AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಗೆ ‘ಮಹಾವತಾರ ನರಸಿಂಹ’ನ ದರ್ಶನ ಮಾಡಿಸಿದ ಹೊಂಬಾಳೆ

ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ತಮ್ಮ ಮೊದಲ ಅನಿಮೇಟೆಡ್ ಚಿತ್ರ ‘ಮಹಾವತಾರ ನರಸಿಂಹ’ನ ಏಪ್ರಿಲ್ 3ರಂದು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದೆ. ನರಸಿಂಹನ ಕಥೆಯನ್ನು ಆಧರಿಸಿದ ಈ ಚಿತ್ರದ ಟೀಸರ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದೆ. 3D ಆವೃತ್ತಿಯಲ್ಲೂ ಲಭ್ಯವಿರುವ ಈ ಚಿತ್ರವನ್ನು ಅಶ್ವಿನ್ ಕುಮಾರ್ ನಿರ್ದೇಶಿಸಿದ್ದಾರೆ.

ಸಂಕ್ರಾಂತಿಗೆ ‘ಮಹಾವತಾರ ನರಸಿಂಹ’ನ ದರ್ಶನ ಮಾಡಿಸಿದ ಹೊಂಬಾಳೆ
ಮಹಾವತಾರ ನರಸಿಂಹ
ರಾಜೇಶ್ ದುಗ್ಗುಮನೆ
|

Updated on: Jan 14, 2025 | 2:50 PM

Share

ಹೊಂಬಾಳೆ ಫಿಲ್ಮ್ಸ್​ನವರು ಈವರೆಗೆ ಹಲವು ರೀತಿಯ ಚಿತ್ರಗಳನ್ನು ನೀಡಿದ್ದಾರೆ. ಕಮರ್ಷಿಯಲ್ ಆ್ಯಕ್ಷನ್ ಚಿತ್ರಗಳನ್ನು ಅವರು ಹೆಚ್ಚಾಗಿ ನೀಡಿದ್ದಾರೆ. ಆದರೆ, ಅವರು ಎಂದಿಗೂ ಅನಿಮೇಟೆಡ್ ಸಿನಿಮಾ ಮಾಡುವ ಸಾಹಸಕ್ಕೆ ಕೈ ಹಾಕಿರಲಿಲ್ಲ. ಈಗ ಅಂಥದ್ದೊಂದು ಚಿತ್ರವನ್ನು ಪ್ರಸ್ತುತಪಡಿಸಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ‘ಮಹಾವತಾರ ನರಸಿಂಹ’ ಎಂದು ಹೆಸರಿಡಲಾಗಿದ್ದು, ಸಂಕ್ರಾಂತಿ ಪ್ರಯುಕ್ತ ಟೀಸರ್ ಬಿಡುಗಡೆ ಆಗಿ ಗಮನ ಸೆಳೆದಿದೆ. ಚಿತ್ರದ ರಿಲೀಸ್ ದಿನಾಂಕ ಕೂಡ ರಿವೀಲ್ ಆಗಿದೆ.

ನರಸಿಂಹನ ಕಥೆ ಬಹುತೇಕರಿಗೆ ಗೊತ್ತಿದೆ. ವಿಷ್ಣುವಿನ ಅವತಾರದಲ್ಲಿ ನರಸಿಂಹನ ರೂಪವೂ ಒಂದು. ನರಸಿಂಹನು ಹಿರಣ್ಯ ಕಶಿಪುನ ಸಾಯಿಸುತ್ತಾನೆ. ಇದೇ ಕಥೆಯನ್ನು ಇಟ್ಟುಕೊಂಡು ಹೊಂಬಾಳೆ ಸಿನಿಮಾದವರು ಅನಿಮೇಟೆಡ್ ಸಿನಿಮಾ ಮಾಡಿದ್ದಾರೆ. ಈ ಟೀಸರ್ ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ಬಿಡುಗಡೆ ಕಂಡಿದೆ.

ಹಿರಣ್ಯ ಕಶಿಪು ಮಗ ಪ್ರಹ್ಲಾದ ಸದಾ ಹರಿಯ ಭಜನೆ ಮಾಡುತ್ತಾ ಇರುತ್ತಾನೆ. ಇದರಿಂದ ಸಿಟ್ಟಾಗುವ ಹಿರಣ್ಯ ಕಶಿಪು ‘ನಿನ್ನ ಹರಿ ಈ ಕಂಬದಲ್ಲಿ ಇದ್ದಾನೆಯೇ.. ಈ ಕಂಬದಲ್ಲಿ ಇದ್ದಾನೆಯೇ’ ಎಂದು ಕೇಳುತ್ತಾನೆ. ಆಗ ಕಂಬ ಒಡೆದುಕೊಂಡು ನರಸಿಂಹ ಬರುತ್ತಾನೆ. ಇದನ್ನು ಟೀಸರ್​ನಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

‘ಮಹಾವತಾರ ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು 3ಡಿ ವರ್ಷನ್​​ನಲ್ಲೂ ಲಭ್ಯವಿದೆ. ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಇದಾಗಿದೆ. ಹೊಂಬಾಳೆಯವರ ಹೊಸ ಪ್ರಯತ್ನಕ್ಕೆ ಮೆಚ್ಚುಗೆ ಸಿಕ್ಕಿದೆ. ಅಶ್ವಿನ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ನಿರ್ಮಾಣ ಮಾಡಿರುವ ಈ ಚಿತ್ರ ಏಪ್ರಿಲ್ 3ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?