AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Files: ‘ಗಂಡಸ್ತನ ಇದ್ದರೆ ಮಣಿಪುರ ಫೈಲ್ಸ್​ ಸಿನಿಮಾ ಮಾಡಿ’: ವಿವೇಕ್​ ಅಗ್ನಿಹೋತ್ರಿಗೆ ನೆಟ್ಟಿಗರ ಸವಾಲು; ನಿರ್ದೇಶಕ ಕೊಟ್ಟ ಉತ್ತರ ಏನು?

Vivek Agnihotri: ‘ಸಮಯ ವ್ಯರ್ಥ ಮಾಡಬೇಡಿ. ಗಂಡಸ್ತನ ಇದ್ದರೆ ಮಣಿಪುರ್​ ಫೈಲ್ಸ್​ ಅಂತ ಸಿನಿಮಾ ಮಾಡಿ’ ಎಂದು ವ್ಯಕ್ತಿಯೊಬ್ಬರು ಚಾಲೆಂಜ್​ ಮಾಡಿದ್ದಾರೆ. ಈ ಟ್ವೀಟ್​ ವೈರಲ್​ ಆಗಿದೆ.

Manipur Files: ‘ಗಂಡಸ್ತನ ಇದ್ದರೆ ಮಣಿಪುರ ಫೈಲ್ಸ್​ ಸಿನಿಮಾ ಮಾಡಿ’: ವಿವೇಕ್​ ಅಗ್ನಿಹೋತ್ರಿಗೆ ನೆಟ್ಟಿಗರ ಸವಾಲು; ನಿರ್ದೇಶಕ ಕೊಟ್ಟ ಉತ್ತರ ಏನು?
ವಿವೇಕ್​ ಅಗ್ನಿಹೋತ್ರಿ
Follow us
ಮದನ್​ ಕುಮಾರ್​
|

Updated on: Jul 23, 2023 | 9:13 AM

ಬಾಲಿವುಡ್​ನ ಖ್ಯಾತ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ನೈಜ ಘಟನೆ ಆಧಾರಿತ ಸಿನಿಮಾಗಳನ್ನು ಮಾಡಿ ಫೇಮಸ್​ ಆಗಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಘಟನೆಯನ್ನು ಆಧರಿಸಿ ಮೂಡಿಬಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಗೆಲುವು ಸಿಕ್ಕಿತ್ತು. ಸದ್ಯ ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಮಾಡುತ್ತಿದ್ದಾರೆ. ಈ ನಡುವೆ ನೆಟ್ಟಿಗರಿಂದ ವಿವೇಕ್​ ಅಗ್ನಿಹೋತ್ರಿಗೆ ಒಂದು ಸವಾಲು ಎದುರಾಗಿದೆ. ಧೈರ್ಯ ಇದ್ದರೆ ಮಣಿಪುರದಲ್ಲಿ (Manipur) ನಡೆದ ಅಮಾನವೀಯ ಘಟನೆಗಳ ಕುರಿತು (Manipur Files) ಸಿನಿಮಾ ಮಾಡಿ ಎಂದು ನೆಟ್ಟಿಗರೊಬ್ಬರು ಸವಾಲು ಹಾಕಿದ್ದಾರೆ. ಅದಕ್ಕೆ ವಿವೇಕ್​ ಅಗ್ನಿಹೋತ್ರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಣಿಪುರದಲ್ಲಿ ಯುವತಿಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿಸಿದ ಅಮಾನುಷ ಕೃತ್ಯಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಕಾಶ್ಮೀರಿ ಪಂಡಿತರ ಹತ್ಯೆ ಬಗ್ಗೆ ಟ್ವೀಟ್​ ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು ‘ಸಮಯ ವ್ಯರ್ಥ ಮಾಡಬೇಡಿ. ಗಂಡಸ್ತನ ಇದ್ದರೆ ಮಣಿಪುರ್​ ಫೈಲ್ಸ್​ ಅಂತ ಸಿನಿಮಾ ಮಾಡಿ’ ಎಂದು ಕಮೆಂಟ್​ ಮಾಡಿದ್ದಾರೆ. ಈ ಟ್ವೀಟ್​ ವೈರಲ್​ ಆಗಿದೆ. ಇದನ್ನು ವಿವೇಕ್​ ಅಗ್ನಿಹೋತ್ರಿ ಅವರು ನಿರ್ಲಕ್ಷಿಸಿಲ್ಲ. ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ.

‘ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕೆ ಧನ್ಯವಾದಗಳು. ಆದರೆ ಎಲ್ಲ ಸಿನಿಮಾವನ್ನು ನನ್ನಿಂದಲೇ ಮಾಡಿಸುತ್ತೀರಾ? ನಿಮ್ಮ ಟೀಮ್​ ಇಂಡಿಯಾದಲ್ಲಿ ಗಂಡಸ್ತನ ಇರುವ ಫಿಲ್ಮ್​​ ಮೇಕರ್​ ಯಾರೂ ಇಲ್ಲವೇ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಮರುಪ್ರಶ್ನೆ ಹಾಕಿದ್ದಾರೆ. ಇದರಲ್ಲಿ ಅವರು ಬಳಸಿರುವ ಇಂಡಿಯಾ ಎಂಬ ಪದದ ಬಗ್ಗೆ ಚರ್ಚೆ ಆಗುತ್ತಿದೆ. ಇತ್ತೀಚೆಗೆ ಪ್ರತಿಪಕ್ಷಗಳೆಲ್ಲ ಸೇರಿ ‘ಇಂಡಿಯಾ’ ಎಂಬ ಮೈತ್ರಿಕೂಟ ಮಾಡಿಕೊಂಡಿವೆ. ಅದರ ಹಿನ್ನೆಲೆಯಲ್ಲೇ ವಿವೇಕ್​ ಅಗ್ನಿಹೋತ್ರಿ ಈ ಪದವನ್ನು ಬಳಸಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Vivek Agnihotri: ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಬಜೆಟ್​ ಎಷ್ಟು? ಮುಚ್ಚುಮರೆ ಇಲ್ಲದೇ ಲೆಕ್ಕ ನೀಡಿದ ವಿವೇಕ್​ ಅಗ್ನಿಹೋತ್ರಿ

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ತೋರಿಸಲಾಗದೇ ಉಳಿದಿರುವ ಅನೇಕ ವಿಷಯಗಳನ್ನು ‘ದಿ ಕಾಶ್ಮೀರ್​ ಫೈಲ್ಸ್​ ಅನ್​ರಿಪೋರ್ಟೆಡ್​’ ವೆಬ್​ ಸರಣಿ ಮೂಲಕ ತೋರಿಸಲು ವಿವೇಕ್​ ಅಗ್ನಿಹೋತ್ರಿ ಮುಂದಾಗಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ವೆಬ್​ ಸಿರೀಸ್​ನ ಟ್ರೇಲರ್​ ಇತ್ತೀಚೆಗೆ ಬಿಡುಗಡೆಯಾಗಿ ಗಮನ ಸೆಳೆದಿದೆ. ಜೀ5 ಒಟಿಟಿ ಮೂಲಕ ಇದು ಬಿಡುಗಡೆ ಆಗಲಿದೆ. ಅದರ ಜೊತೆಗೆ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗಾಗಿಯೂ ವಿವೇಕ್ ಅಗ್ನಿಹೋತ್ರಿಯ ಅಭಿಮಾನಿಗಳು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO