AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು

Arrest: ನೀಲಿ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದ ದೊಡ್ಡ ಗುಂಪೊಂದನ್ನು ಮುಂಬೈನ ಲೊನಾವ್ಲಾ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಐವರು ಮಹಿಳೆಯರು ಇದ್ದಾರೆ.

ನೀಲಿ ಚಿತ್ರ ನಿರ್ಮಿಸುತ್ತಿದ್ದ ಗುಂಪು ಬಂಧಿಸಿದ ಪೊಲೀಸರು
ಮಂಜುನಾಥ ಸಿ.
|

Updated on: Mar 31, 2024 | 9:04 AM

Share

ನೀಲಿ ಚಿತ್ರಗಳ ನಿರ್ಮಾಣದಲ್ಲಿ ತೊಡಗಿದ್ದ ಗುಂಪೊಂದನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿದ್ದಾರೆ. ಮುಂಬೈ ಬಳಿಯ ಲೊನಾವ್ಲಾನಲ್ಲಿ ಐಶಾರಾಮಿ ವಿಲ್ಲಾ ಒಂದನ್ನು ಬಾಡಿಗೆ ಪಡೆದಿದ್ದ 15 ಜನರ ತಂಡವೊಂದು ಅಲ್ಲಿಯೇ ನೀಲಿ ಚಿತ್ರದ ಶೂಟಿಂಗ್ ನಡೆಸುತ್ತಿತ್ತು. ಈ ಶೂಟಿಂಗ್​ನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಹ ಆಗಿತ್ತು. ಅದರ ಬೆನ್ನತ್ತಿದ ಲೊನಾವ್ಲಾ ಪೊಲೀಸರು ಗುಂಪನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ನೀಲಿ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದ 13 ಜನರನ್ನು ಲೊನಾವ್ಲಾ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಅದರಲ್ಲಿ ಐದು ಮಂದಿ ಯುವತಿಯರು ಸಹ ಇದ್ದಾರೆ.

ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿದ್ದ ಯುವಕರು ಒಟ್ಟಿಗೆ ಸೇರಿ ನೀಲಿ ಚಿತ್ರದ ಶೂಟಿಂಗ್ ಮಾಡುತ್ತಿದ್ದರು. ಐವರು ಯುವತಿಯರನ್ನು ಇದೇ ಕಾರಣಕ್ಕೆ ಬಳಸಿಕೊಳ್ಳಲಾಗಿತ್ತು. ಡಿಜಿಟಲ್ ಫ್ಲಾಟ್​ಫಾರ್ಮ್, ಒಟಿಟಿಗಳಿಗಾಗಿ ಈ ಯುವಕರು ನೀಲಿ ಚಿತ್ರದ ಚಿತ್ರೀಕರಣ ಮಾಡುತ್ತಿದ್ದರು ಎನ್ನಲಾಗಿದೆ. ದಾಳಿ ನಡೆಸಿದ ಪೊಲೀಸರು ಚಿತ್ರೀಕರಣ ಮಾಡಿದ್ದ ಫುಟೇಜ್ ಅನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಡಿಜಿಟಲ್ ಕ್ಯಾಮೆರಾ ಹಾಗೂ ಚಿತ್ರೀಕರಣಕ್ಕೆ ಬಳಸಿದ್ದ ಇನ್ನಿತರೆ ಕೆಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:Manoj Muntashir: ‘ಆದಿಪುರುಷ್​’ ಚಿತ್ರಕ್ಕೆ ಸಂಭಾಷಣೆ ಬರೆದ ಲೇಖಕನಿಗೆ ಕೊಲೆ ಬೆದರಿಕೆ; ಭದ್ರತೆ ನೀಡಿದ ಮುಂಬೈ ಪೊಲೀಸರು

ನೀಲಿ ಚಿತ್ರಗಳ ನಿರ್ಮಾಣಕ್ಕೆ ಭಾರತದಲ್ಲಿ ನಿಷೇಧವಿದೆ. ಇದೇ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಸಹ ಜೈಲು ಸೇರಿದ್ದರು. ಈ ಹಿಂದೆ ಮುಂಬೈನ ಒಂದು ಬಂಗ್ಲೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ನೀಲಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಗುಂಪೊಂದನ್ನು ಬಂಧಿಸಿದ್ದರು. ಆ ನೀಲಿ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದ ರಾಜ್ ಕುಂದ್ರಾ ಅವರನ್ನು ಆ ನಂತರ ಬಂಧಿಸಲಾಯ್ತು. ಭಾರತದಲ್ಲಿ ಚಿತ್ರೀಕರಣ ಮಾಡಿ ಆ ವಿಡಿಯೋವನ್ನು ಹಾಟ್​ಶಾಟ್ಸ್ ಹೆಸರಿನ ಆಪ್​ಗೆ ಲಂಡನ್​ನ ಸಂಸ್ಥೆಯೊಂದರ ಮೂಲಕ ಅಪ್​ಲೋಡ್ ಮಾಡುತ್ತಿದ್ದರಂತೆ ಕುಂದ್ರಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು