AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದೊಂದು ಕೆಲಸ ಮಾಡಿದರೆ ಸಲ್ಮಾನ್ ಖಾನ್ ಅನ್ನು ಕ್ಷಮಿಸುತ್ತೇನೆ: ಲಾರೆನ್ಸ್ ಬಿಷ್ಣೊಯಿ

Lawrence Bishnoi: ಲಾರೆನ್ಸ್ ಬಿಷ್ಣೋಯಿ, ಸಲ್ಮಾನ್ ಖಾನ್ ಅನ್ನು ಕೊಂದೇ ತೀರುವುದಾಗಿ ಶಪತ ಮಾಡಿದ್ದಾನೆ. ಆದರೆ ಸಲ್ಮಾನ್ ಖಾನ್ ಆ ಒಂದು ಕೆಲಸ ಮಾಡಿದರೆ ತಾನು ಸಲ್ಮಾನ್ ಅನ್ನು ಕೊಲ್ಲುವ ಪ್ರಯತ್ನ ನಿಲ್ಲಿಸಿಬಿಡುತ್ತೇನೆ ಎಂದು ಹೇಳಿದ್ದಾನೆ.

ಅದೊಂದು ಕೆಲಸ ಮಾಡಿದರೆ ಸಲ್ಮಾನ್ ಖಾನ್ ಅನ್ನು ಕ್ಷಮಿಸುತ್ತೇನೆ: ಲಾರೆನ್ಸ್ ಬಿಷ್ಣೊಯಿ
ಮಂಜುನಾಥ ಸಿ.
|

Updated on: Oct 17, 2024 | 5:21 PM

Share

ಸಲ್ಮಾನ್ ಖಾನ್​ ಆಪ್ತ, ಮಾಜಿ ಶಾಸಕ ಬಾಬಾ ಸಿದ್ಧಿಕಿಯನ್ನು ಕೆಲ ದಿನಗಳ ಹಿಂದಷ್ಟೆ ಮುಂಬೈನಲ್ಲಿ ಕೆಲ ಅಗಂತುಕರು ಹತ್ಯೆ ಮಾಡಿದ್ದಾರೆ. ಈ ಹತ್ಯೆಯ ಹಿಂದೆ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಇದ್ದಾನೆ ಎನ್ನಲಾಗಿದೆ. ಹತ್ಯೆಯ ಜವಾಬ್ದಾರಿ ಹೊತ್ತುಕೊಂಡಿರುವ ಲಾರೆನ್ಸ್ ಬಿಷ್ಣೋಯಿ ತಂಡ ಮುಂದಿನ ಗುರಿ ಸಲ್ಮಾನ್ ಖಾನ್ ಎಂದಿದೆ. 2008 ರಲ್ಲಿ ಮೊದಲ ಬಾರಿಗೆ ಲಾರೆನ್ಸ್ ಬಿಷ್ಣೋಯಿ, ತಾನು ಸಲ್ಮಾನ್ ಖಾನ್ ಅನ್ನು ಕೊಲ್ಲುವುದಾಗಿ ಹೇಳಿದ್ದ. ಅಂದಿನಿಂದ ಇಂದಿನ ವರೆಗೂ ಪ್ರಯತ್ನ ಮಾಡುತ್ತಲೇ ಇದ್ದಾನೆ. ಸಲ್ಮಾನ್ ಖಾನ್ ಅನ್ನು ಕೊಂದೇ ತೀರುತ್ತೇನೆ ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ಆದರೆ ಸಲ್ಮಾನ್ ಖಾನ್ ತಾನು ಹೇಳಿದ ಒಂದು ಕೆಲಸ ಮಾಡಿದರೆ ಆತನನ್ನು ಜೀವಂತ ಬಿಡುವುದಾಗಿ ಹೇಳಿದ್ದಾನೆ.

ಕೆಲ ವರ್ಷಗಳ ಹಿಂದಿನಿಂದಲೂ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯಿ, ಜೈಲಿನ ಒಳಗಿನಿಂದಲೇ ವಿಡಿಯೋ ಕಾಲ್ ಮೂಲಕ ಎಬಿಪಿ ಚಾನೆಲ್​ಗೆ ಸಂದರ್ಶನ ನೀಡಿದ್ದ. ಆ ಸಮಯದಲ್ಲಿ ‘ಸಲ್ಮಾನ್ ಖಾನ್ ಅನ್ನು ಕೊಲ್ಲುವುದೇ ನನ್ನ ಜೀವನದ ಗುರಿ’ ಎಂದಿದ್ದ. ಅದೇ ಸಂದರ್ಶನದಲ್ಲಿ, ಸಂದರ್ಶಕ, ‘ಈ ರಕ್ತಪಾತ ಆಗದೆ ಇರಬೇಕೆಂದರೆ ಸಲ್ಮಾನ್ ಖಾನ್ ಏನು ಮಾಡಬೇಕು? ಹೇಗೆ ಸಲ್ಮಾನ್ ಖಾನ್ ಕ್ಷಮೆ ಕೇಳಬಹುದು?’ ಎಂದು ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ:‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಅದಕ್ಕೆ ಉತ್ತರಿಸಿದ್ದ ಲಾರೆನ್ಸ್ ಬಿಷ್ಣೋಯಿ, ‘ನಮ್ಮ ಬಿಷ್ಣೋಯಿಗಳ ದೇವಾಲಯ ಮುಕ್ತಿಧಾಮ ಮುಕಾಮ್ ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ನೋಕಾ ತೆಹಶಿಲ್​ನಲ್ಲಿದೆ, ಅಲ್ಲಿಗೆ ಹೋಗಿ ಕ್ಷಮೆ ಕೇಳಿ ಬಿಡಲಿ ಸಾಕು. ನನ್ನಿಂದ ತಪ್ಪಾಗಿದೆ, ಆಗದೆಯೂ ಇರಬಹುದು ಆದರೆ ಆರೋಪ ಬಂದಿದೆ. ನನ್ನಿಂದ ಈ ಸಮುದಾಯದ ಮನೋಭಾವನೆಗೆ ಧಕ್ಕೆ ಬಂದಿದೆ ಹಾಗಾಗಿ ಕ್ಷಮೆ ಕೇಳುತ್ತೇನೆ ಎಂದು ಆ ದೇವಸ್ಥಾನದಲ್ಲಿ ನಿಂತು ಹೇಳಲಿ ಸಾಕು, ನಾನು ಆತನನ್ನು ಬಿಟ್ಟುಬಿಡುತ್ತೇನೆ. ಆತನನ್ನು ಕೊಲ್ಲುವ ಪ್ರಯತ್ನ ಮಾಡುವುದಿಲ್ಲ’ ಎಂದಿದ್ದ ಲಾರೆನ್ಸ್ ಬಿಷ್ಣೋಯಿ.

ಬಹುತೇಕರಿಗೆ ತಿಳಿದಿರುವಂತೆ ಸಲ್ಮಾನ್ ಖಾನ್ ಮೇಲೆ ಕೃಷ್ಣಮೃಗವನ್ನು ಕೊಂದ ಆರೋಪ ಇದೆ. ಕೃಷ್ಣಮೃಗ ಬಿಷ್ಣೋಯಿ ಸಮುದಾಯದ ಪಾಲಿಗೆ ದೇವರು. ತಮ್ಮ ದೇವರನ್ನು ಕೊಂದಿದ್ದಾರೆ ಎಂದು ಆರೋಪಿಸಿ ಬಿಷ್ಣೋಯ ಸಮುದಾಯಕ್ಕೆ ಸೇರಿದ ಪಾತಕಿ ಲಾರೆನ್ಸ್ ಬಿಷ್ಣೋಯಿ ಸಲ್ಮಾನ್ ಖಾನ್ ಅನ್ನು ಕೊಲ್ಲುವ ನಿರ್ಣಯ ಮಾಡಿದ್ದ. ಲಾರೆನ್ಸ್ ಬಿಷ್ಣೋಯಿ ಮೊದಲ ಬಾರಿಗೆ 2008 ರಲ್ಲಿ ಈ ಬಗ್ಗೆ ಮಾತನಾಡಿದ್ದ, ಅದಕ್ಕೂ ಮುಂಚೆ ಆತನ ಮೇಲೆ ಹಲವು ಕೊಲೆ, ಬೆದರಿಕೆ ಪ್ರಕರಣಗಳು ದಾಖಲಾಗಿದ್ದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ