AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು

ಬಾಬಾ ಸಿದ್ಧಿಕಿ ಸಾವಿನಿಂದಾಗಿ ಸಲ್ಮಾನ್​ ಖಾನ್​ ಮತ್ತು ಅವರ ಆಪ್ತರಿಗೆ ಆತಂಕ ಹೆಚ್ಚಾಗಿದೆ. ಸಿದ್ಧಿಕಿ ಹತ್ಯೆಯ ಹೊಣೆಯನ್ನು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ ಹೊತ್ತುಕೊಂಡಿದೆ. ಅಲ್ಲದೇ ಸಲ್ಮಾನ್​ ಖಾನ್​ ಅವರಿಗೆ ಸಹಾಯ ಮಾಡುವ ಎಲ್ಲರಿಗೂ ಇದೇ ಗತಿ ಎಂಬರ್ಥ ಬರುವ ರೀತಿಯಲ್ಲಿ ಪೋಸ್ಟ್​ ಮಾಡಲಾಗಿದೆ. ಹಾಗಾಗಿ ಸಲ್ಮಾನ್​ ಖಾನ್​ ಅವರ ಆಪ್ತ ಬಳಗಕ್ಕೆ ಚಿಂತೆ ಶುರುವಾಗಿದೆ.

ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು
ಸಲ್ಮಾನ್​ ಖಾನ್​, ಬಾಬಾ ಸಿದ್ಧಿಕಿ
ಮದನ್​ ಕುಮಾರ್​
|

Updated on: Oct 13, 2024 | 8:38 PM

Share

ಸಲ್ಮಾನ್​ ಖಾನ್​ ಮೇಲೆ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಹಗೆ ಸಾಧಿಸುತ್ತಿದ್ದಾನೆ. ಕೃಷ್ಣಮೃಗ ಭೇಟೆಗೆ ಪ್ರತಿಕಾರವಾಗಿ ಸಲ್ಮಾನ್​ ಖಾನ್​ ಹತ್ಯೆ ಮಾಡುವುದಾಗಿ ಲಾರೆನ್ಸ್​ ಬಿಷ್ಣೋಯ್​ ಪಣ ತೊಟ್ಟಿರುವುದು ಗೊತ್ತೇ ಇದೆ. ಕೆಲವು ತಿಂಗಳ ಹಿಂದೆ ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಈಗ ಸಲ್ಮಾನ್ ಖಾನ್ ಅವರ ಆಪ್ತರಾದ ಬಾಬಾ ಸಿದ್ಧಿಕಿ ಹತ್ಯೆ ಮಾಡಲಾಗಿದೆ. ಬಾಬಾ ಸಿದ್ಧಿಕಿ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಪೊಲೀಸರು ಈ ಘಟನೆಯ ತನಿಖೆ ನಡೆಸುತ್ತಿರುವಾಗಲೇ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನವರು ಈ ಹತ್ಯೆಯ ಹೊಣೆ ಹೊತ್ತಿದ್ದಾರೆ.

ಲಾರೆನ್ಸ್​ ಬಿಷ್ಣೋಯ್ಸ್ ಗ್ಯಾಂಗ್​ನವರು ಎನ್ನಲಾದ ವ್ಯಕ್ತಿಗಳಿಂದ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಲಾಗಿದೆ. ಅದರ ಸ್ಕ್ರೀನ್​ ಶಾಟ್​ ವೈರಲ್ ಆಗುತ್ತಿದೆ. ಎಲ್ಲರಿಗೂ ತಿಳಿದಿರುವಂತೆ ಬಾಬಾ ಸಿದ್ಧಿಕಿ ಮತ್ತು ಸಲ್ಮಾನ್​ ಖಾನ್​ ನಡುವೆ ಆಪ್ತ ಒಡನಾಟ ಇತ್ತು. ಅನೇಕ ಸಂದರ್ಭಗಳಲ್ಲಿ ಬಾಬಾ ಸಿದ್ಧಿಕಿ ಮನೆಗೆ ಸಲ್ಲು ತೆರಳಿದ್ದರು. ಸಲ್ಮಾನ್​ ಖಾನ್​ಗೆ ಸಹಾಯ ಮಾಡಿದ್ದಕ್ಕಾಗಿ ಸಿದ್ಧಿಕಿಯ ಹತ್ಯೆ ನಡೆದಂತಿದೆ.

ಫೇಸ್​ಬುಕ್​ ಪೋಸ್ಟ್ ಮೂಲಕ ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಲಾಗಿದೆ. ‘ಸಲ್ಮಾನ್​ ಖಾನ್.. ನಮಗೆ ಈ ಯುದ್ಧ ಬೇಕಿರಲಲ್ಲ. ಆದರೆ ನೀವು ನಮ್ಮ ಸಹೋದರರ ಜೀವಕ್ಕೆ ಹಾನಿ ಮಾಡಿದ್ದೀರಿ. ಒಂದು ಸಮಯದಲ್ಲಿ ಬಾಬಾ ಸಿದ್ಧಿಕಿಗೆ ದಾವುದ್ ಜೊತೆ ಲಿಂಕ್ ಇತ್ತು. ಅನುಜ್ ತಾಪನ್, ದಾವುದ್, ಬಾಲಿವುಡ್, ರಾಜಕೀಯ ಮತ್ತು ಆಸ್ತಿ ಡೀಲ್ ಜೊತೆ ಸಿದ್ಧಿಕಿಗೆ ನಂಟು ಇದ್ದಿದ್ದರಿಂದ ಈ ಸಾವು’ ಎಂದು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಯಾರನ್ನೂ ಭೇಟಿ ಮಾಡಲ್ಲ: ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ನಿರ್ಧಾರ

‘ನಮಗೆ ಯಾರ ಮೇಲೂ ದ್ವೇಷ ಇಲ್ಲ. ಸಲ್ಮಾನ್​ ಖಾನ್ ಮತ್ತು ದಾವುದ್​ ಗ್ಯಾಂಗ್​ಗೆ ಯಾರೇ ಸಹಾಯ ಮಾಡಿದರೂ ಕೂಡ ಇಂಥದ್ದಕ್ಕೆ ಸಿದ್ಧರಾಗಿರಬೇಕು. ನಮ್ಮ ಸಹೋದರರನ್ನು ಕೊಂದರೆ ನಾವು ಪ್ರತಿಕ್ರಿಯಿಸುತ್ತೇವೆ. ಎಂದಿಗೂ ನಾವಾಗಿಯೇ ಮೊದಲು ದಾಳಿ ಮಾಡಿಲ್ಲ. ಜೈ ಶ್ರೀರಾಮ್, ಜೈ ಭಾರತ್​’ ಎಂದು ಬರಹ ಪೂರ್ಣಗೊಳಿಸಲಾಗಿದೆ. ಈ ಬೆದರಿಕೆಯ ಹಿನ್ನೆಲೆಯಲ್ಲಿ ಸಲ್ಮಾನ್​ ಖಾನ್​ ನಿವಾಸದ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಬಾಬಾ ಸಿದ್ಧಿಕಿ ಅವರ ಅಂತ್ಯಕ್ರಿಯೆಯಲ್ಲಿ ಸಲ್ಮಾನ್​ ಖಾನ್​ ಭಾಗಿ ಆಗಿದ್ದಾರೆ. ಸಿನಿಮಾ ಮತ್ತು ಇನ್ನುಳಿದ ಕೆಲಸಗಳಿಗೆ ಸಂಬಂಧಿಸಿದ ಎಲ್ಲ ಮೀಟಿಂಗ್​ಗಳನ್ನು ಅವರು ಕ್ಯಾನ್ಸಲ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!