AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಗೆ ‘ಮಹಾವತಾರ ನರಸಿಂಹ’ನ ದರ್ಶನ ಮಾಡಿಸಿದ ಹೊಂಬಾಳೆ

ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ತಮ್ಮ ಮೊದಲ ಅನಿಮೇಟೆಡ್ ಚಿತ್ರ ‘ಮಹಾವತಾರ ನರಸಿಂಹ’ನ ಏಪ್ರಿಲ್ 3ರಂದು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದೆ. ನರಸಿಂಹನ ಕಥೆಯನ್ನು ಆಧರಿಸಿದ ಈ ಚಿತ್ರದ ಟೀಸರ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದೆ. 3D ಆವೃತ್ತಿಯಲ್ಲೂ ಲಭ್ಯವಿರುವ ಈ ಚಿತ್ರವನ್ನು ಅಶ್ವಿನ್ ಕುಮಾರ್ ನಿರ್ದೇಶಿಸಿದ್ದಾರೆ.

ಸಂಕ್ರಾಂತಿಗೆ ‘ಮಹಾವತಾರ ನರಸಿಂಹ’ನ ದರ್ಶನ ಮಾಡಿಸಿದ ಹೊಂಬಾಳೆ
ಮಹಾವತಾರ ನರಸಿಂಹ
Follow us
ರಾಜೇಶ್ ದುಗ್ಗುಮನೆ
|

Updated on: Jan 14, 2025 | 2:50 PM

ಹೊಂಬಾಳೆ ಫಿಲ್ಮ್ಸ್​ನವರು ಈವರೆಗೆ ಹಲವು ರೀತಿಯ ಚಿತ್ರಗಳನ್ನು ನೀಡಿದ್ದಾರೆ. ಕಮರ್ಷಿಯಲ್ ಆ್ಯಕ್ಷನ್ ಚಿತ್ರಗಳನ್ನು ಅವರು ಹೆಚ್ಚಾಗಿ ನೀಡಿದ್ದಾರೆ. ಆದರೆ, ಅವರು ಎಂದಿಗೂ ಅನಿಮೇಟೆಡ್ ಸಿನಿಮಾ ಮಾಡುವ ಸಾಹಸಕ್ಕೆ ಕೈ ಹಾಕಿರಲಿಲ್ಲ. ಈಗ ಅಂಥದ್ದೊಂದು ಚಿತ್ರವನ್ನು ಪ್ರಸ್ತುತಪಡಿಸಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ‘ಮಹಾವತಾರ ನರಸಿಂಹ’ ಎಂದು ಹೆಸರಿಡಲಾಗಿದ್ದು, ಸಂಕ್ರಾಂತಿ ಪ್ರಯುಕ್ತ ಟೀಸರ್ ಬಿಡುಗಡೆ ಆಗಿ ಗಮನ ಸೆಳೆದಿದೆ. ಚಿತ್ರದ ರಿಲೀಸ್ ದಿನಾಂಕ ಕೂಡ ರಿವೀಲ್ ಆಗಿದೆ.

ನರಸಿಂಹನ ಕಥೆ ಬಹುತೇಕರಿಗೆ ಗೊತ್ತಿದೆ. ವಿಷ್ಣುವಿನ ಅವತಾರದಲ್ಲಿ ನರಸಿಂಹನ ರೂಪವೂ ಒಂದು. ನರಸಿಂಹನು ಹಿರಣ್ಯ ಕಶಿಪುನ ಸಾಯಿಸುತ್ತಾನೆ. ಇದೇ ಕಥೆಯನ್ನು ಇಟ್ಟುಕೊಂಡು ಹೊಂಬಾಳೆ ಸಿನಿಮಾದವರು ಅನಿಮೇಟೆಡ್ ಸಿನಿಮಾ ಮಾಡಿದ್ದಾರೆ. ಈ ಟೀಸರ್ ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ಬಿಡುಗಡೆ ಕಂಡಿದೆ.

ಹಿರಣ್ಯ ಕಶಿಪು ಮಗ ಪ್ರಹ್ಲಾದ ಸದಾ ಹರಿಯ ಭಜನೆ ಮಾಡುತ್ತಾ ಇರುತ್ತಾನೆ. ಇದರಿಂದ ಸಿಟ್ಟಾಗುವ ಹಿರಣ್ಯ ಕಶಿಪು ‘ನಿನ್ನ ಹರಿ ಈ ಕಂಬದಲ್ಲಿ ಇದ್ದಾನೆಯೇ.. ಈ ಕಂಬದಲ್ಲಿ ಇದ್ದಾನೆಯೇ’ ಎಂದು ಕೇಳುತ್ತಾನೆ. ಆಗ ಕಂಬ ಒಡೆದುಕೊಂಡು ನರಸಿಂಹ ಬರುತ್ತಾನೆ. ಇದನ್ನು ಟೀಸರ್​ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

‘ಮಹಾವತಾರ ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು 3ಡಿ ವರ್ಷನ್​​ನಲ್ಲೂ ಲಭ್ಯವಿದೆ. ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಇದಾಗಿದೆ. ಹೊಂಬಾಳೆಯವರ ಹೊಸ ಪ್ರಯತ್ನಕ್ಕೆ ಮೆಚ್ಚುಗೆ ಸಿಕ್ಕಿದೆ. ಅಶ್ವಿನ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ನಿರ್ಮಾಣ ಮಾಡಿರುವ ಈ ಚಿತ್ರ ಏಪ್ರಿಲ್ 3ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ