AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷಗಳ ಮುನಿಸು ಮರೆತು ಒಂದಾದ ಮಲ್ಲಿಕಾ ಶೆರಾವತ್, ಇಮ್ರಾನ್​ ಹಷ್ಮಿ

‘ಮರ್ಡರ್​’ ಸಿನಿಮಾದಲ್ಲಿ ಮಲ್ಲಿಕಾ ಶೆರಾವತ್​ ಹಾಗೂ ಇಮ್ರಾನ್​ ಹಷ್ಮಿ ತುಂಬಾ ಬೋಲ್ಡ್​ ಆಗಿ ನಟಿಸಿದ್ದರು. ಬೆಡ್​ರೂಮ್​ ದೃಶ್ಯದಲ್ಲಿ ಅವರು ಲಿಪ್​ ಲಾಕ್​ ಮಾಡಿದ್ದು ಬಾಲಿವುಡ್​ನಲ್ಲಿ ಹೊಸ ಸೆನ್ಸೇಷನ್​ ಸೃಷ್ಟಿಸಿತ್ತು. ತೆರೆಮೇಲೆ ಅಷ್ಟು ಆಪ್ತವಾಗಿ ನಟಿಸಿದ್ದ ಇಮ್ರಾನ್​ ಹಷ್ಮಿ ಹಾಗೂ ಮಲ್ಲಿಕಾ ಶೆರಾವತ್ ಅವರು ನಿಜ ಜೀವನದಲ್ಲಿ ಕಿರಿಕ್​ ಮಾಡಿಕೊಂಡಿದ್ದರು.

20 ವರ್ಷಗಳ ಮುನಿಸು ಮರೆತು ಒಂದಾದ ಮಲ್ಲಿಕಾ ಶೆರಾವತ್, ಇಮ್ರಾನ್​ ಹಷ್ಮಿ
ಇಮ್ರಾನ್​ ಹಷ್ಮಿ, ಮಲ್ಲಿಕಾ ಶರಾವತ್​
ಮದನ್​ ಕುಮಾರ್​
|

Updated on: Apr 12, 2024 | 7:03 PM

Share

2004ರಲ್ಲಿ ತೆರೆಕಂಡಿದ್ದ ‘ಮರ್ಡರ್​’ ಸಿನಿಮಾ (Murder Movie) ನೆನಪಿದೆಯಾ? ಆ ಸಿನಿಮಾ ಬಿಡುಗಡೆಯಾಗಿ 20 ವರ್ಷ ಕಳೆದಿದೆ. ಅಚ್ಚರಿ ಏನೆಂದರೆ, ಅದರಲ್ಲಿ ನಟಿಸಿದ್ದ ಇಮ್ರಾನ್​ ಹಷ್ಮಿ ಮತ್ತು ಮಲ್ಲಿಕಾ ಶೆರಾವತ್​ (Mallika Sherawat) ಅವರು ಕಳೆದ 20 ವರ್ಷಗಳಿಂದ ಪರಸ್ಪರ ಭೇಟಿ ಆಗಿರಲಿಲ್ಲ. ಇಬ್ಬರ ನಡುವೆ ಮುನಿಸು ಮನೆ ಮಾಡಿತ್ತು. ಆದರೆ ಈಗ ಅವರಿಬ್ಬರು ಮತ್ತೆ ಒಂದಾಗಿದ್ದಾರೆ. ಪರಸ್ಪರ ತಬ್ಬಿಕೊಂಡು ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಮಲ್ಲಿಕಾ ಶೆರಾವತ್​ ಮತ್ತು ಇಮ್ರಾನ್ ಹಷ್ಮಿ (Emraan Hashmi) ಅವರನ್ನು ಮತ್ತೆ ಜೊತೆಯಾಗಿ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ.

ಮುಂಬೈನಲ್ಲಿ ಗುರುವಾರ (ಏಪ್ರಿಲ್​ 11) ನಿರ್ಮಾಪಕ ಆನಂದ್​ ಪಂಡಿತ್​ ಅವರ ಮಗಳ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಅದರಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಈ ಸಮಾರಂಭಕ್ಕೆ ಬಂದಿದ್ದಾಗ ಮಲ್ಲಿಕಾ ಶೆರಾವತ್​ ಮತ್ತು ಇಮ್ರಾನ್​ ಹಷ್ಮಿ ಅವರು ಭೇಟಿ ಆಗಿದ್ದಾರೆ. ಇಬ್ಬರೂ ಜೊತೆಯಾಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಆ ಮೂಲಕ ತಮ್ಮ ನಡುವೆ ಇದ್ದ 20 ವರ್ಷಗಳ ಮುನಿಸಿಗೆ ಪೂರ್ಣವಿರಾಮ ಹಾಕಿದ್ದಾರೆ.

ಇದನ್ನೂ ಓದಿ: ‘ಕಾಂಪ್ರಮೈಸ್ ಆಗುವಂತೆ ಹೇಳಿದ್ದರು’; ಮಲ್ಲಿಕಾ ಶೆರಾವತ್ ಎದುರಿಸಿದ ಕಷ್ಟ ಒಂದೆರಡಲ್ಲ..

‘ಮರ್ಡರ್​’ ಸಿನಿಮಾದಲ್ಲಿ ಮಲ್ಲಿಕಾ ಶೆರಾವತ್​ ಮತ್ತು ಇಮ್ರಾನ್​ ಹಷ್ಮಿ ಅವರು ಸಿಕ್ಕಾಪಟ್ಟೆ ಬೋಲ್ಡ್​ ಆಗಿ ನಟಿಸಿದ್ದರು. ಬೆಡ್​ರೂಮ್​ ದೃಶ್ಯದಲ್ಲಿ ಅವರು ಹಾಟ್​ ಆಗಿ ಕಾಣಿಸಿಕೊಂಡಿದ್ದರು. ಅವರಿಬ್ಬರು ಲಿಪ್​ ಲಾಕ್​ ಮಾಡಿಕೊಂಡಿದ್ದು ಬಾಲಿವುಡ್​ನಲ್ಲಿ ಹೊಸ ಸೆನ್ಸೇಷನ್​ ಸೃಷ್ಟಿ ಮಾಡಿತ್ತು. ತೆರೆಮೇಲೆ ಅಷ್ಟೆಲ್ಲ ಆಪ್ತವಾಗಿ ಕಾಣಿಸಿಕೊಂಡಿದ್ದ ಇಮ್ರಾನ್​ ಹಷ್ಮಿ ಮತ್ತು ಮಲ್ಲಿಕಾ ಶೆರಾವತ್ ಅವರು ರಿಯಲ್​ ಲೈಫ್​ನಲ್ಲಿ ಕಿರಿಕ್​ ಮಾಡಿಕೊಂಡಿದ್ದರು.

ಸಿನಿಮಾ ರಿಲೀಸ್​ ಆಗುವುದರೊಳಗೆ ಮಲ್ಲಿಕಾ ಶೆರಾವತ್​ ಮತ್ತು ಇಮ್ರಾನ್​ ಹಷ್ಮಿ ನಡುವಿನ ಕಿರಿಕ್​ ಜೋರಾಗಿತ್ತು. ಆ ಬಳಿಕ ಅವರು ಪರಸ್ಪರ ಮಾತನಾಡುವುದನ್ನೇ ಬಿಟ್ಟುಬಿಟ್ಟರು. ಆದರೆ 2021ರಲ್ಲಿ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದ ಮಲ್ಲಿಕಾ ಶೆರಾವತ್​ ಅವರು, ‘ಅದೊಂದು ಸಿಲ್ಲಿ ಜಗಳ. ತುಂಬ ಬಾಲಿಶವಾಗಿತ್ತು’ ಎಂದಿದ್ದರು. ಈಗ ಇಬ್ಬರ ನಡುವಿನ ಮನಸ್ತಾಪ ಮಾಯವಾಗಿದೆ. ಅವರಿಬ್ಬರು ಮತ್ತೆ ಜೋಡಿಯಾಗಿ ಸಿನಿಮಾ ಮಾಡಲಿ ಎಂದು ಅನೇಕರು ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು