AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸಾಕಷ್ಟು ಜನರು ಈ ಹಾಡನ್ನು ನೋಡಿ ಸಂತಸ ಪಟ್ಟಿದ್ದಾರೆ. ಅನೇಕರು ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ.

ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು
ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 05, 2021 | 7:43 PM

Share

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ಅಂದಿನ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಹೆಚ್ಚು ಗಾರಿಕೆ ಅವರದ್ದು. ‘ಆಜಾ ನಚ್ಲೆ​..’ ಸೇರಿ ಸಾಕಷ್ಟು ಸೂಪರ್​ ಹಿಟ್​ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದಾರೆ. ಅವರು ಡ್ಯಾನ್ಸ್​ ಮಾಡಿದ ಹಾಡುಗಳು ಇಂದಿಗೂ ಜನರ ಬಾಯಲ್ಲಿ ಗುನುಗುಡುತ್ತವೆ​. ಈಗ ಟೋಕಿಯೋ ಒಲಂಪಿಕ್​​ನಲ್ಲಿ ಮಾಧುರಿ ದೀಕ್ಷಿತ್​ ಅವರ ‘ಆಜಾ ನಚ್ಲೆ​..’ ಹಾಡು ಮೊಳಗಿದೆ. ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಜಪಾನ್​ನ ಟೋಕಿಯೋದಲ್ಲಿ ಒಲಂಪಿಕ್ಸ್​ ನಡೆಯುತ್ತಿದೆ. ಈ ವೇಳೆ ನಡೆದ ಡುಯೆಟ್​ ಫ್ರೀ ಇವೆಂಟ್​ನಲ್ಲಿ ಇಸ್ರೇಲ್​ನ ಸ್ವಿಮ್ಮರ್​​​​ಗಳಾದ​ ಈಡನ್ ಬ್ಲೆಚರ್ ಮತ್ತು ಶೆಲ್ಲಿ ಬೊಬ್ರಿಟ್​ಸ್ಕೈ ‘ಆಜಾ ನಚ್ಲೆ’ ಹಾಡಿಗೆ ನೀರಿನಲ್ಲಿ ಡ್ಯಾನ್ಸ್​ ಮಾಡಿದ್ದಾರೆ. ಆದರೆ, ಅವರ ಡ್ಯಾನ್ಸ್​ ಜಡ್ಜ್​ಗಳಿಗೆ ಖುಷಿ ನೀಡಿಲ್ಲ. ಆದರೆ, ಭಾರತೀಯರ ಹೃದಯವನ್ನು ಇವರು ಗೆದ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸಾಕಷ್ಟು ಜನರು ಈ ಹಾಡನ್ನು ನೋಡಿ ಸಂತಸ ಪಟ್ಟಿದ್ದಾರೆ. ಅನೇಕರು ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ. ‘ಇಸ್ರೇಲಿಗರೇ ಇದಕ್ಕೆ ಧನ್ಯವಾದ. ಇದನ್ನು ನೋಡಲು ಮತ್ತು ಕೇಳಲು ನಾವು ಎಷ್ಟು ಎಗ್ಸೈಟ್​ ಆಗಿದ್ದೇನೆ ಎನ್ನುವುದು ನಿಮಗೆ ತಿಳಿದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು. ಆಗ ಮಾಧುರಿ ವಯಸ್ಸು ಕೇವಲ 17. ನಂತರ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದ್ದು ‘ತೇಜಾಬ್​’ ಸಿನಿಮಾ ಮೂಲಕ. ಆ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು.

ಇದನ್ನೂ ಓದಿ:  ಮಾಧುರಿ ದೀಕ್ಷಿತ್​ ಜನ್ಮದಿನ; ‘ಏಕ್​ ದೋ ತೀನ್​’ ಸುಂದರಿಗೆ ಈಗ ಎಷ್ಟು ವರ್ಷ?

‘3 ತಿಂಗಳ ವೇತನ ಸೇರಿಸಿದರೂ ಅದನ್ನು ಖರೀದಿಸೋಕಾಗಲ್ಲ’; ಮಾಧುರಿ ದೀಕ್ಷಿತ್ ತೊಟ್ಟ ಲೆಹೆಂಗಾ ಬೆಲೆ ನೋಡಿ ಹೌಹಾರಿದ ಅಭಿಮಾನಿಗಳು

Published On - 7:42 pm, Thu, 5 August 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ