ಮಧ್ಯರಾತ್ರಿ ಮಲ್ಲಿಕಾ ರೂಂ ಬಾಗಿಲು ತಟ್ಟಿದ್ದ ಸ್ಟಾರ್ ನಟ: ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ

ಮಲ್ಲಿಕಾ ಶೆರಾವತ್ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿದ್ದರು. ಬಾಲಿವುಡ್​ನಲ್ಲಿ ಗ್ಲಾಮರ್ ಅನ್ನು ಅತಿಯಾಗಿ ಬಳಸಿ ಜನಪ್ರಿಯತೆ ಗಳಿಸಿಕೊಂಡ ನಟಿ ಮಲ್ಲಿಕಾ. ಇದೀಗ ತಾವು ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾಗ ಅನುಭವಿಸಿದ ಸಮಸ್ಯೆಯನ್ನು ಮಲ್ಲಿಕಾ ಹೇಳಿಕೊಂಡಿದ್ದಾರೆ.

ಮಧ್ಯರಾತ್ರಿ ಮಲ್ಲಿಕಾ ರೂಂ ಬಾಗಿಲು ತಟ್ಟಿದ್ದ ಸ್ಟಾರ್ ನಟ: ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ
Follow us
| Updated By: ಮಂಜುನಾಥ ಸಿ.

Updated on: Oct 05, 2024 | 8:11 PM

ಬಾಲಿವುಡ್​ನಲ್ಲಿ ಬೋಲ್ಡ್ ಪಾತ್ರಗಳನ್ನು ಮಾಡಿ ಫೇಮಸ್ ಆಗಿದ್ದ ನಟಿ ಮಲ್ಲಿಕಾ ಶೆರಾವತ್ ಅವರು ಇತ್ತೀಚೆಗೆ ಯಾವುದೇ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಅವರು ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದೇ ಹೇಳಬಹುದು. ಅವರು ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅವರಿಗೆ ಆದ ಕಹಿ ಅನುಭವಗಳು ಒಂದೆರಡಲ್ಲ. ಅವರು ಈ ಮೊದಲು ತಮಗಾದ ಕಿರುಕುಳದ ಬಗ್ಗೆ ಓಪನ್ ಆಗಿ ಮಾತನಾಡಿದ್ದರು.

ಮಲ್ಲಿಕಾ ಅವರು ಸಿನಿಮಾ ಶೂಟ್ಗಾಗಿ ದೇಶ-ವಿದೇಶದಲ್ಲಿ ಸುತ್ತಾಡುತ್ತಿದ್ದರು. ಅವರು ಒಮ್ಮೆ ದುಬೈಗೆ ತೆರಳಿದ್ದರು. ಈ ವೇಳೆ ಅವರು ದೊಡ್ಡ ಸಿನಿಮಾದ ಚಿತ್ರೀಕರಣದ ಕಾರಣಕ್ಕೆ ಅವರು ದುಬೈಗೆ ತೆರಳಿದ್ದರು. ಅಲ್ಲಿ ಅವರಿಗೆ ಓರ್ವ ಸ್ಟಾರ್ ಹೀರೋನಿಂದಲೇ ಕಿರುಕುಳ ಆಗಿತ್ತು ಎನ್ನುವ ವಿಚಾರ ರಿವೀಲ್ ಆಗಿದೆ.

‘ನಾನು ದುಬೈನಲ್ಲಿ ಒಂದು ದೊಡ್ಡ ಸಿನಿಮಾ ಶೂಟ್ ಮಾಡುತ್ತಿದ್ದೆ. ಇದರಲ್ಲಿ ಹಲವು ಸ್ಟಾರ್ಗಳು ಇದ್ದರು. ಅದು ಸೂಪರ್ ಹಿಟ್ ಚಿತ್ರ. ಜನರು ಈ ಚಿತ್ರವನ್ನು ಇಷ್ಟಪಟ್ಟರು. ನಾನು ಇದರಲ್ಲಿ ಕಾಮಿಡಿ ರೋಲ್ ಮಾಡಿದ್ದೇನೆ. ಅಲ್ಲಿಯವರೆಗೆ ಎಲ್ಲವೂ ಚೆನ್ನಾಗಿತ್ತು. ಆ ಚಿತ್ರದ ಹೀರೋ ನನ್ನ ರೂಂನ ಬಾಗಿಲನ್ನು ಮಧ್ಯಾರಾತ್ರಿ ಬಂದು ತಟ್ಟಿದ’ ಎಂದು ಹೇಳಿಕೊಂಡಿದ್ದಾರೆ.

‘ಆತ ಬಾಗಿಲನ್ನು ಒಡೆದು ಹಾಕುತ್ತಾನೆ ಎಂದು ಭಯ ಆಯಿತು. ಆ ರೀತಿ ಆತ ಬಾಗಿಲನ್ನು ತಟ್ಟುತ್ತಿದ್ದ. ಆತನಿಗೆ ನನ್ನ ರೂಂಗೆ ಬರಬೇಕಿತ್ತು. ಹಾಗಾಗಬಾರದು ಎಂದುಕೊಂಡೆ. ಆ ಬಳಿಕ ನಾನು ಆ ಹೀರೋ ಜೊತೆ ಕೆಲಸ ಮಾಡಿಲ್ಲ’ ಎಂದಿದ್ದಾರೆ ಅವರು. ಇದು ಅವರಿಗೆ ನಡೆದ ಕಿರುಕುಳದ ಅನುಭವಗಳಲ್ಲಿ ಒಂದು. ಈ ರೀತಿಯ ಹಲವು ಘಟನೆಗಳು ನಡೆದಿವೆ. ಮಲ್ಲಿಕಾ ಎಲ್ಲಿಯೂ ಹೀರೋ ಹೆಸರನ್ನು ರಿವೀಲ್ ಮಾಡಿಲ್ಲ.

ಇದನ್ನೂ ಓದಿ:ಬೀಚ್​ನಲ್ಲಿ ಜಾಲಿ ಮೂಡ್​​ಗೆ ಜಾರಿದ ಮಲ್ಲಿಕಾ ಶೆರಾವತ್‌

‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾ ಅಕ್ಟೋಬರ್ 11ರಂದು ರಿಲೀಸ್ ಆಗಲಿದೆ. ಅವರು ಹಿಂದಿ ಚಿತ್ರರಂಗಕ್ಕೆ ಕೆಲವು ವರ್ಷಗಳ ಬಳಿಕ ಕಂಬ್ಯಾಕ್ ಮಾಡುತ್ತಿದ್ದಾರೆ. ತೃಪ್ತಿ ದಿಮ್ರಿ ಹಾಗೂ ರಾಜ್ಕುಮಾರ್ ರಾವ್ ನಟಿಸಿದ್ದಾರೆ.

ಮಲ್ಲಿಕಾ ಶೆರಾವತ್ ಬಗ್ಗೆ ಹೇಳಬೇಕು ಎಂದರೆ ಅವರು 2003ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಕ್ವಾಹಿಶ್’ ಸಿನಿಮಾ ಮೂಲಕ ನಾಯಕಿ ಆಗಿ ಮಿಂಚಿದರು. ಅವರು ಬೋಲ್ಡ್ ಪಾತ್ರಗಳನ್ನು ಮಾಡಿದ್ದೇ ಹೆಚ್ಚು. ಈ ಕಾರಣಕ್ಕೆ ಅವರನ್ನು ನೋಡುವ ರೀತಿ ಬೇರೆ ಆಯಿತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ