AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಹತ್ಯೆಗೆ ಖರೀದಿ ಆಗಿತ್ತು 4 ಲಕ್ಷ ರೂಪಾಯಿ ಗನ್; ಹೊರಬಿತ್ತು ಶಾಕಿಂಗ್ ನ್ಯೂಸ್

ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣ ಇನ್ನೂ ಕೋರ್ಟ್​ನಲ್ಲಿದೆ. ಈ ಪ್ರಕರಣದಲ್ಲಿ ಹಗೆ ತೀರಿಸಿಕೊಳ್ಳಲು ಲಾರೆನ್ಸ್ ಸಂಚು ರೂಪಿಸಿದ್ದ ಎನ್ನಲಾಗಿದೆ.

ಸಲ್ಮಾನ್ ಖಾನ್ ಹತ್ಯೆಗೆ ಖರೀದಿ ಆಗಿತ್ತು 4 ಲಕ್ಷ ರೂಪಾಯಿ ಗನ್; ಹೊರಬಿತ್ತು ಶಾಕಿಂಗ್ ನ್ಯೂಸ್
ಸಲ್ಮಾನ್ ಖಾನ್
TV9 Web
| Edited By: |

Updated on:Jul 12, 2022 | 10:10 PM

Share

ಗ್ಯಾಂಗ್​​ಸ್ಟರ್​ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಪೊಲೀಸರ ವಶದಲ್ಲಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡುವಲ್ಲಿ ಈತನ ಕೈವಾಡ ಇದೆ ಎಂದು ಹೇಳಲಾಗಿತ್ತು. ಈ ಕಾರಣಕ್ಕೆ ಲಾರೆನ್ಸ್ ವಿಚಾರಣೆ ಮಾಡಲಾಗುತ್ತಿದೆ. ಸಲ್ಮಾನ್ ಖಾನ್ (Salman Khan) ಅವರನ್ನು ಹತ್ಯೆ ಮಾಡಲು ಈತ ಸಂಚು ರೂಪಿಸಿದ ವಿಚಾರವನ್ನು ಬಿಚ್ಚಿಟ್ಟಿದ್ದಾನೆ. ಇದಕ್ಕಾಗಿ ಆತ 4 ಲಕ್ಷ ರೂಪಾಯಿ ಗನ್ ಕೂಡ ಖರೀದಿ ಮಾಡಿದ್ದ.

1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಅವರು ಸಿನಿಮಾ ತಂಡದ ಕೆಲವರ ಜತೆ ಸಫಾರಿಗೆ ಹೋಗಿದ್ದರು. ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣ ಇನ್ನೂ ಕೋರ್ಟ್​ನಲ್ಲಿದೆ. ಈ ಪ್ರಕರಣದಲ್ಲಿ ಹಗೆ ತೀರಿಸಿಕೊಳ್ಳಲು ಲಾರೆನ್ಸ್ ಸಂಚು ರೂಪಿಸಿದ್ದ ಎನ್ನಲಾಗಿದೆ.

ಬಿಷ್ಣೋಯ್ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದರು.

ಇದನ್ನೂ ಓದಿ
Image
Salman Khan: ಸಲ್ಮಾನ್ ಖಾನ್ ಚಿತ್ರದಲ್ಲಿ 10 ನಾಯಕಿಯರು..!
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ

ಇದನ್ನೂ ಓದಿ: ಸಲ್ಮಾನ್ ಖಾನ್ ‘ಹಿಟ್​ ಆಂಡ್ ರನ್’ ಪ್ರಕರಣವನ್ನು ಹೋಲುವ ‘ಸೆಲ್ಮೋನ್ ಭಾಯಿ’ ಗೇಮ್​ಗೆ ಕೋರ್ಟ್ ತಡೆ; ಏನಿದು ಪ್ರಕರಣ?

2018ರಲ್ಲಿ ಸಲ್ಮಾನ್ ಖಾನ್ ಹತ್ಯೆ ಮಾಡುವಂತೆ ಸಂಪತ್ ನೆಹ್ರಾಗೆ ಲಾರೆನ್ಸ್ ಸೂಚನೆ ನೀಡಿದ್ದ. ಸಂಪತ್​ನನ್ನು ಮುಂಬೈಗೆ ಕಳುಹಿಸಲಾಗಿತ್ತು. ಸಲ್ಮಾನ್ ಖಾನ್ ಮನೆಯ ಸಮೀಪ ಸಂಪತ್ ಸಾಕಷ್ಟು ಸುತ್ತಾಟ ನಡೆಸಿದ್ದ. ಆತನ ಬಳಿ ಸಣ್ಣ ಗನ್ ಮಾತ್ರ ಇತ್ತು. ದೂರದಿಂದ ಈ ಗನ್​ನಲ್ಲಿ ಶೂಟ್​ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ, ದಿನೇಶ್ ದಗಾರ್ ಮೂಲಕ ನಾಲ್ಕು ಲಕ್ಷ ರೂಪಾಯಿ ಗನ್ ಖರೀದಿ ಮಾಡಲಾಗಿತ್ತು. ದಿನೇಶ್ ಬಂಧನದ ವೇಳೆ ಈ ಗನ್ ವಶಕ್ಕೆ ಪಡೆಯಲಾಯಿತು. ಇದನ್ನು ಸಲ್ಮಾನ್ ಖಾನ್ ಹತ್ಯೆ ಮಾಡಲೆಂದೇ ಖರೀದಿ ಮಾಡಲಾಗಿತ್ತು ಎಂಬ ವಿಚಾರ ಈಗ ಗೊತ್ತಾಗಿದೆ.

Published On - 9:45 pm, Tue, 12 July 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ