AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸಾಕಷ್ಟು ಜನರು ಈ ಹಾಡನ್ನು ನೋಡಿ ಸಂತಸ ಪಟ್ಟಿದ್ದಾರೆ. ಅನೇಕರು ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ.

ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು
ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು
TV9 Web
| Edited By: |

Updated on:Aug 05, 2021 | 7:43 PM

Share

ಬಾಲಿವುಡ್​ ಚಿತ್ರರಂಗ ಕಂಡ ಅಪ್ರತಿಮ ಕಲಾವಿದೆ ಮಾಧುರಿ ದೀಕ್ಷಿತ್​. ಅಂದಿನ ಕಾಲದಲ್ಲಿ ಕೋಟ್ಯಂತರ ಅಭಿಮಾನಿಗಳ ಹೃದಯ ಕದ್ದ ಹೆಚ್ಚು ಗಾರಿಕೆ ಅವರದ್ದು. ‘ಆಜಾ ನಚ್ಲೆ​..’ ಸೇರಿ ಸಾಕಷ್ಟು ಸೂಪರ್​ ಹಿಟ್​ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದಾರೆ. ಅವರು ಡ್ಯಾನ್ಸ್​ ಮಾಡಿದ ಹಾಡುಗಳು ಇಂದಿಗೂ ಜನರ ಬಾಯಲ್ಲಿ ಗುನುಗುಡುತ್ತವೆ​. ಈಗ ಟೋಕಿಯೋ ಒಲಂಪಿಕ್​​ನಲ್ಲಿ ಮಾಧುರಿ ದೀಕ್ಷಿತ್​ ಅವರ ‘ಆಜಾ ನಚ್ಲೆ​..’ ಹಾಡು ಮೊಳಗಿದೆ. ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಜಪಾನ್​ನ ಟೋಕಿಯೋದಲ್ಲಿ ಒಲಂಪಿಕ್ಸ್​ ನಡೆಯುತ್ತಿದೆ. ಈ ವೇಳೆ ನಡೆದ ಡುಯೆಟ್​ ಫ್ರೀ ಇವೆಂಟ್​ನಲ್ಲಿ ಇಸ್ರೇಲ್​ನ ಸ್ವಿಮ್ಮರ್​​​​ಗಳಾದ​ ಈಡನ್ ಬ್ಲೆಚರ್ ಮತ್ತು ಶೆಲ್ಲಿ ಬೊಬ್ರಿಟ್​ಸ್ಕೈ ‘ಆಜಾ ನಚ್ಲೆ’ ಹಾಡಿಗೆ ನೀರಿನಲ್ಲಿ ಡ್ಯಾನ್ಸ್​ ಮಾಡಿದ್ದಾರೆ. ಆದರೆ, ಅವರ ಡ್ಯಾನ್ಸ್​ ಜಡ್ಜ್​ಗಳಿಗೆ ಖುಷಿ ನೀಡಿಲ್ಲ. ಆದರೆ, ಭಾರತೀಯರ ಹೃದಯವನ್ನು ಇವರು ಗೆದ್ದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸಾಕಷ್ಟು ಜನರು ಈ ಹಾಡನ್ನು ನೋಡಿ ಸಂತಸ ಪಟ್ಟಿದ್ದಾರೆ. ಅನೇಕರು ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಬರೆದುಕೊಂಡಿದ್ದಾರೆ. ‘ಇಸ್ರೇಲಿಗರೇ ಇದಕ್ಕೆ ಧನ್ಯವಾದ. ಇದನ್ನು ನೋಡಲು ಮತ್ತು ಕೇಳಲು ನಾವು ಎಷ್ಟು ಎಗ್ಸೈಟ್​ ಆಗಿದ್ದೇನೆ ಎನ್ನುವುದು ನಿಮಗೆ ತಿಳಿದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ.

1984ರಲ್ಲಿ ‘ಅಬೋದ್’​ ಸಿನಿಮಾ ಮೂಲಕ ಮಾಧುರಿ ದೀಕ್ಷಿತ್​ ಅವರು ಬಾಲಿವುಡ್​ಗೆ ಕಾಲಿಟ್ಟರು. ಆರಂಭದಲ್ಲೇ ತಮ್ಮ ನಟನೆ ಮೂಲಕ ಅವರು ಗಮನ ಸೆಳೆದರು. ಆಗ ಮಾಧುರಿ ವಯಸ್ಸು ಕೇವಲ 17. ನಂತರ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದ್ದು ‘ತೇಜಾಬ್​’ ಸಿನಿಮಾ ಮೂಲಕ. ಆ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಆ ಮೂಲಕ ಮಾಧುರಿ ದೀಕ್ಷಿತ್​ ದೇಶಾದ್ಯಂತ ಖ್ಯಾತಿ ಗಳಿಸಿದರು.

ಇದನ್ನೂ ಓದಿ:  ಮಾಧುರಿ ದೀಕ್ಷಿತ್​ ಜನ್ಮದಿನ; ‘ಏಕ್​ ದೋ ತೀನ್​’ ಸುಂದರಿಗೆ ಈಗ ಎಷ್ಟು ವರ್ಷ?

‘3 ತಿಂಗಳ ವೇತನ ಸೇರಿಸಿದರೂ ಅದನ್ನು ಖರೀದಿಸೋಕಾಗಲ್ಲ’; ಮಾಧುರಿ ದೀಕ್ಷಿತ್ ತೊಟ್ಟ ಲೆಹೆಂಗಾ ಬೆಲೆ ನೋಡಿ ಹೌಹಾರಿದ ಅಭಿಮಾನಿಗಳು

Published On - 7:42 pm, Thu, 5 August 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ