ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

ಬಾಲಿವುಡ್ ನಟಿ, ಮಾಡೆಲ್ ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಇಳಿ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಮ್ಮ ನಿವಾಸದ ಮೇಲ್ಛಾವಣಿಯಿಂದ ಹಾರಿ ಪ್ರಾಣ ಬಿಟ್ಟಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ
Follow us
|

Updated on: Sep 11, 2024 | 12:40 PM

ಬಾಲಿವುಡ್​ನ ಖ್ಯಾತ ನಟಿ, ಮಾಡೆಲ್ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು (ಸೆಪ್ಟೆಂಬರ್ 11) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ತಪ್ಪ ಮನೆಯ ಮೇಲ್ಛಾವಣಿಯಿಂದ ಕೆಳಗೆ ಹಾರಿ ಮಲೈಕಾರ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಲೈಕಾರ ತಂದೆ ಮುಂಬೈನ ಬಾಂದ್ರಾದಲ್ಲಿ ವಾಸವಿದ್ದರು. ಅವರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು.

ಮಲೈಕಾ ಅರೋರಾ ಚಿತ್ರೀಕರಣಕ್ಕಾಗಿ ಪುನಾಕ್ಕೆ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಮುಂಬೈಗೆ ರವಾನೆಯಾಗಿದ್ದಾರೆ. ಮಲೈಕಾ ಅರೋರಾರ ಸಹೋದರಿ ಅಮೃತ್ ಅರೋರಾ ಸಹ ತಂದೆಯ ಸಾವಿನ ವಿಷಯ ತಿಳಿದು ಮುಂಬೈಗೆ ವಾಪಸ್ಸಾಗಿದ್ದಾರೆ. ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಭಾರತದ ಮರ್ಚೆಂಟ್ ನೇವಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ಇದನ್ನೂ ಓದಿ:ಅವಕಾಶ ಕಡಿಮೆಯಾದರೂ ಮಲೈಕಾ ಅರೋರಾ ಆದಾಯ ಕಡಿಮೆಯಾಗಿಲ್ಲ

ಅನಿಲ್ ಅರೋರಾರ ಮೃತ ದೇಹವನ್ನು ಮುಂಬೈನ ಬಾಬಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಸಂಬಂಧಿಗಳಿಗೆ ನೀಡಲಾಗುವುದೆಂದು ತಿಳಿಸಲಾಗಿದೆ. ಅನಿಲ್ ಅವರದ್ದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದರೋ ಎಂಬ ಬಗ್ಗೆ ಅನುಮಾನವಿರುವುದಾಗಿ ಪೊಲೀಸರು ಹೇಳಿದ್ದಾರೆ. ಅನಿಲ್ ಅರೋರಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಲೈಕಾ ಅರೋರಾರ ಮಾಜಿ ಪತಿ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್, ಮಲೈಕಾರ ಬಾಂದ್ರಾದ ಮನೆಗೆ ಆಗಮಿಸಿದ್ದಾರೆ.

ಮಲೈಕಾ ಅರೋರಾ ಹಾಗೂ ಅಮೃತ್ ಅರೋರಾ ಇಬ್ಬರೂ ಸಹ ಮಾಡೆಲ್​ಗಳಾಗಿ ಗುರುತಿಸಿಕೊಂಡರು. ಬಳಿಕ ಚಿತ್ರರಂಗಕ್ಕೂ ಎಂಟ್ರಿ ನೀಡಿದರು. ಮಲೈಕಾ ಅರೋರಾ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ದಶಕಕ್ಕೂ ಹೆಚ್ಚು ಕಾಲ ದಾಂಪತ್ಯದಲ್ಲಿದ್ದರು. ಅವರಿಗೆ ಒಬ್ಬ ಮಗನಿದ್ದಾನೆ. ಬಳಿಕ ಅರ್ಬಾಜ್​ಗೆ ವಿಚ್ಛೇದನ ನೀಡಿ, ತನಗಿಂತಲೂ ಬಹಳ ಕಿರಿಯರಾದ ಅರ್ಜುನ್ ಕಪೂರ್ ಜೊತೆಗೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿ ತೊಡಗಿಕೊಂಡರು. ಇತ್ತೀಚೆಗೆ ಅರ್ಜುನ್ ಕಪೂರ್ ಜೊತೆಗೂ ಸಹ ಮಲೈಕಾ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು