AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಮೋಜು ಮಸ್ತಿಯಲ್ಲಿ ಮಲೈಕಾ ಅರೋರಾ-ಅರ್ಜುನ್​ ಕಪೂರ್​; ವೈರಲ್ ಆಯ್ತು ಫೋಟೋ

ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ.

ವೀಕೆಂಡ್ ಮೋಜು ಮಸ್ತಿಯಲ್ಲಿ ಮಲೈಕಾ ಅರೋರಾ-ಅರ್ಜುನ್​ ಕಪೂರ್​; ವೈರಲ್ ಆಯ್ತು ಫೋಟೋ
ವೀಕೆಂಡ್ ಮೋಜು ಮಸ್ತಿಯಲ್ಲಿ ಮಲೈಕಾ ಅರೋರಾ-ಅರ್ಜುನ್​ ಕಪೂರ್​; ಇಲ್ಲಿವೆ ಫೋಟೋ
TV9 Web
| Edited By: |

Updated on: Aug 21, 2021 | 10:52 PM

Share

ಅರ್ಜುನ್​ ಕಪೂರ್​ ಅವರು ಗರ್ಲ್​ಫ್ರೆಂಡ್ ಮಲೈಕಾ ಅರೋರಾ ಜತೆ ಹಾಯಾಗಿ ದಿನ ಕಳೆಯುತ್ತಿದ್ದಾರೆ. ತಮ್ಮ ರಿಲೇಶನ್​ಶಿಪ್​ ಬಗ್ಗೆ ಸಾಕಷ್ಟು ಬಾರಿ ಅವರು ಓಪನ್​ ಆಗಿಯೇ ಮಾತನಾಡುತ್ತಾರೆ. ಸಾಕಷ್ಟು ಫೋಟೋಗಳನ್ನು ಇಬ್ಬರೂ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುತ್ತಾರೆ. ಈಗ ವೀಕೆಂಡ್​ನಲ್ಲಿ ಅರ್ಜುನ್​ ಹಾಗೂ ಮಲೈಕಾ ಕ್ವಾಲಿಟಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅರ್ಜುನ್​ ಕಪೂರ್​ ಹಂಚಿಕೊಂಡಿದ್ದಾರೆ.

ಟಾಪ್​ ಐಟಂ ಡ್ಯಾನ್ಸರ್​ ಆಗಿದ್ದ ಮಲೈಕಾ ಅರೋರಾ ಅವರಿಗೆ ಈಗ 47 ವರ್ಷ ವಯಸ್ಸು. ಅವರನ್ನು ಪ್ರೀತಿಸುತ್ತಿರುವ ನಟ ಅರ್ಜುನ್​ ಕಪೂರ್​ಗೆ 35ರ ಪ್ರಾಯ. ಮಲೈಕಾಗೆ ಮದುವೆ ಆಗಿ ಒಂದು ಮಗು ಕೂಡ ಇದೆ. ನಟ, ನಿರ್ಮಾಪಕ ಅರ್ಬಾಜ್​ ಖಾನ್​​ ಜೊತೆ ಮದುವೆ ಆಗಿದ್ದ ಮಲೈಕಾ ನಂತರ ವಿಚ್ಛೇದನ ಪಡೆದಿದ್ದರು. ಈಗ ಮಲೈಕಾ ಮತ್ತು ಅರ್ಜುನ್​ ಹಾಯಾಗಿ ಸುತ್ತಾಟ ನಡೆಸುತ್ತಿದ್ದಾರೆ. ಅರ್ಜುನ್​ ಕಪೂರ್​ ಅವರು ಸ್ಟೇಟಸ್​ನಲ್ಲಿ ಸಾಲು ಸಾಲು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮಲೈಕಾ ಅರೋರಾ ಕುಳಿತಿರುವ ಫೋಟೋಗಳನ್ನು ಅರ್ಜುನ್​ ಕಪೂರ್​ ಹಂಚಿಕೊಂಡಿದ್ದಾರೆ. ಮಲೈಕಾ ಮೊಬೈಲ್​ ನೋಡುತ್ತಾ ಕೂತಿದ್ದಾರೆ. ‘ಶನಿವಾರ’ ಎಂದು ಬರೆದು ಮಲೈಕಾಗೆ ಟ್ಯಾಗ್​ ಮಾಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅರ್ಜುನ್​ ಕಪೂರ್​ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದರು. ‘ನನ್ನ ಖಾಸಗಿ ಜೀವನದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಯಾಕೆಂದರೆ ನಾವು ನಮ್ಮ ಸಂಗಾತಿಯನ್ನು ಗೌರವಿಸಬೇಕು’ ಎಂದು ಅರ್ಜುನ್​ ಕಪೂರ್​ ಹೇಳಿದ್ದರು.

ಬಾಂದ್ರಾ ಸಮೀಪದಲ್ಲೇ ಅರ್ಜುನ್​ ಕಪೂರ್​ ವಿಲ್ಲಾ ಖರೀದಿ ಮಾಡಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಇದಕ್ಕಾಗಿ ಅವರು 20 ಕೋಟಿ ರೂಪಾಯಿ ನೀಡಿದ್ದರು. ಇದು ಮಲೈಕಾ ಅರೋರ ಅವರ ಲಕ್ಸುರಿ ಮನೆ ಸಮೀಪವೇ ಇದೆ. ಈ ವಿಲ್ಲಾವನ್ನು ಮಲೈಕಾ ತುಂಬಾನೇ ಇಷ್ಟಪಟ್ಟಿದ್ದರು ಎನ್ನಲಾಗಿದೆ. ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಕರೀನಾ ಕಪೂರ್​, ರಣಬೀರ್​ ಕಪೂರ್​ ಮನೆ ಕೂಡ ಇದೇ ಭಾಗದಲ್ಲಿದೆ.

ಇದನ್ನೂ ಒದಿ: ತನಗಿಂತ 12 ವರ್ಷ ಕಿರಿಯ ನಟನ ಜೊತೆ ಸುತ್ತಾಡುತ್ತಿರುವ ಮಲೈಕಾ ಅರೋರಾ ಸೌಂದರ್ಯದ ಗುಟ್ಟು ರಟ್ಟು!

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್