Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಭಮೇಳದ ವೈರಲ್ ಹುಡುಗಿ ಮೊದಲ ಸಿನಿಮಾಗೆ ಕಿರಿಕ್; ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ

ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ಮೊನಾಲಿಸಾ ಅವರ ಲಕ್ ಬದಲಾಗಿದೆ. ಅವರನ್ನು ಚಿತ್ರರಂಗ ಕೈಬೀಸಿ ಕರೆದಿದೆ. ಇನ್ನೇನು ಹೀರೋಯಿನ್ ಆಗಬೇಕು ಎಂಬಷ್ಟರಲ್ಲಿ ಕೆಲವು ಅಡೆತಡೆಗಳು ಉಂಟಾಗಿವೆ. ಅವರ ಸಿನಿಮಾ ಬಗ್ಗೆ ಕೆಲವರಿಂದ ಅಪಪ್ರಚಾರ ಆಗುತ್ತಿದೆ. ಅಂಥವರ ವಿರುದ್ಧ ಸಿನಿಮಾದ ನಿರ್ದೇಶಕರು ದೂರು ನೀಡಿದ್ದಾರೆ.

ಕುಂಭಮೇಳದ ವೈರಲ್ ಹುಡುಗಿ ಮೊದಲ ಸಿನಿಮಾಗೆ ಕಿರಿಕ್; ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ
Monalisa
Follow us
ಮದನ್​ ಕುಮಾರ್​
|

Updated on: Feb 26, 2025 | 5:23 PM

ಮುಂಬೈ, ಫೆಬ್ರವರಿ 26: ಮಹಾಕುಂಭಮೇಳದಲ್ಲಿ ಎಲ್ಲರ ಕಣ್ಣು ಕುಕ್ಕಿದ ಮೊನಾಲಿಸಾ ಅವರ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆದ ಅವರಿಗೆ ಸಿನಿಮಾಗಳಿಂದಲೂ ಆಫರ್​ ಬಂತು. ಆದರೆ ಅವರ ಸಿನಿಮಾಗೆ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ. ಮೊನಾಲಿಸಾ ನಟಿಸಬೇಕಿರುವ ಸಿನಿಮಾದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ಸಿನಿಮಾಗೆ ತೊಂದರೆ ಆಗುತ್ತಿದೆ ಎಂದು ನಿರ್ದೇಶಕರು ಆರೋಪಿಸಿದ್ದಾರೆ. ಹಾಗಾಗಿ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸಿನಿಮಾ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಮೊನಾಲಿಸಾ ನಟಿಸಬೇಕಿರುವ ಸಿನಿಮಾಗೆ ಸನೋಜ್ ಮಿಶ್ರಾ ಅವರು ನಿರ್ದೇಶನ ಮಾಡಲಿದ್ದಾರೆ. ಅವರ ಮೇಲೆ ಕೆಲವು ಯೂಟ್ಯೂಬರ್​ ಗಳು ಇಲ್ಲಸಲ್ಲದ ವಿಡಿಯೋ ಮಾಡಿದ್ದಾರೆ. ಈ ನಿರ್ದೇಶಕ ಮಾಡಿದ ಯಾವ ಸಿನಿಮಾ ಕೂಡ ಈತನಕ ರಿಲೀಸ್ ಆಗಿಲ್ಲ. ಇಂಥವರ ಜೊತೆ 16 ವರ್ಷ ವಯಸ್ಸಿನ ಮೊನಾಲಿಸಾ ಸಿನಿಮಾ ಮಾಡಿದರೆ ಆಕೆಯ ಭವಿಷ್ಯ ಹಾಳಾಗಿ ಹೋಗುತ್ತದೆ ಎಂದು ಆರೋಪ ಮಾಡಿದ್ದಾರೆ.

ಯೂಟ್ಯೂಬ್ ಮೂಲಕ ತಮ್ಮ ಸಿನಿಮಾ ಬಗ್ಗೆ ಈ ರೀತಿ ಅಪಪ್ರಚಾರ ಮಾಡಿದವರ ವಿರುದ್ಧ ಸನೋಜ್ ಮಿಶ್ರಾ ಅವರು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಮುಂಬೈನಲ್ಲಿ ಅವರು ದೂರು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 5 ಜನರ ವಿರುದ್ಧ ಎಫ್​ ಐ ಆರ್​ ದಾಖಲಾಗಿದೆ. ಈ ಐವರು ಮೊನಾಲಿಸಾ ನಟನೆಯ ಸಿನಿಮಾವನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಿರ್ದೇಶಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳದ ಚಲುವೆ ಮೊನಾಲಿಸಾ ಫೋಟೊಗಾಗಿ ಟೆಂಟ್​ಗೆ ನುಗ್ಗಿದ ವ್ಯಕ್ತಿ, ಸಹೋದರನ ಮೇಲೆ ಹಲ್ಲೆ

ಮೊನಾಲಿಸಾ ನಟಿಸಬೇಕಿರುವ ಸಿನಿಮಾಗೆ ‘ದಿ ಡೈರಿ ಆಫ್ ಮಣಿಪುರ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಬಜೆಟ್​​ ವಿಚಾರದಲ್ಲೂ ಗೋಲ್ ಮಾಲ್ ಆಗುತ್ತಿದೆ ಎಂದು ಐವರು ಆರೋಪ ಹೊರಿಸಿದ್ದಾರೆ. ‘ಇವರು ಉದ್ದೇಶಪೂರ್ವಕವಾಗಿಯೇ ನನ್ನ ಸಿನಿಮಾ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊನಾಲಿಸಾ ಸಿನಿಮಾ ಮಾಡುವುದು ಅವರಿಗೆ ಇಷ್ಟ ಇಲ್ಲ’ ಎಂದು ನಿರ್ದೇಶಕರು ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ