AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಅವರು ನೃತ್ಯ ಮಾಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ವೈರಲ್ ಆಗಿದೆ.

Madhuri Dixit: ಮಾಧುರಿ ದೀಕ್ಷಿತ್ ನೃತ್ಯಕ್ಕೆ ಫಿದಾ ಆದ ಅಭಿಮಾನಿಗಳು; ವಿಡಿಯೋ ನೋಡಿ
ಮಾಧುರಿ ದೀಕ್ಷಿತ್
TV9 Web
| Edited By: |

Updated on: Nov 24, 2021 | 2:39 PM

Share

ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಸಾಮಾಜಿಕ ಜಾಲತಾಣಗಳ ಮುಖಾಂತರ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇತ್ತೀಚೆಗೆ ಅವರು ಇನ್ಸ್ಟಾಗ್ರಾಂ ಮುಖಾಂತರ ರೀಲ್ಸ್ ಒಂದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಗೆ ಅದು ಖ್ಯಾತ ಹಾಡು ‘ಏಕ್ ದೋ ತೀನ್’ ಹಾಡಿನ ನೃತ್ಯವನ್ನು  ನೆನಪಿಸಿದೆ. ಮೇಘನ್ ಟ್ರೈನರ್​​ ಅವರ ‘ಮಿ ಟೂ’ ಹಾಡಿಗೆ ಮಾಧುರಿ ಹೆಜ್ಜೆ ಹಾಕಿದ್ದು, ಅವರ ಸ್ಟೆಪ್ಸ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯ ಇಂಟರ್​ನೆಟ್​ನಲ್ಲಿ ಮಾಧುರಿ ನೃತ್ಯ ವೈರಲ್ ಆಗಿದ್ದು, ಅಭಿಮಾನಿಗಳಿಗೆ ಇಷ್ಟವಾಗಿದೆ. ತಮ್ಮ ಪೋಸ್ಟ್​ಗೆ ಮಾಧುರಿ ‘ಇಫ್ ಐ ವಾಸ್ ಯೂ’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಸದ್ಯ ಈ ರೀಲ್ ಬಾಲಿವುಡ್ ಸೆಲೆಬ್ರಿಟಿಗಳ ಮನಸ್ಸನ್ನೂ ಗೆದ್ದಿದ್ದು, ಅವರೂ ಕಾಮೆಂಟ್ಸ್ ಮಾಡುತ್ತಿದ್ದಾರೆ. ಸದ್ಯ ವಿಡಿಯೋ 2 ಮಿಲಿಯನ್​ಗೂ ಅಧಿಕ ವೀಕ್ಷಣೆ ಕಂಡಿದೆ.

ಮಾಧುರಿ ಹಂಚಿಕೊಂಡ ವಿಡಿಯೋ ಇಲ್ಲಿದೆ:

ನಟಿ ಮಾಧುರಿ ವಿಡಿಯೋ ರೀಲ್ಸ್ ಮುಖಾಂತರ ಅಭಿಮಾನಿಗಲ ಮನಗೆಲ್ಲುವುದು ಇದೇ ಮೊದಲೇನೂ ಅಲ್ಲ. ಇತ್ತೀಚೆಗಷ್ಟೇ ಅವರು, ಗುಜರಾತಿ ಖಾದ್ಯಗಳ ಎದುರು ಕುಳಿತು ಒಂದು ವಿಡಿಯೋ ಹಂಚಿಕೊಂಡಿದ್ದರು. ಅದೂ ಕೂಡ, ಆಹಾರ ಪ್ರಿಯರ ಮನಗೆದ್ದಿತ್ತು.

ಆ ವಿಡಿಯೋ ಇಲ್ಲಿದೆ:

ಚಿತ್ರಗಳ ವಿಷಯಕ್ಕೆ ಬಂದರೆ ಮಾಧುರಿ ಕೊನೆಯದಾಗಿ ಕಾಣಿಸಿಕೊಂಡಿದ್ದು, 2019ರಲ್ಲಿ ತೆರೆಗೆ ಬಂದ ‘ಕಳಂಕ್’ ಚಿತ್ರದಲ್ಲಿ. ಆ ಚಿತ್ರದಲ್ಲಿ ವರುಣ್ ಧವನ್, ಸೊನಾಕ್ಷಿ ಸಿನ್ಹಾ, ಆದಿತ್ಯ ರಾಯ್ ಕಪೂರ್, ಸಂಜಯ್ ದತ್ ಮೊದಲಾದವರು ಬಣ್ಣ ಹಚ್ಚಿದ್ದರು.

ಇದನ್ನೂ ಓದಿ:

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

ಅದರಿಂದಾದ ಆಘಾತ ಜೀವಮಾನವಿಡೀ ಇರುತ್ತದೆ; ಖಾಸಗಿ ಚಿತ್ರಗಳು ಲೀಕ್ ಆಗಿದ್ದ ಕುರಿತಂತೆ ನೋವು ಹೊರಹಾಕಿದ‌ ಆಸ್ಕರ್ ವಿಜೇತ ನಟಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ