AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು

Arrest: ನೀಲಿ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದ ದೊಡ್ಡ ಗುಂಪೊಂದನ್ನು ಮುಂಬೈನ ಲೊನಾವ್ಲಾ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಐವರು ಮಹಿಳೆಯರು ಇದ್ದಾರೆ.

ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು
ಮಂಜುನಾಥ ಸಿ.
|

Updated on: Mar 31, 2024 | 9:04 AM

Share

ನೀಲಿ ಚಿತ್ರಗಳ ನಿರ್ಮಾಣದಲ್ಲಿ ತೊಡಗಿದ್ದ ಗುಂಪೊಂದನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ. ಮುಂಬೈ ಬಳಿಯ ಲೊನಾವ್ಲಾನಲ್ಲಿ ಐಶಾರಾಮಿ ವಿಲ್ಲಾ ಒಂದನ್ನು ಬಾಡಿಗೆ ಪಡೆದಿದ್ದ 15 ಜನರ ತಂಡವೊಂದು ಅಲ್ಲಿಯೇ ನೀಲಿ ಚಿತ್ರದ ಶೂಟಿಂಗ್ ನಡೆಸುತ್ತಿತ್ತು. ಈ ಶೂಟಿಂಗ್​ನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿತ್ತು. ಅದರ ಬೆನ್ನತ್ತಿದ ಲೊನಾವ್ಲಾ ಪೊಲೀಸರು ಗುಂಪನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ನೀಲಿ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದ 13 ಜನರನ್ನು ಲೊನಾವ್ಲಾ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಅದರಲ್ಲಿ ಐದು ಮಂದಿ ಯುವತಿಯರು ಸಹ ಇದ್ದಾರೆ.

ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿದ್ದ ಯುವಕರು ಒಟ್ಟಿಗೆ ಸೇರಿ ನೀಲಿ ಚಿತ್ರದ ಶೂಟಿಂಗ್ ಮಾಡುತ್ತಿದ್ದರು. ಐವರು ಯುವತಿಯರನ್ನು ಇದೇ ಕಾರಣಕ್ಕೆ ಬಳಸಿಕೊಳ್ಳಲಾಗಿತ್ತು. ಡಿಜಿಟಲ್ ಫ್ಲಾಟ್​ಫಾರ್ಮ್, ಒಟಿಟಿಗಳಿಗಾಗಿ ಈ ಯುವಕರು ನೀಲಿ ಚಿತ್ರದ ಚಿತ್ರೀಕರಣ ಮಾಡುತ್ತಿದ್ದರು ಎನ್ನಲಾಗಿದೆ. ದಾಳಿ ನಡೆಸಿದ ಪೊಲೀಸರು ಚಿತ್ರೀಕರಣ ಮಾಡಿದ್ದ ಫುಟೇಜ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಡಿಜಿಟಲ್ ಕ್ಯಾಮೆರಾ ಹಾಗೂ ಚಿತ್ರೀಕರಣಕ್ಕೆ ಬಳಸಿದ್ದ ಇನ್ನಿತರೆ ಕೆಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:Manoj Muntashir: ‘ಆದಿಪುರುಷ್​’ ಚಿತ್ರಕ್ಕೆ ಸಂಭಾಷಣೆ ಬರೆದ ಲೇಖಕನಿಗೆ ಕೊಲೆ ಬೆದರಿಕೆ; ಭದ್ರತೆ ನೀಡಿದ ಮುಂಬೈ ಪೊಲೀಸರು

ನೀಲಿ ಚಿತ್ರಗಳ ನಿರ್ಮಾಣಕ್ಕೆ ಭಾರತದಲ್ಲಿ ನಿಷೇಧವಿದೆ. ಇದೇ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಸಹ ಜೈಲು ಸೇರಿದ್ದರು. ಈ ಹಿಂದೆ ಮುಂಬೈನ ಒಂದು ಬಂಗ್ಲೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ನೀಲಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಗುಂಪೊಂದನ್ನು ಬಂಧಿಸಿದ್ದರು. ಆ ನೀಲಿ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದ ರಾಜ್ ಕುಂದ್ರಾ ಅವರನ್ನು ಆ ನಂತರ ಬಂಧಿಸಲಾಯ್ತು. ಭಾರತದಲ್ಲಿ ಚಿತ್ರೀಕರಣ ಮಾಡಿ ಆ ವಿಡಿಯೋವನ್ನು ಹಾಟ್​ಶಾಟ್ಸ್ ಹೆಸರಿನ ಆಪ್​ಗೆ ಲಂಡನ್​ನ ಸಂಸ್ಥೆಯೊಂದರ ಮೂಲಕ ಅಪ್​ಲೋಡ್ ಮಾಡುತ್ತಿದ್ದರಂತೆ ಕುಂದ್ರಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ