AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸಾಕಷ್ಟು ಜನರು ಈ ಹಾಡನ್ನು ನೋಡಿ ಸಂತಸ ಪಟ್ಟಿದ್ದಾರೆ. ಅನೇಕರು ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ.

ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು
ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು
TV9 Web
| Edited By: |

Updated on:Aug 05, 2021 | 7:43 PM

Share

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ಅಂದಿನ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಹೆಚ್ಚು ಗಾರಿಕೆ ಅವರದ್ದು. ‘ಆಜಾ ನಚ್ಲೆ​..’ ಸೇರಿ ಸಾಕಷ್ಟು ಸೂಪರ್​ ಹಿಟ್​ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದಾರೆ. ಅವರು ಡ್ಯಾನ್ಸ್​ ಮಾಡಿದ ಹಾಡುಗಳು ಇಂದಿಗೂ ಜನರ ಬಾಯಲ್ಲಿ ಗುನುಗುಡುತ್ತವೆ​. ಈಗ ಟೋಕಿಯೋ ಒಲಂಪಿಕ್​​ನಲ್ಲಿ ಮಾಧುರಿ ದೀಕ್ಷಿತ್​ ಅವರ ‘ಆಜಾ ನಚ್ಲೆ​..’ ಹಾಡು ಮೊಳಗಿದೆ. ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಜಪಾನ್​ನ ಟೋಕಿಯೋದಲ್ಲಿ ಒಲಂಪಿಕ್ಸ್​ ನಡೆಯುತ್ತಿದೆ. ಈ ವೇಳೆ ನಡೆದ ಡುಯೆಟ್​ ಫ್ರೀ ಇವೆಂಟ್​ನಲ್ಲಿ ಇಸ್ರೇಲ್​ನ ಸ್ವಿಮ್ಮರ್​​​​ಗಳಾದ​ ಈಡನ್ ಬ್ಲೆಚರ್ ಮತ್ತು ಶೆಲ್ಲಿ ಬೊಬ್ರಿಟ್​ಸ್ಕೈ ‘ಆಜಾ ನಚ್ಲೆ’ ಹಾಡಿಗೆ ನೀರಿನಲ್ಲಿ ಡ್ಯಾನ್ಸ್​ ಮಾಡಿದ್ದಾರೆ. ಆದರೆ, ಅವರ ಡ್ಯಾನ್ಸ್​ ಜಡ್ಜ್​ಗಳಿಗೆ ಖುಷಿ ನೀಡಿಲ್ಲ. ಆದರೆ, ಭಾರತೀಯರ ಹೃದಯವನ್ನು ಇವರು ಗೆದ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸಾಕಷ್ಟು ಜನರು ಈ ಹಾಡನ್ನು ನೋಡಿ ಸಂತಸ ಪಟ್ಟಿದ್ದಾರೆ. ಅನೇಕರು ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ. ‘ಇಸ್ರೇಲಿಗರೇ ಇದಕ್ಕೆ ಧನ್ಯವಾದ. ಇದನ್ನು ನೋಡಲು ಮತ್ತು ಕೇಳಲು ನಾವು ಎಷ್ಟು ಎಗ್ಸೈಟ್​ ಆಗಿದ್ದೇನೆ ಎನ್ನುವುದು ನಿಮಗೆ ತಿಳಿದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು. ಆಗ ಮಾಧುರಿ ವಯಸ್ಸು ಕೇವಲ 17. ನಂತರ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದ್ದು ‘ತೇಜಾಬ್​’ ಸಿನಿಮಾ ಮೂಲಕ. ಆ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು.

ಇದನ್ನೂ ಓದಿ:  ಮಾಧುರಿ ದೀಕ್ಷಿತ್​ ಜನ್ಮದಿನ; ‘ಏಕ್​ ದೋ ತೀನ್​’ ಸುಂದರಿಗೆ ಈಗ ಎಷ್ಟು ವರ್ಷ?

‘3 ತಿಂಗಳ ವೇತನ ಸೇರಿಸಿದರೂ ಅದನ್ನು ಖರೀದಿಸೋಕಾಗಲ್ಲ’; ಮಾಧುರಿ ದೀಕ್ಷಿತ್ ತೊಟ್ಟ ಲೆಹೆಂಗಾ ಬೆಲೆ ನೋಡಿ ಹೌಹಾರಿದ ಅಭಿಮಾನಿಗಳು

Published On - 7:42 pm, Thu, 5 August 21

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್