕ್​ ಪೋಸ್ಟ್ ಮೂಲಕ ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಲಾಗಿದೆ. ‘ಸಲ್ಮಾನ್​ ಖಾನ್.. ನಮಗೆ ಈ ಯುದ್ಧ ಬೇಕಿರಲಲ್ಲ. ಆದರೆ ನೀವು ನಮ್ಮ ಸಹೋದರರ ಜೀವಕ್ಕೆ ಹಾನಿ ಮಾಡಿದ್ದೀರಿ. ಒಂದು ಸಮಯದಲ್ಲಿ ಬಾಬಾ ಸಿದ್ಧಿಕಿಗೆ ದಾವುದ್ ಜೊತೆ ಲಿಂಕ್ ಇತ್ತು. ಅನುಜ್ ತಾಪನ್, ದಾವುದ್, ಬಾಲಿವುಡ್, ರಾಜಕೀಯ ಮತ್ತು ಆಸ್ತಿ ಡೀಲ್ ಜೊತೆ ಸಿದ್ಧಿಕಿಗೆ ನಂಟು ಇದ್ದಿದ್ದರಿಂದ ಈ ಸಾವು’ ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಯಾರನ್ನೂ ಭೇಟಿ ಮಾಡಲ್ಲ: ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ನಿರ್ಧಾರ

‘ನಮಗೆ ಯಾರ ಮೇಲೂ ದ್ವೇಷ ಇಲ್ಲ. ಸಲ್ಮಾನ್​ ಖಾನ್ ಮತ್ತು ದಾವುದ್​ ಗ್ಯಾಂಗ್​ಗೆ ಯಾರೇ ಸಹಾಯ ಮಾಡಿದರೂ ಕೂಡ ಇಂಥದ್ದಕ್ಕೆ ಸಿದ್ಧರಾಗಿರಬೇಕು. ನಮ್ಮ ಸಹೋದರರನ್ನು ಕೊಂದರೆ ನಾವು ಪ್ರತಿಕ್ರಿಯಿಸುತ್ತೇವೆ. ಎಂದಿಗೂ ನಾವಾಗಿಯೇ ಮೊದಲು ದಾಳಿ ಮಾಡಿಲ್ಲ. ಜೈ ಶ್ರೀರಾಮ್, ಜೈ ಭಾರತ್​’ ಎಂದು ಬರಹ ಪೂರ್ಣಗೊಳಿಸಲಾಗಿದೆ. ಈ ಬೆದರಿಕೆಯ ಹಿನ್ನೆಲೆಯಲ್ಲಿ ಸಲ್ಮಾನ್​ ಖಾನ್​ ನಿವಾಸದ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಬಾಬಾ ಸಿದ್ಧಿಕಿ ಅವರ ಅಂತ್ಯಕ್ರಿಯೆಯಲ್ಲಿ ಸಲ್ಮಾನ್​ ಖಾನ್​ ಭಾಗಿ ಆಗಿದ್ದಾರೆ. ಸಿನಿಮಾ ಮತ್ತು ಇನ್ನುಳಿದ ಕೆಲಸಗಳಿಗೆ ಸಂಬಂಧಿಸಿದ ಎಲ್ಲ ಮೀಟಿಂಗ್​ಗಳನ್ನು ಅವರು ಕ್ಯಾನ್ಸಲ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್