AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ವಿರೋಧಿಗಳಿಗೆ ಖಡಕ್​ ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ

‘ಸಲ್ಮಾನ್​ ಖಾನ್​ ಮತ್ತು ಅವರ ಕುಟುಂಬದವರಿಗೆ ಪೂರ್ತಿ ಭದ್ರತೆ ನೀಡಬೇಕು ಎಂದು ನಾನು ಪೊಲೀಸ್​ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಚಿಂತೆ ಮಾಡುವ ಅಗತ್ಯ ಇಲ್ಲ ಎಂದು ಸಲ್ಮಾನ್​ ಖಾನ್​ಗೆ ಹೇಳಿದ್ದೇನೆ. ಸರ್ಕಾರ ಅವರ ಜೊತೆ ಇದೆ. ಇದು ಜನರ ಸರ್ಕಾರ. ಜನರ ರಕ್ಷಣೆ ಮಾಡುವುದು ನಮ್ಮ ಕೆಲಸ. ಅದನ್ನು ನಾವು ಮಾಡುತ್ತೇವೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಸಲ್ಮಾನ್​ ಖಾನ್​ ವಿರೋಧಿಗಳಿಗೆ ಖಡಕ್​ ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ
ಸಲೀಂ ಖಾನ್​, ಏಕನಾಥ್​ ಶಿಂಧೆ, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Apr 16, 2024 | 7:57 PM

Share

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಮಂಗಳವಾರ (ಏಪ್ರಿಲ್​ 16) ಮುಂಬೈನ ಬಾಂದ್ರಾ ನಿವಾಸದಲ್ಲಿ ಬಾಲಿವುಡ್ ಸೂಪರ್‌ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಭಾನುವಾರ (ಏಪ್ರಿಲ್​ 14) ಸಲ್ಮಾನ್​ ಖಾನ್​ ಅವರ ಮನೆಯ (Salman Khan House) ಹೊರಗೆ ನಡೆದ ಗುಂಡಿನ ದಾಳಿಯ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಏಕನಾಥ್ ಶಿಂಧೆ ಭರವಸೆ ನೀಡಿದ್ದಾರೆ. ಈ ವೇಳೆ ಸಲ್ಮಾನ್​ ಖಾನ್​ ತಂದೆ ಸಲೀಂ ಖಾನ್​ ಜೊತೆ ಏಕನಾಥ್​ ಶಿಂಧೆ ಅವರು ಮಾತುಕಥೆ ನಡೆಸಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಸಲ್ಮಾನ್​ ಖಾನ್​ (Salman Khan) ವಿರೋಧಿಗಳಿಗೆ ಖಡಕ್​ ಎಚ್ಚರಿಗೆ ನೀಡಿದ್ದಾರೆ. ಸಲ್ಮಾನ್​ ಖಾನ್​ ನಿವಾಸಕ್ಕೆ ಮಹಾರಾಷ್ಟ್ರ ಸಿಎಂ ಭೇಟಿ ನೀಡಿದ ವಿಡಿಯೋ ವೈರಲ್​ ಆಗಿದೆ.

‘ನಾನು ಸಲ್ಮಾನ್​ ಖಾನ್​ ಅವರನ್ನು ಭೇಟಿ ಮಾಡಿದ್ದೇವೆ. ಅವರ ಜೊತೆ ನಮ್ಮ ಸರ್ಕಾರ ಇದೆ ಎಂದು ಭರವಸೆ ನೀಡಿದ್ದೇನೆ. ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿದ್ದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದು ಮಹಾರಾಷ್ಟ್ರ. ಇಲ್ಲಿ ಯಾವುದೇ ಗ್ಯಾಂಗ್​ ಉಳಿದುಕೊಂಡಿಲ್ಲ. ಎಲ್ಲ ಗ್ಯಾಂಗ್​ ಮತ್ತು ಗೂಂಡಾಗಳನ್ನು ಕಿತ್ತು ಹಾಕುತ್ತೇವೆ. ಇಲ್ಲಿ ಯಾವುದೇ ರೌಡಿಸಂ ಮುಂದುವರಿಯಲು ಬಿಡುವುದಿಲ್ಲ’ ಎಂದು ಏಕನಾಥ್​ ಶಿಂಧೆ ಹೇಳಿದ್ದಾರೆ.

ಸಲ್ಮಾನ್​ ಖಾನ್​ ಅವರಿಗೆ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಬೆದರಿಕೆ ಹಾಕಿದ್ದ. ಆತನನ್ನು ಮಟ್ಟಹಾಕುವುದಾಗಿ ಏಕನಾಥ್​ ಶಿಂಧೆ ಹೇಳಿದ್ದಾರೆ.

‘ಮುಂಬೈನಲ್ಲಿ ಭೂಗತ ಲೋಕ ಅಂತ್ಯವಾಗಿದೆ. ಈ ಬಿಷ್ಣೋಯ್​ ಎಂಬಾತನನ್ನು ನಾವು ಮುಗಿಸುತ್ತೇವೆ. ಮತ್ತೆ ಯಾರೂ ಈ ರೀತಿ ಕೃತ್ಯ ಎಸಗಲು ಧೈರ್ಯ ತೋರಿಸಬಾರದು. ಆ ರೀತಿಯಲ್ಲಿ ಪೊಲೀಸರು ಕೆಲಸ ಮಾಡುತ್ತಾರೆ. ಇಲ್ಲಿ ಯಾರದ್ದೂ ದಾದಾಗಿರಿ ನಡೆಯಲ್ಲ. ಸಲ್ಮಾನ್​ ಖಾನ್​ ಅವರು ದೊಡ್ಡ ಸೆಲೆಬ್ರಿಟಿ. ಸಾಮಾನ್ಯ ನಾಗರಿಕರಿಗೂ ಯಾರಾದರೂ ತೊಂದರೆ ಕೊಟ್ಟರೆ ಸರ್ಕಾರ ಸುಮ್ಮಿರುವುದಿಲ್ಲ.

ಇದನ್ನೂ ಓದಿ: ಗುಂಡಿನ ದಾಳಿ ಬಳಿಕ ಮೊದಲ ಬಾರಿ ಮನೆಯಿಂದ ಹೊರಬಂದ ಸಲ್ಮಾನ್​ ಖಾನ್​; ಹೇಳಿಕೆ ಬಿಡುಗಡೆ

ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ವಿರೋಧ ಪಕ್ಷದವರು ಆರೋಪಿಸಿದ್ದಾರೆ. ಅದಕ್ಕೆ ಉತ್ತರಿಸಿದ ಏಕನಾಥ್​ ಶಿಂಧೆ, ‘ಈ ಹಿಂದಿನ ಸರ್ಕಾರಗಳು ಏನೆಲ್ಲ ಮಾಡಿವೆ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಈಗ ಆಗಿರುವ ಗುಂಡಿನ ದಾಳಿಯ ಘಟನೆಯನ್ನೂ ನಾನು ಸಮರ್ಥಿಸಿಕೊಳ್ಳುತ್ತಿಲ್ಲ. ಮುಂಬೈ ಜನರ ಮೇಲೆ ಕೈ ಎತ್ತವ ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ’ ಎಂದು ಏಕನಾಥ್​ ಶಿಂಧೆ ಮಾಧ್ಯಮಗಳ ಎದುರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ