AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿಗೆ ಮುಗಿಯದ ಸಂಕಷ್ಟ; ಚೀಟಿಂಗ್​ ಪ್ರಕರಣದಲ್ಲಿ ಲಖನೌ ಪೊಲೀಸರಿಂದ ನೋಟಿಸ್​

ನಟನೆ ಜೊತೆಗೆ ಶಿಲ್ಪಾ ಶೆಟ್ಟಿ ಅವರು ಫಿನ್ನೆಟ್​ ಕೇಂದ್ರವನ್ನೂ ನಡೆಸುತ್ತಾರೆ. ಇವೋಸಿಸ್​ ವೆಲ್​ನೆಸ್​ ಎಂಬ ಫಿಟ್ನೆಸ್​ ಕೇಂದ್ರವನ್ನು ಅವರು ಹೊಂದಿದ್ದಾರೆ. ಅದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ.

ಶಿಲ್ಪಾ ಶೆಟ್ಟಿಗೆ ಮುಗಿಯದ ಸಂಕಷ್ಟ; ಚೀಟಿಂಗ್​ ಪ್ರಕರಣದಲ್ಲಿ ಲಖನೌ ಪೊಲೀಸರಿಂದ ನೋಟಿಸ್​
ಶಿಲ್ಪಾ ಶೆಟ್ಟಿ
TV9 Web
| Edited By: |

Updated on:Aug 13, 2021 | 2:24 PM

Share

ನಟಿ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಸಂಕಷ್ಟಗಳ ಸರಣಿ ಮುಂದುವರಿದಿದೆ. ಒಂದೆಡೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿ ಪೊಲೀಸರ ಅತಿಥಿ ಆಗಿದ್ದಾರೆ. ಇನ್ನೊಂದೆಡೆ ಶಿಲ್ಪಾ ಶೆಟ್ಟಿ ಹಾಗೂ ಅವರ  ತಾಯಿ ಸುನಂದಾ ಶೆಟ್ಟಿ ಮೇಲೆ ಚೀಟಿಂಗ್​ ಕೇಸ್​ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಶಿಲ್ಪಾಗೆ ನೋಟಿಸ್​ ನೀಡಿದ್ದಾರೆ. ಇಬ್ಬರು ವ್ಯಕ್ತಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಶಿಲ್ಪಾ ಶೆಟ್ಟಿ ಮತ್ತು ಸುನಂದಾ ಶೆಟ್ಟಿ ಈಗ ವಿಚಾರಣೆ ಎದುರಿಸಬೇಕಾಗಿದೆ.

ನಟನೆ ಜೊತೆಗೆ ಶಿಲ್ಪಾ ಶೆಟ್ಟಿ ಅವರು ಫಿನ್ನೆಟ್​ ಕೇಂದ್ರವನ್ನೂ ನಡೆಸುತ್ತಾರೆ. ಇವೋಸಿಸ್​ ವೆಲ್​ನೆಸ್​ ಎಂಬ ಫಿಟ್ನೆಸ್​ ಕೇಂದ್ರವನ್ನು ಅವರು ಹೊಂದಿದ್ದಾರೆ. ಅದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ನಗರಗಳಲ್ಲಿ ಆರಂಭ ಮಾಡುವುದು ಅವರ ಪ್ಲ್ಯಾನ್​. ಹೊಸ ಶಾಖೆ ಆರಂಭಿಸುವುದಾಗಿ ಭರವಸೆ ನೀಡಿ, ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿರುವ ಶಿಲ್ಪಾ ಮತ್ತು ಸುನಂದಾ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಜೋಸ್ನಾ ಚೌಹಾಣ್​ ಮತ್ತು ರೋಹಿತ್​ ವೀರ್​ ಸಿಂಗ್​ ಎಂಬುವವರು ದೂರು ದಾಖಲಿಸಿದ್ದರು. ಲಖನೌನ ಹಜರತ್​ಗಂಜ್​ ಮತ್ತು ವಿಭೂತಿ ಖಂಡ್​​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿತ್ತು. ಈಗ ಲಖನೌ ಪೊಲೀಸರು ಶಿಲ್ಪಾಗೆ ನೋಟಿಸ್​ ನೀಡಿದ್ದಾರೆ.

ಪತಿ ರಾಜ್​ ಕುಂದ್ರಾ ನೀಲಿ ಚಿತ್ರಗಳ ಹಗರಣದಲ್ಲಿ ಸಿಕ್ಕಿ ಬಿದ್ದಿದ್ದರಿಂದ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕವಾಗಿ ತೀವ್ರ ಮುಜುಗರ ಆಗಿದೆ. ಎಷ್ಟೋ ಪ್ರತಿಷ್ಠಿತ ಕಂಪನಿಗಳಿಗೆ ರಾಯಭಾರಿ ಆಗಿದ್ದ ಅವರು ಈಗ ನಷ್ಟ ಅನುಭವಿಸುವಂತಾಗಿದೆ. ಅದರ ಜೊತೆಗೆ ಇಂಥ ಚೀಟಿಂಗ್​ ಕೇಸ್​ ಆರೋಪ ಕೂಡ ಕೇಳಿಬಂದಿರುವುದು ಅವರ ವೃತ್ತಿಜೀವನಕ್ಕೆ ಮುಳುವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಚೀರಾಟ, ಹಾರಾಟ; ಇಂಥ ಪರಿಸ್ಥಿತಿಗೆ ಕಾರಣ ಏನು?

Published On - 2:23 pm, Fri, 13 August 21

Follow Us
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್