AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿಗೆ ಮುಗಿಯದ ಸಂಕಷ್ಟ; ಚೀಟಿಂಗ್​ ಪ್ರಕರಣದಲ್ಲಿ ಲಖನೌ ಪೊಲೀಸರಿಂದ ನೋಟಿಸ್​

ನಟನೆ ಜೊತೆಗೆ ಶಿಲ್ಪಾ ಶೆಟ್ಟಿ ಅವರು ಫಿನ್ನೆಟ್​ ಕೇಂದ್ರವನ್ನೂ ನಡೆಸುತ್ತಾರೆ. ಇವೋಸಿಸ್​ ವೆಲ್​ನೆಸ್​ ಎಂಬ ಫಿಟ್ನೆಸ್​ ಕೇಂದ್ರವನ್ನು ಅವರು ಹೊಂದಿದ್ದಾರೆ. ಅದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ.

ಶಿಲ್ಪಾ ಶೆಟ್ಟಿಗೆ ಮುಗಿಯದ ಸಂಕಷ್ಟ; ಚೀಟಿಂಗ್​ ಪ್ರಕರಣದಲ್ಲಿ ಲಖನೌ ಪೊಲೀಸರಿಂದ ನೋಟಿಸ್​
ಶಿಲ್ಪಾ ಶೆಟ್ಟಿ
TV9 Web
| Edited By: |

Updated on:Aug 13, 2021 | 2:24 PM

Share

ನಟಿ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಸಂಕಷ್ಟಗಳ ಸರಣಿ ಮುಂದುವರಿದಿದೆ. ಒಂದೆಡೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿ ಪೊಲೀಸರ ಅತಿಥಿ ಆಗಿದ್ದಾರೆ. ಇನ್ನೊಂದೆಡೆ ಶಿಲ್ಪಾ ಶೆಟ್ಟಿ ಹಾಗೂ ಅವರ  ತಾಯಿ ಸುನಂದಾ ಶೆಟ್ಟಿ ಮೇಲೆ ಚೀಟಿಂಗ್​ ಕೇಸ್​ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಶಿಲ್ಪಾಗೆ ನೋಟಿಸ್​ ನೀಡಿದ್ದಾರೆ. ಇಬ್ಬರು ವ್ಯಕ್ತಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಶಿಲ್ಪಾ ಶೆಟ್ಟಿ ಮತ್ತು ಸುನಂದಾ ಶೆಟ್ಟಿ ಈಗ ವಿಚಾರಣೆ ಎದುರಿಸಬೇಕಾಗಿದೆ.

ನಟನೆ ಜೊತೆಗೆ ಶಿಲ್ಪಾ ಶೆಟ್ಟಿ ಅವರು ಫಿನ್ನೆಟ್​ ಕೇಂದ್ರವನ್ನೂ ನಡೆಸುತ್ತಾರೆ. ಇವೋಸಿಸ್​ ವೆಲ್​ನೆಸ್​ ಎಂಬ ಫಿಟ್ನೆಸ್​ ಕೇಂದ್ರವನ್ನು ಅವರು ಹೊಂದಿದ್ದಾರೆ. ಅದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ನಗರಗಳಲ್ಲಿ ಆರಂಭ ಮಾಡುವುದು ಅವರ ಪ್ಲ್ಯಾನ್​. ಹೊಸ ಶಾಖೆ ಆರಂಭಿಸುವುದಾಗಿ ಭರವಸೆ ನೀಡಿ, ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿರುವ ಶಿಲ್ಪಾ ಮತ್ತು ಸುನಂದಾ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಜೋಸ್ನಾ ಚೌಹಾಣ್​ ಮತ್ತು ರೋಹಿತ್​ ವೀರ್​ ಸಿಂಗ್​ ಎಂಬುವವರು ದೂರು ದಾಖಲಿಸಿದ್ದರು. ಲಖನೌನ ಹಜರತ್​ಗಂಜ್​ ಮತ್ತು ವಿಭೂತಿ ಖಂಡ್​​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿತ್ತು. ಈಗ ಲಖನೌ ಪೊಲೀಸರು ಶಿಲ್ಪಾಗೆ ನೋಟಿಸ್​ ನೀಡಿದ್ದಾರೆ.

ಪತಿ ರಾಜ್​ ಕುಂದ್ರಾ ನೀಲಿ ಚಿತ್ರಗಳ ಹಗರಣದಲ್ಲಿ ಸಿಕ್ಕಿ ಬಿದ್ದಿದ್ದರಿಂದ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕವಾಗಿ ತೀವ್ರ ಮುಜುಗರ ಆಗಿದೆ. ಎಷ್ಟೋ ಪ್ರತಿಷ್ಠಿತ ಕಂಪನಿಗಳಿಗೆ ರಾಯಭಾರಿ ಆಗಿದ್ದ ಅವರು ಈಗ ನಷ್ಟ ಅನುಭವಿಸುವಂತಾಗಿದೆ. ಅದರ ಜೊತೆಗೆ ಇಂಥ ಚೀಟಿಂಗ್​ ಕೇಸ್​ ಆರೋಪ ಕೂಡ ಕೇಳಿಬಂದಿರುವುದು ಅವರ ವೃತ್ತಿಜೀವನಕ್ಕೆ ಮುಳುವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಚೀರಾಟ, ಹಾರಾಟ; ಇಂಥ ಪರಿಸ್ಥಿತಿಗೆ ಕಾರಣ ಏನು?

Published On - 2:23 pm, Fri, 13 August 21

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?