AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ವಿರೋಧಿಗಳಿಗೆ ಖಡಕ್​ ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ

‘ಸಲ್ಮಾನ್​ ಖಾನ್​ ಮತ್ತು ಅವರ ಕುಟುಂಬದವರಿಗೆ ಪೂರ್ತಿ ಭದ್ರತೆ ನೀಡಬೇಕು ಎಂದು ನಾನು ಪೊಲೀಸ್​ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಚಿಂತೆ ಮಾಡುವ ಅಗತ್ಯ ಇಲ್ಲ ಎಂದು ಸಲ್ಮಾನ್​ ಖಾನ್​ಗೆ ಹೇಳಿದ್ದೇನೆ. ಸರ್ಕಾರ ಅವರ ಜೊತೆ ಇದೆ. ಇದು ಜನರ ಸರ್ಕಾರ. ಜನರ ರಕ್ಷಣೆ ಮಾಡುವುದು ನಮ್ಮ ಕೆಲಸ. ಅದನ್ನು ನಾವು ಮಾಡುತ್ತೇವೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಸಲ್ಮಾನ್​ ಖಾನ್​ ವಿರೋಧಿಗಳಿಗೆ ಖಡಕ್​ ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ
ಸಲೀಂ ಖಾನ್​, ಏಕನಾಥ್​ ಶಿಂಧೆ, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Apr 16, 2024 | 7:57 PM

Share

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಮಂಗಳವಾರ (ಏಪ್ರಿಲ್​ 16) ಮುಂಬೈನ ಬಾಂದ್ರಾ ನಿವಾಸದಲ್ಲಿ ಬಾಲಿವುಡ್ ಸೂಪರ್‌ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಭಾನುವಾರ (ಏಪ್ರಿಲ್​ 14) ಸಲ್ಮಾನ್​ ಖಾನ್​ ಅವರ ಮನೆಯ (Salman Khan House) ಹೊರಗೆ ನಡೆದ ಗುಂಡಿನ ದಾಳಿಯ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಏಕನಾಥ್ ಶಿಂಧೆ ಭರವಸೆ ನೀಡಿದ್ದಾರೆ. ಈ ವೇಳೆ ಸಲ್ಮಾನ್​ ಖಾನ್​ ತಂದೆ ಸಲೀಂ ಖಾನ್​ ಜೊತೆ ಏಕನಾಥ್​ ಶಿಂಧೆ ಅವರು ಮಾತುಕಥೆ ನಡೆಸಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಸಲ್ಮಾನ್​ ಖಾನ್​ (Salman Khan) ವಿರೋಧಿಗಳಿಗೆ ಖಡಕ್​ ಎಚ್ಚರಿಗೆ ನೀಡಿದ್ದಾರೆ. ಸಲ್ಮಾನ್​ ಖಾನ್​ ನಿವಾಸಕ್ಕೆ ಮಹಾರಾಷ್ಟ್ರ ಸಿಎಂ ಭೇಟಿ ನೀಡಿದ ವಿಡಿಯೋ ವೈರಲ್​ ಆಗಿದೆ.

‘ನಾನು ಸಲ್ಮಾನ್​ ಖಾನ್​ ಅವರನ್ನು ಭೇಟಿ ಮಾಡಿದ್ದೇವೆ. ಅವರ ಜೊತೆ ನಮ್ಮ ಸರ್ಕಾರ ಇದೆ ಎಂದು ಭರವಸೆ ನೀಡಿದ್ದೇನೆ. ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿದ್ದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದು ಮಹಾರಾಷ್ಟ್ರ. ಇಲ್ಲಿ ಯಾವುದೇ ಗ್ಯಾಂಗ್​ ಉಳಿದುಕೊಂಡಿಲ್ಲ. ಎಲ್ಲ ಗ್ಯಾಂಗ್​ ಮತ್ತು ಗೂಂಡಾಗಳನ್ನು ಕಿತ್ತು ಹಾಕುತ್ತೇವೆ. ಇಲ್ಲಿ ಯಾವುದೇ ರೌಡಿಸಂ ಮುಂದುವರಿಯಲು ಬಿಡುವುದಿಲ್ಲ’ ಎಂದು ಏಕನಾಥ್​ ಶಿಂಧೆ ಹೇಳಿದ್ದಾರೆ.

ಸಲ್ಮಾನ್​ ಖಾನ್​ ಅವರಿಗೆ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಬೆದರಿಕೆ ಹಾಕಿದ್ದ. ಆತನನ್ನು ಮಟ್ಟಹಾಕುವುದಾಗಿ ಏಕನಾಥ್​ ಶಿಂಧೆ ಹೇಳಿದ್ದಾರೆ.

‘ಮುಂಬೈನಲ್ಲಿ ಭೂಗತ ಲೋಕ ಅಂತ್ಯವಾಗಿದೆ. ಈ ಬಿಷ್ಣೋಯ್​ ಎಂಬಾತನನ್ನು ನಾವು ಮುಗಿಸುತ್ತೇವೆ. ಮತ್ತೆ ಯಾರೂ ಈ ರೀತಿ ಕೃತ್ಯ ಎಸಗಲು ಧೈರ್ಯ ತೋರಿಸಬಾರದು. ಆ ರೀತಿಯಲ್ಲಿ ಪೊಲೀಸರು ಕೆಲಸ ಮಾಡುತ್ತಾರೆ. ಇಲ್ಲಿ ಯಾರದ್ದೂ ದಾದಾಗಿರಿ ನಡೆಯಲ್ಲ. ಸಲ್ಮಾನ್​ ಖಾನ್​ ಅವರು ದೊಡ್ಡ ಸೆಲೆಬ್ರಿಟಿ. ಸಾಮಾನ್ಯ ನಾಗರಿಕರಿಗೂ ಯಾರಾದರೂ ತೊಂದರೆ ಕೊಟ್ಟರೆ ಸರ್ಕಾರ ಸುಮ್ಮಿರುವುದಿಲ್ಲ.

ಇದನ್ನೂ ಓದಿ: ಗುಂಡಿನ ದಾಳಿ ಬಳಿಕ ಮೊದಲ ಬಾರಿ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್​; ಹೇಳಿಕೆ ಬಿಡುಗಡೆ

ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ವಿರೋಧ ಪಕ್ಷದವರು ಆರೋಪಿಸಿದ್ದಾರೆ. ಅದಕ್ಕೆ ಉತ್ತರಿಸಿದ ಏಕನಾಥ್​ ಶಿಂಧೆ, ‘ಈ ಹಿಂದಿನ ಸರ್ಕಾರಗಳು ಏನೆಲ್ಲ ಮಾಡಿವೆ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಈಗ ಆಗಿರುವ ಗುಂಡಿನ ದಾಳಿಯ ಘಟನೆಯನ್ನೂ ನಾನು ಸಮರ್ಥಿಸಿಕೊಳ್ಳುತ್ತಿಲ್ಲ. ಮುಂಬೈ ಜನರ ಮೇಲೆ ಕೈ ಎತ್ತವ ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ’ ಎಂದು ಏಕನಾಥ್​ ಶಿಂಧೆ ಮಾಧ್ಯಮಗಳ ಎದುರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್