AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಸ್ಪರ್ಧೆ? ನಟಿಯಿಂದಲೇ ಸಿಕ್ಕಿತು ಸ್ಪಷ್ಟನೆ

ಮಾಧುರಿ ದೀಕ್ಷಿತ್ ಅವರು ರಾಜಕೀಯಕ್ಕೆ ಬರುತ್ತಾರೆ, ಮುಂಬೈನ ಒಂದು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ಜೋರಾಗಿದೆ. ರಾಜಕೀಯ ಸೇರುವುದರ ಕುರಿತು ತಮ್ಮ ನಿಲುವು ಏನು ಎನ್ನುವ ಬಗ್ಗೆ ಮಾತನಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಸ್ಪರ್ಧೆ? ನಟಿಯಿಂದಲೇ ಸಿಕ್ಕಿತು ಸ್ಪಷ್ಟನೆ
ಮಾಧುರಿ ದೀಕ್ಷಿತ್
ರಾಜೇಶ್ ದುಗ್ಗುಮನೆ
|

Updated on:Dec 28, 2023 | 10:23 AM

Share

ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಎಲ್ಲಾ ಪಕ್ಷಗಳು ಇದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಮಾಧುರಿ ದೀಕ್ಷಿತ್ ಅವರು ರಾಜಕೀಯಕ್ಕೆ ಬರುತ್ತಾರೆ, ಮುಂಬೈನ ಒಂದು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆ ಜೋರಾಗಿದೆ. ಕೊನೆಗೂ ಈ ಬಗ್ಗೆ ನಡೆದ ಚರ್ಚೆಗಳಿಗೆ ಸ್ವತಃ ಮಾಧುರಿ ದೀಕ್ಷಿತ್ ಉತ್ತರ ನೀಡಿದ್ದಾರೆ. ಮಾಧುರಿ ದೀಕ್ಷಿತ್ (Madhuri Dixit) ತಮ್ಮ ಹೊಸ ಮರಾಠಿ ಚಿತ್ರ ‘ಪಂಚಕ್’ ಪ್ರಚಾರದಲ್ಲಿ ಬ್ಯುಸಿ ಆಗಿದ್ದು, ‘ಟಿವಿ9 ಮರಾಠಿ’ಗೆ ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ರಾಜಕೀಯ ಸೇರುವುದರ ಕುರಿತು ತಮ್ಮ ನಿಲುವು ಏನು ಎನ್ನುವ ಬಗ್ಗೆ ಮಾತನಾಡಿದ್ದಾರೆ.

ಮಾಧುರಿ ದೀಕ್ಷಿತ್​ಗೆ ರಾಜಕೀಯ ಸೇರಲು ಇಷ್ಟ ಇಲ್ಲ. ಅವರು ಸಿನಿಮಾ ರಂಗದಲ್ಲೇ ಮುಂದುವರಿಯಲು ಬಯಸಿದ್ದಾರೆ. ‘ಚುನಾವಣೆ ಸಂದರ್ಭದಲ್ಲಿ ನಾನು ಸ್ಪರ್ಧಿಸುತ್ತೇನೆ ಎನ್ನುವ ಸುದ್ದಿ ಹರಿದಾಡುತ್ತದೆ. ಆದರೆ, ರಾಜಕೀಯ ನನ್ನ ಪ್ಯಾಷನ್ ಅಲ್ಲ. ನನ್ನ ಪಂಚಕ್ ಸಿನಿಮಾ ಯಶಸ್ಸು ಕಂಡರೆ ಮತ್ತೊಂದಷ್ಟು ಸಿನಿಮಾ ಮಾಡಲು ಪ್ರೇರಣೆ ಆಗುತ್ತದೆ’ ಎಂದು ಮಾಧುರಿ ದೀಕ್ಷಿತ್ ಹೇಳಿದ್ದಾರೆ.

ಮಾಧುರಿ ದೀಕ್ಷಿತ್ ಅವರು ತಮ್ಮ ಕುಟುಂಬದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಮಾಧುರಿ ದೀಕ್ಷಿತ್​ಗೆ ಕೊಂಕಣಿ ಬರುತ್ತದೆ ಎನ್ನುವ ಮಾತಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ‘ನನಗೆ ಕೊಂಕಣಿ ಹೆಚ್ಚು ತಿಳಿದಿಲ್ಲ. ಆದರೆ ನನಗೆ ಅರ್ಥವಾಗುತ್ತದೆ. ನನ್ನ ಅಜ್ಜಿ ಕೊಂಕಣಿ ಹಾಡುಗಳನ್ನು ಹಾಡುತ್ತಿದ್ದರು. ನನ್ನ ತಾಯಿ ಮರಾಠಿ ಮಾತನಾಡುತ್ತಿದ್ದರು’ ಎಂದಿದ್ದಾರೆ. ಜನವರಿ 5ರಂದು ‘ಪಂಚಕ್’ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಗೋವಾ ಸಿನಿಮೋತ್ಸವದಲ್ಲಿ ನಟಿ ಮಾಧುರಿ ದೀಕ್ಷಿತ್​ಗೆ ವಿಶೇಷ ಗೌರವ

ಮಾಧುರಿ ದೀಕ್ಷಿತ್​ ಅವರು 1984ರಲ್ಲಿ ಬಾಲಿವುಡ್​ಗೆ ಕಾಲಿಟ್ಟರು. ‘ಅಬೋದ್’ ಅವರ ನಟನೆಯ ಮೊದಲ ಸಿನಿಮಾ. ಆಗಿನ್ನೂ ಅವರಿಗೆ 17 ವರ್ಷ ವಯಸ್ಸು. 1988ರಲ್ಲಿ ರಿಲೀಸ್ ಆದ ‘ತೇಜಾಬ್’ ಸಿನಿಮಾ ಅವರ ಜನಪ್ರಿಯತೆ ಹೆಚ್ಚಿಸಿತು. ಆ ಚಿತ್ರದ ‘ಏಕ್​ ದೋ ತೀನ್​..’ ಹಾಡು ಸೂಪರ್​ ಹಿಟ್​ ಆಯಿತು. ಈ ಹಾಡಲ್ಲಿ ಡ್ಯಾನ್ಸ್ ಮಾಡಿ ಮಾಧುರಿ ಎಲ್ಲರ ಗಮನ ಸೆಳೆದರು. ‘ತೇಜಾಬ್’​ ಚಿತ್ರದ ನಂತರ ಮಾಧುರಿ ​ಅವರ ಸ್ಟಾರ್​ಗಿರಿ ಹೆಎಚ್ಚಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:22 am, Thu, 28 December 23

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ