AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

ಬಾಲಿವುಡ್ ನಟಿ, ಮಾಡೆಲ್ ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಇಳಿ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಮ್ಮ ನಿವಾಸದ ಮೇಲ್ಛಾವಣಿಯಿಂದ ಹಾರಿ ಪ್ರಾಣ ಬಿಟ್ಟಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ
ಮಂಜುನಾಥ ಸಿ.
|

Updated on: Sep 11, 2024 | 12:40 PM

Share

ಬಾಲಿವುಡ್​ನ ಖ್ಯಾತ ನಟಿ, ಮಾಡೆಲ್ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು (ಸೆಪ್ಟೆಂಬರ್ 11) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ತಪ್ಪ ಮನೆಯ ಮೇಲ್ಛಾವಣಿಯಿಂದ ಕೆಳಗೆ ಹಾರಿ ಮಲೈಕಾರ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಲೈಕಾರ ತಂದೆ ಮುಂಬೈನ ಬಾಂದ್ರಾದಲ್ಲಿ ವಾಸವಿದ್ದರು. ಅವರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು.

ಮಲೈಕಾ ಅರೋರಾ ಚಿತ್ರೀಕರಣಕ್ಕಾಗಿ ಪುನಾಕ್ಕೆ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಮುಂಬೈಗೆ ರವಾನೆಯಾಗಿದ್ದಾರೆ. ಮಲೈಕಾ ಅರೋರಾರ ಸಹೋದರಿ ಅಮೃತ್ ಅರೋರಾ ಸಹ ತಂದೆಯ ಸಾವಿನ ವಿಷಯ ತಿಳಿದು ಮುಂಬೈಗೆ ವಾಪಸ್ಸಾಗಿದ್ದಾರೆ. ಮಲೈಕಾ ಅರೋರಾರ ತಂದೆ ಅನಿಲ್ ಅರೋರಾ ಭಾರತದ ಮರ್ಚೆಂಟ್ ನೇವಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ಇದನ್ನೂ ಓದಿ:ಅವಕಾಶ ಕಡಿಮೆಯಾದರೂ ಮಲೈಕಾ ಅರೋರಾ ಆದಾಯ ಕಡಿಮೆಯಾಗಿಲ್ಲ

ಅನಿಲ್ ಅರೋರಾರ ಮೃತ ದೇಹವನ್ನು ಮುಂಬೈನ ಬಾಬಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಸಂಬಂಧಿಗಳಿಗೆ ನೀಡಲಾಗುವುದೆಂದು ತಿಳಿಸಲಾಗಿದೆ. ಅನಿಲ್ ಅವರದ್ದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದರೋ ಎಂಬ ಬಗ್ಗೆ ಅನುಮಾನವಿರುವುದಾಗಿ ಪೊಲೀಸರು ಹೇಳಿದ್ದಾರೆ. ಅನಿಲ್ ಅರೋರಾ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಲೈಕಾ ಅರೋರಾರ ಮಾಜಿ ಪತಿ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್, ಮಲೈಕಾರ ಬಾಂದ್ರಾದ ಮನೆಗೆ ಆಗಮಿಸಿದ್ದಾರೆ.

ಮಲೈಕಾ ಅರೋರಾ ಹಾಗೂ ಅಮೃತ್ ಅರೋರಾ ಇಬ್ಬರೂ ಸಹ ಮಾಡೆಲ್​ಗಳಾಗಿ ಗುರುತಿಸಿಕೊಂಡರು. ಬಳಿಕ ಚಿತ್ರರಂಗಕ್ಕೂ ಎಂಟ್ರಿ ನೀಡಿದರು. ಮಲೈಕಾ ಅರೋರಾ, ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ದಶಕಕ್ಕೂ ಹೆಚ್ಚು ಕಾಲ ದಾಂಪತ್ಯದಲ್ಲಿದ್ದರು. ಅವರಿಗೆ ಒಬ್ಬ ಮಗನಿದ್ದಾನೆ. ಬಳಿಕ ಅರ್ಬಾಜ್​ಗೆ ವಿಚ್ಛೇದನ ನೀಡಿ, ತನಗಿಂತಲೂ ಬಹಳ ಕಿರಿಯರಾದ ಅರ್ಜುನ್ ಕಪೂರ್ ಜೊತೆಗೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿ ತೊಡಗಿಕೊಂಡರು. ಇತ್ತೀಚೆಗೆ ಅರ್ಜುನ್ ಕಪೂರ್ ಜೊತೆಗೂ ಸಹ ಮಲೈಕಾ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?