AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಪ್ ಸುದ್ದಿ ಬಳಿಕ ಪರೋಕ್ಷವಾಗಿ ತಿರುಗೇಟು ನೀಡಿದ ಮಲೈಕಾ, ಅರ್ಜುನ್ ಕಪೂರ್

ಮಲೈಕಾ ಅರೋರಾ ಅವರಿಗೆ 51 ವರ್ಷ ವಯಸ್ಸು. ಅರ್ಜುನ್​ ಕಪೂರ್​ ಅವರಿಗೆ 39 ವರ್ಷ ವಯಸ್ಸು. ಇಷ್ಟು ದಿನಗಳ ಕಾಲ ಜೊತೆಯಾಗಿದ್ದ ಅವರಿಬ್ಬರ ನಡುವೆ ಈಗ ಬ್ರೇಕಪ್​ ಆಗಿದೆ ಎಂದು ಹೇಳಲಾಗುತ್ತಿದೆ. ಬ್ರೇಕಪ್​ ಸುದ್ದಿ ಹರಡಿದ ಬಳಿಕ ಅವರಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಪರೋಕ್ಷವಾಗಿ ಕೆಲವು ಸಾಲುಗಳನ್ನು ಹಂಚಿಕೊಂಡಿದ್ದಾರೆ.

ಬ್ರೇಕಪ್ ಸುದ್ದಿ ಬಳಿಕ ಪರೋಕ್ಷವಾಗಿ ತಿರುಗೇಟು ನೀಡಿದ ಮಲೈಕಾ, ಅರ್ಜುನ್ ಕಪೂರ್
ಅರ್ಜುನ್​ ಕಪೂರ್​, ಮಲೈಕಾ ಅರೋರಾ
ಮದನ್​ ಕುಮಾರ್​
|

Updated on: Jun 02, 2024 | 8:00 PM

Share

ಒಂದಷ್ಟು ವರ್ಷಗಳಿಂದ ಜೊತೆಯಾಗಿ ವಾಸಿಸುತ್ತಿದ್ದ ಮಲೈಕಾ ಅರೋರಾ ಮತ್ತು ಅರ್ಜುನ್​ ಕಪೂರ್​ (Arjun Kapoor) ನಡುವೆ ಈಗ ಬಿರುಕು ಉಂಟಾದಂತಿದೆ. ಈ ಬಗ್ಗೆ ಅನೇಕ ಬಗೆಯ ಸುದ್ದಿಗಳು ಪ್ರಕಟ ಆಗಿವೆ. ಆದರೆ ಸ್ವತಃ ಅರ್ಜುನ್​ ಕಪೂರ್​, ಮಲೈಕಾ ಅರೋರಾ (Malaika Arora) ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಈ ರೀತಿ ಗಾಸಿಪ್​ ಕೇಳಿಬಂದಿದೆ ಎಂದರೆ ಬಹುತೇಕ ನಿಜ ಇರಬಹುದು ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಅರ್ಜುನ್​ ಕಪೂರ್​ ಮತ್ತು ಮಲೈಕಾ ಅರೋರಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುವ ಪೋಸ್ಟ್​ಗಳು ಅನುಮಾನ ಮೂಡಿಸಿವೆ.

ಭಾನುವಾರ (ಜೂನ್​ 2) ಮಲೈಕಾ ಅರೋರಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡ ಒಂದು ಸಾಲು ಗಮನ ಸೆಳೆಯುತ್ತಿದೆ. ‘ನಿಮ್ಮಿಂದ ಆಗಲ್ಲ ಎಂದು ಅವರು ಹೇಳಿದಾಗ ನೀವು ಅದನ್ನು ಮಾಡಿ ತೋರಿಸಿ.. ಎರಡು ಬಾರಿ ಮಾಡಿ ಮತ್ತು ಫೋಟೋ ತೆಗೆದುಕೊಳ್ಳಿ’ ಎಂಬ ಸಾಲನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಅರ್ಜುನ್​ ಕಪೂರ್​ಗೆ ತಿರುಗೇಟು ನೀಡುವ ಸಲುವಾಗಿ ಮಲೈಕಾ ಅರೋರಾ ಅವರು ಈ ಸಾಲನ್ನು ಶೇರ್​ ಮಾಡಿಕೊಂಡಿರಬಹುದು ಎಂಬುದು ಎಲ್ಲರ ಗುಮಾನಿ.

ಇನ್ನು, ಅರ್ಜುನ್​ ಕಪೂರ್​ ಕೂಡ ಸುಮ್ಮನೆ ಕುಳಿತಿಲ್ಲ. ಒಂದು ದಿನ ಮುಂಚೆ ಅವರು ಕೂಡ ಇದೇ ರೀತಿ ಪರೋಕ್ಷವಾಗಿ ತಿರುಗೇಟು ನೀಡುವಂತಹ ಪೋಸ್ಟ್​ ಹಂಚಿಕೊಂಡಿದ್ದರು. ‘ನಮಗೆ ಬದುಕಿನಲ್ಲಿ ಎರಡು ಆಯ್ಕೆ ಇದೆ. ಭೂತಕಾಲದ ಬಂಧಿಗಳಾಗಿ ಇರುವುದು ಅಥವಾ ಭವಿಷ್ಯದ ಸಾಧ್ಯತೆಗಳನ್ನು ಅನ್ವೇಷಣೆ ಮಾಡುವುದು’ ಎಂದು ಅವರು ಬರೆದುಕೊಂಡಿದ್ದರು.

ಇದನ್ನೂ ಓದಿ: 50ರಲ್ಲೂ 30ರಂತೆ ಕಾಣುವ ಮಲೈಕಾ ಅರೋರಾ, ಪಾಲಿಸುವ ಡಯಟ್ ಯಾವುದು?

ಬ್ರೇಕಪ್​ ಕುರಿತ ವದಂತಿಗಳ ಬಗ್ಗೆ ಮಲೈಕಾ ಅರೋರಾ ಅವರಾಗಲಿ, ಅರ್ಜುನ್​ ಕಪೂರ್​ ಅವರಾಗಲಿ ನೇರವಾಗಿ ಏನನ್ನೂ ಹೇಳಿಲ್ಲ. ಅವರು ಸೈಲೆಂಟ್​ ಆಗಿದ್ದಾರೆ ಎಂದರೆ ‘ಮೌನಂ ಸಮ್ಮತಿ ಲಕ್ಷಣಂ’ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಬ್ರೇಕಪ್​ ಬಗ್ಗೆ ಮಲೈಕಾ ಅವರ ಮ್ಯಾನೇಜರ್​ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲ ಬರೀ ಗಾಸಿಪ್ ಎಂದು ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?