AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಮಿಲಿ ಜತೆ ‘ಜವಾನ್​’ ಚಿತ್ರ ನೋಡಲಿರುವ ಮಹೇಶ್​ ಬಾಬು; ‘ನಾನೂ ಬರ್ತೀನಿ’ ಎಂದ ಶಾರುಖ್​ ಖಾನ್​

ವಿಶ್ವಾದ್ಯಂತ ಸಾವಿರಾರು ಪರದೆಗಳಲ್ಲಿ ‘ಜವಾನ್​’ ಬಿಡುಗಡೆ ಆಗುತ್ತಿದೆ. ಮೊದಲ ದಿನ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಬಗ್ಗೆ ಚರ್ಚೆಗಳು ಜೋರಾಗಿದೆ. ದಕ್ಷಿಣ ಭಾರತದಲ್ಲಿ ಈ ಚಿತ್ರಕ್ಕೆ ಹೈಪ್​ ಸಿಕ್ಕಿದೆ. ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ನೋಡಲು ಆಸಕ್ತಿ ತೋರಿಸುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಮಹೇಶ್​ ಬಾಬು.

ಫ್ಯಾಮಿಲಿ ಜತೆ ‘ಜವಾನ್​’ ಚಿತ್ರ ನೋಡಲಿರುವ ಮಹೇಶ್​ ಬಾಬು; ‘ನಾನೂ ಬರ್ತೀನಿ’ ಎಂದ ಶಾರುಖ್​ ಖಾನ್​
ಮಹೇಶ್​ ಬಾಬು, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on:Sep 06, 2023 | 5:07 PM

Share

ನಟ ಮಹೇಶ್​ ಬಾಬು (Mahesh Babu) ಅವರು ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳ ಜೊತೆ ನಂಟು ಹೊಂದಿದ್ದಾರೆ. ಬಾಲಿವುಡ್​ ನಟ ಶಾರುಖ್​ ಖಾನ್​ ಜೊತೆಗೂ ಅವರಿಗೆ ಸ್ನೇಹ ಇದೆ. ಈಗ ಶಾರುಖ್​ ಖಾನ್​​ ನಟನೆಯ ‘ಜವಾನ್​’ ಸಿನಿಮಾ (Jawan Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಂದರ್ಭದಲ್ಲಿ ಅವರಿಗೆ ಮಹೇಶ್​ ಬಾಬು ಶುಭ ಕೋರಿದ್ದಾರೆ. ಸೆಪ್ಟೆಂಬರ್​ 7ರಂದು ‘ಜವಾನ್​’ ಸಿನಿಮಾ ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಹಿಂದಿ ಮಾತ್ರವಲ್ಲದೇ ತಮಿಳು ಮತ್ತು ತೆಲುಗಿನಲ್ಲಿಯೂ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಚಿತ್ರದ ಕ್ರೇಜ್​ ಜೋರಾಗಿದೆ. ಮಹೇಶ್​ ಬಾಬು ಅವರು ಕೂಡ ಫ್ಯಾಮಿಲಿ ಸಮೇತರಾಗಿ ‘ಜವಾನ್​’ ನೋಡುವುದಾಗಿ ತಿಳಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಶಾರುಖ್ ಖಾನ್​ (Shah Rukh Khan) ಅವರು ‘ನಾನೂ ಬರ್ತೀನಿ’ ಎಂದು ಟ್ವೀಟ್​ ಮಾಡಿದ್ದಾರೆ.

ಕಾಲಿವುಡ್​ನ ಸ್ಟಾರ್​ ನಿರ್ದೇಶಕ ಅಟ್ಲಿ ಅವರು ‘ಜವಾನ್’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಸೌತ್​ ಸಿನಿಮಾರಂಗದ ಸೊಗಡು ಕಾಣಿಸಲಿದೆ. ನಯನತಾರಾ, ವಿಜಯ್​ ಸೇತುಪತಿ ಸೇರಿದಂತೆ ದಕ್ಷಿಣ ಭಾರತದ ಅನೇಕರು ನಟಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ದಕ್ಷಿಣ ಭಾರತದಲ್ಲಿ ಈ ಚಿತ್ರಕ್ಕೆ ಹೈಪ್​ ಸಿಕ್ಕಿದೆ. ಅನೇಕ ಸೆಲೆಬ್ರಿಟಿಗಳು ಈ ಸಿನಿಮಾವನ್ನು ನೋಡಲು ಆಸಕ್ತಿ ತೋರಿಸುತ್ತಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಮಹೇಶ್​ ಬಾಬು. ಅವರು ಮಾಡಿರುವ ಟ್ವೀಟ್​ ವೈರಲ್​ ಆಗಿದೆ.

ಇದನ್ನೂ ಓದಿ: ‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಈ ಸಮಯ ಜವಾನ್​ಗೋಸ್ಕರ್​. ಶಾರುಖ್​ ಖಾನ್​ ಅವರ ಪವರ್​ ದೊಡ್ಡ ಪರದೆಯಲ್ಲಿ ಕಾಣಲಿದೆ. ಎಲ್ಲ ಮಾರುಕಟ್ಟೆಯಲ್ಲಿ ಈ ಸಿನಿಮಾ ಸಾರ್ವತ್ರಿಕ ಯಶಸ್ಸು ಗಳಿಸಲಿ ಎಂದು ಜವಾನ್​ ತಂಡಕ್ಕೆ ಹಾರೈಸುತ್ತೇನೆ. ಇಡೀ ಕುಟುಂಬದ ಜೊತೆ ಕುಳಿತು ಈ ಸಿನಿಮಾವನ್ನು ನೋಡಲು ಕಾದಿದ್ದೇನೆ’ ಎಂದು ಮಹೇಶ್ ಬಾಬು ಟ್ವೀಟ್​ ಮಾಡಿದ್ದಾರೆ. ಇದರಿಂದ ಶಾರುಖ್​ ಖಾನ್​ಗೆ ಮತ್ತು ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

ಮಹೇಶ್​ ಬಾಬು ಟ್ವೀಟ್​:

ಶಾರುಖ್​ ಖಾನ್​ ಪ್ರತಿಕ್ರಿಯೆ:

‘ಧನ್ಯವಾದಗಳು ನನ್ನ ಗೆಳಯ. ನಿಮಗೆ ಈ ಸಿನಿಮಾ ಇಷ್ಟ ಆಗುತ್ತದೆ ಎಂಬ ನಂಬಿಕೆ ನನಗಿದೆ. ನೀವು ಯಾವಾಗ ಚಿತ್ರಮಂದಿರಕ್ಕೆ ಹೋಗುತ್ತೀರಿ ಅಂತ ಹೇಳಿ. ನಾನು ಕೂಡ ನಿಮ್ಮೊಂದಿಗೆ ಬಂದು ಸಿನಿಮಾ ನೋಡುತ್ತೇನೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಪ್ರೀತಿಯ ಅಪ್ಪುಗೆ ಮತ್ತು ಹಾರೈಕೆಗಳು’ ಎಂದು ಶಾರುಖ್​ ಖಾನ್​ ಅವರು ಟ್ವೀಟ್​ ಮಾಡಿದ್ದಾರೆ. ಇಬ್ಬರ ಸ್ನೇಹ ನೋಡಿ ಅಭಿಮಾನಿಗಳಿಗೆ ಸಂತಸ ಪಟ್ಟಿದ್ದಾರೆ.

ಇದನ್ನೂ ಓದಿ: ಎಷ್ಟಾಗಬಹುದು ‘ಜವಾನ್’ ಮೊದಲ ದಿನದ ಕಲೆಕ್ಷನ್? ಬಿಡುಗಡೆಗೂ ಮೊದಲೇ ಲೆಕ್ಕಾಚಾರ ಶುರು

‘ಜವಾನ್​’ ಸಿನಿಮಾ ವಿಶ್ವಾದ್ಯಂತ ಸಾವಿರಾರು ಪರದೆಗಳಲ್ಲಿ ಬಿಡುಗಡೆ ಆಗುತ್ತಿದೆ. ಮೊದಲ ದಿನ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಸಿನಿಮಾದಲ್ಲಿ ಘಟಾನುಘಟಿ ಸ್ಟಾರ್​ ಕಲಾವಿದರ ಸಂಗಮ ಆಗಿರುವುದರಿಂದ ನಿರೀಕ್ಷೆಯ ಮಟ್ಟ ಹೆಚ್ಚಾಗಿದೆ. ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಬಹಳ ಅದ್ದೂರಿಯಾಗಿ ‘ಜವಾನ್​’ ಸಿದ್ಧವಾಗಿದೆ. ‘ಪಠಾಣ್​’ ರೀತಿಯೇ ಈ ಚಿತ್ರ ಕೂಡ ಸಾವಿರಾರೂ ಕೋಟಿ ರೂಪಾಯಿ ಗಳಿಸಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:11 pm, Wed, 6 September 23

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!