ಅದೊಂದು ಕೆಲಸ ಮಾಡಿದರೆ ಸಲ್ಮಾನ್ ಖಾನ್ ಅನ್ನು ಕ್ಷಮಿಸುತ್ತೇನೆ: ಲಾರೆನ್ಸ್ ಬಿಷ್ಣೊಯಿ

Lawrence Bishnoi: ಲಾರೆನ್ಸ್ ಬಿಷ್ಣೋಯಿ, ಸಲ್ಮಾನ್ ಖಾನ್ ಅನ್ನು ಕೊಂದೇ ತೀರುವುದಾಗಿ ಶಪತ ಮಾಡಿದ್ದಾನೆ. ಆದರೆ ಸಲ್ಮಾನ್ ಖಾನ್ ಆ ಒಂದು ಕೆಲಸ ಮಾಡಿದರೆ ತಾನು ಸಲ್ಮಾನ್ ಅನ್ನು ಕೊಲ್ಲುವ ಪ್ರಯತ್ನ ನಿಲ್ಲಿಸಿಬಿಡುತ್ತೇನೆ ಎಂದು ಹೇಳಿದ್ದಾನೆ.

ಅದೊಂದು ಕೆಲಸ ಮಾಡಿದರೆ ಸಲ್ಮಾನ್ ಖಾನ್ ಅನ್ನು ಕ್ಷಮಿಸುತ್ತೇನೆ: ಲಾರೆನ್ಸ್ ಬಿಷ್ಣೊಯಿ
Follow us
|

Updated on: Oct 17, 2024 | 5:21 PM

ಸಲ್ಮಾನ್ ಖಾನ್​ ಆಪ್ತ, ಮಾಜಿ ಶಾಸಕ ಬಾಬಾ ಸಿದ್ಧಿಕಿಯನ್ನು ಕೆಲ ದಿನಗಳ ಹಿಂದಷ್ಟೆ ಮುಂಬೈನಲ್ಲಿ ಕೆಲ ಅಗಂತುಕರು ಹತ್ಯೆ ಮಾಡಿದ್ದಾರೆ. ಈ ಹತ್ಯೆಯ ಹಿಂದೆ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಇದ್ದಾನೆ ಎನ್ನಲಾಗಿದೆ. ಹತ್ಯೆಯ ಜವಾಬ್ದಾರಿ ಹೊತ್ತುಕೊಂಡಿರುವ ಲಾರೆನ್ಸ್ ಬಿಷ್ಣೋಯಿ ತಂಡ ಮುಂದಿನ ಗುರಿ ಸಲ್ಮಾನ್ ಖಾನ್ ಎಂದಿದೆ. 2008 ರಲ್ಲಿ ಮೊದಲ ಬಾರಿಗೆ ಲಾರೆನ್ಸ್ ಬಿಷ್ಣೋಯಿ, ತಾನು ಸಲ್ಮಾನ್ ಖಾನ್ ಅನ್ನು ಕೊಲ್ಲುವುದಾಗಿ ಹೇಳಿದ್ದ. ಅಂದಿನಿಂದ ಇಂದಿನ ವರೆಗೂ ಪ್ರಯತ್ನ ಮಾಡುತ್ತಲೇ ಇದ್ದಾನೆ. ಸಲ್ಮಾನ್ ಖಾನ್ ಅನ್ನು ಕೊಂದೇ ತೀರುತ್ತೇನೆ ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ಆದರೆ ಸಲ್ಮಾನ್ ಖಾನ್ ತಾನು ಹೇಳಿದ ಒಂದು ಕೆಲಸ ಮಾಡಿದರೆ ಆತನನ್ನು ಜೀವಂತ ಬಿಡುವುದಾಗಿ ಹೇಳಿದ್ದಾನೆ.

ಕೆಲ ವರ್ಷಗಳ ಹಿಂದಿನಿಂದಲೂ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯಿ, ಜೈಲಿನ ಒಳಗಿನಿಂದಲೇ ವಿಡಿಯೋ ಕಾಲ್ ಮೂಲಕ ಎಬಿಪಿ ಚಾನೆಲ್​ಗೆ ಸಂದರ್ಶನ ನೀಡಿದ್ದ. ಆ ಸಮಯದಲ್ಲಿ ‘ಸಲ್ಮಾನ್ ಖಾನ್ ಅನ್ನು ಕೊಲ್ಲುವುದೇ ನನ್ನ ಜೀವನದ ಗುರಿ’ ಎಂದಿದ್ದ. ಅದೇ ಸಂದರ್ಶನದಲ್ಲಿ, ಸಂದರ್ಶಕ, ‘ಈ ರಕ್ತಪಾತ ಆಗದೆ ಇರಬೇಕೆಂದರೆ ಸಲ್ಮಾನ್ ಖಾನ್ ಏನು ಮಾಡಬೇಕು? ಹೇಗೆ ಸಲ್ಮಾನ್ ಖಾನ್ ಕ್ಷಮೆ ಕೇಳಬಹುದು?’ ಎಂದು ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ:‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಅದಕ್ಕೆ ಉತ್ತರಿಸಿದ್ದ ಲಾರೆನ್ಸ್ ಬಿಷ್ಣೋಯಿ, ‘ನಮ್ಮ ಬಿಷ್ಣೋಯಿಗಳ ದೇವಾಲಯ ಮುಕ್ತಿಧಾಮ ಮುಕಾಮ್ ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ನೋಕಾ ತೆಹಶಿಲ್​ನಲ್ಲಿದೆ, ಅಲ್ಲಿಗೆ ಹೋಗಿ ಕ್ಷಮೆ ಕೇಳಿ ಬಿಡಲಿ ಸಾಕು. ನನ್ನಿಂದ ತಪ್ಪಾಗಿದೆ, ಆಗದೆಯೂ ಇರಬಹುದು ಆದರೆ ಆರೋಪ ಬಂದಿದೆ. ನನ್ನಿಂದ ಈ ಸಮುದಾಯದ ಮನೋಭಾವನೆಗೆ ಧಕ್ಕೆ ಬಂದಿದೆ ಹಾಗಾಗಿ ಕ್ಷಮೆ ಕೇಳುತ್ತೇನೆ ಎಂದು ಆ ದೇವಸ್ಥಾನದಲ್ಲಿ ನಿಂತು ಹೇಳಲಿ ಸಾಕು, ನಾನು ಆತನನ್ನು ಬಿಟ್ಟುಬಿಡುತ್ತೇನೆ. ಆತನನ್ನು ಕೊಲ್ಲುವ ಪ್ರಯತ್ನ ಮಾಡುವುದಿಲ್ಲ’ ಎಂದಿದ್ದ ಲಾರೆನ್ಸ್ ಬಿಷ್ಣೋಯಿ.

ಬಹುತೇಕರಿಗೆ ತಿಳಿದಿರುವಂತೆ ಸಲ್ಮಾನ್ ಖಾನ್ ಮೇಲೆ ಕೃಷ್ಣಮೃಗವನ್ನು ಕೊಂದ ಆರೋಪ ಇದೆ. ಕೃಷ್ಣಮೃಗ ಬಿಷ್ಣೋಯಿ ಸಮುದಾಯದ ಪಾಲಿಗೆ ದೇವರು. ತಮ್ಮ ದೇವರನ್ನು ಕೊಂದಿದ್ದಾರೆ ಎಂದು ಆರೋಪಿಸಿ ಬಿಷ್ಣೋಯ ಸಮುದಾಯಕ್ಕೆ ಸೇರಿದ ಪಾತಕಿ ಲಾರೆನ್ಸ್ ಬಿಷ್ಣೋಯಿ ಸಲ್ಮಾನ್ ಖಾನ್ ಅನ್ನು ಕೊಲ್ಲುವ ನಿರ್ಣಯ ಮಾಡಿದ್ದ. ಲಾರೆನ್ಸ್ ಬಿಷ್ಣೋಯಿ ಮೊದಲ ಬಾರಿಗೆ 2008 ರಲ್ಲಿ ಈ ಬಗ್ಗೆ ಮಾತನಾಡಿದ್ದ, ಅದಕ್ಕೂ ಮುಂಚೆ ಆತನ ಮೇಲೆ ಹಲವು ಕೊಲೆ, ಬೆದರಿಕೆ ಪ್ರಕರಣಗಳು ದಾಖಲಾಗಿದ್ದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ