AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ ಮಲ್ಲಿಕಾ ರೂಂ ಬಾಗಿಲು ತಟ್ಟಿದ್ದ ಸ್ಟಾರ್ ನಟ: ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ

ಮಲ್ಲಿಕಾ ಶೆರಾವತ್ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿದ್ದರು. ಬಾಲಿವುಡ್​ನಲ್ಲಿ ಗ್ಲಾಮರ್ ಅನ್ನು ಅತಿಯಾಗಿ ಬಳಸಿ ಜನಪ್ರಿಯತೆ ಗಳಿಸಿಕೊಂಡ ನಟಿ ಮಲ್ಲಿಕಾ. ಇದೀಗ ತಾವು ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾಗ ಅನುಭವಿಸಿದ ಸಮಸ್ಯೆಯನ್ನು ಮಲ್ಲಿಕಾ ಹೇಳಿಕೊಂಡಿದ್ದಾರೆ.

ಮಧ್ಯರಾತ್ರಿ ಮಲ್ಲಿಕಾ ರೂಂ ಬಾಗಿಲು ತಟ್ಟಿದ್ದ ಸ್ಟಾರ್ ನಟ: ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 05, 2024 | 8:11 PM

Share

ಬಾಲಿವುಡ್​ನಲ್ಲಿ ಬೋಲ್ಡ್ ಪಾತ್ರಗಳನ್ನು ಮಾಡಿ ಫೇಮಸ್ ಆಗಿದ್ದ ನಟಿ ಮಲ್ಲಿಕಾ ಶೆರಾವತ್ ಅವರು ಇತ್ತೀಚೆಗೆ ಯಾವುದೇ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. ಅವರು ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದೇ ಹೇಳಬಹುದು. ಅವರು ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅವರಿಗೆ ಆದ ಕಹಿ ಅನುಭವಗಳು ಒಂದೆರಡಲ್ಲ. ಅವರು ಈ ಮೊದಲು ತಮಗಾದ ಕಿರುಕುಳದ ಬಗ್ಗೆ ಓಪನ್ ಆಗಿ ಮಾತನಾಡಿದ್ದರು.

ಮಲ್ಲಿಕಾ ಅವರು ಸಿನಿಮಾ ಶೂಟ್ಗಾಗಿ ದೇಶ-ವಿದೇಶದಲ್ಲಿ ಸುತ್ತಾಡುತ್ತಿದ್ದರು. ಅವರು ಒಮ್ಮೆ ದುಬೈಗೆ ತೆರಳಿದ್ದರು. ಈ ವೇಳೆ ಅವರು ದೊಡ್ಡ ಸಿನಿಮಾದ ಚಿತ್ರೀಕರಣದ ಕಾರಣಕ್ಕೆ ಅವರು ದುಬೈಗೆ ತೆರಳಿದ್ದರು. ಅಲ್ಲಿ ಅವರಿಗೆ ಓರ್ವ ಸ್ಟಾರ್ ಹೀರೋನಿಂದಲೇ ಕಿರುಕುಳ ಆಗಿತ್ತು ಎನ್ನುವ ವಿಚಾರ ರಿವೀಲ್ ಆಗಿದೆ.

‘ನಾನು ದುಬೈನಲ್ಲಿ ಒಂದು ದೊಡ್ಡ ಸಿನಿಮಾ ಶೂಟ್ ಮಾಡುತ್ತಿದ್ದೆ. ಇದರಲ್ಲಿ ಹಲವು ಸ್ಟಾರ್ಗಳು ಇದ್ದರು. ಅದು ಸೂಪರ್ ಹಿಟ್ ಚಿತ್ರ. ಜನರು ಈ ಚಿತ್ರವನ್ನು ಇಷ್ಟಪಟ್ಟರು. ನಾನು ಇದರಲ್ಲಿ ಕಾಮಿಡಿ ರೋಲ್ ಮಾಡಿದ್ದೇನೆ. ಅಲ್ಲಿಯವರೆಗೆ ಎಲ್ಲವೂ ಚೆನ್ನಾಗಿತ್ತು. ಆ ಚಿತ್ರದ ಹೀರೋ ನನ್ನ ರೂಂನ ಬಾಗಿಲನ್ನು ಮಧ್ಯಾರಾತ್ರಿ ಬಂದು ತಟ್ಟಿದ’ ಎಂದು ಹೇಳಿಕೊಂಡಿದ್ದಾರೆ.

‘ಆತ ಬಾಗಿಲನ್ನು ಒಡೆದು ಹಾಕುತ್ತಾನೆ ಎಂದು ಭಯ ಆಯಿತು. ಆ ರೀತಿ ಆತ ಬಾಗಿಲನ್ನು ತಟ್ಟುತ್ತಿದ್ದ. ಆತನಿಗೆ ನನ್ನ ರೂಂಗೆ ಬರಬೇಕಿತ್ತು. ಹಾಗಾಗಬಾರದು ಎಂದುಕೊಂಡೆ. ಆ ಬಳಿಕ ನಾನು ಆ ಹೀರೋ ಜೊತೆ ಕೆಲಸ ಮಾಡಿಲ್ಲ’ ಎಂದಿದ್ದಾರೆ ಅವರು. ಇದು ಅವರಿಗೆ ನಡೆದ ಕಿರುಕುಳದ ಅನುಭವಗಳಲ್ಲಿ ಒಂದು. ಈ ರೀತಿಯ ಹಲವು ಘಟನೆಗಳು ನಡೆದಿವೆ. ಮಲ್ಲಿಕಾ ಎಲ್ಲಿಯೂ ಹೀರೋ ಹೆಸರನ್ನು ರಿವೀಲ್ ಮಾಡಿಲ್ಲ.

ಇದನ್ನೂ ಓದಿ:ಬೀಚ್​ನಲ್ಲಿ ಜಾಲಿ ಮೂಡ್​​ಗೆ ಜಾರಿದ ಮಲ್ಲಿಕಾ ಶೆರಾವತ್‌

‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾ ಅಕ್ಟೋಬರ್ 11ರಂದು ರಿಲೀಸ್ ಆಗಲಿದೆ. ಅವರು ಹಿಂದಿ ಚಿತ್ರರಂಗಕ್ಕೆ ಕೆಲವು ವರ್ಷಗಳ ಬಳಿಕ ಕಂಬ್ಯಾಕ್ ಮಾಡುತ್ತಿದ್ದಾರೆ. ತೃಪ್ತಿ ದಿಮ್ರಿ ಹಾಗೂ ರಾಜ್ಕುಮಾರ್ ರಾವ್ ನಟಿಸಿದ್ದಾರೆ.

ಮಲ್ಲಿಕಾ ಶೆರಾವತ್ ಬಗ್ಗೆ ಹೇಳಬೇಕು ಎಂದರೆ ಅವರು 2003ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಕ್ವಾಹಿಶ್’ ಸಿನಿಮಾ ಮೂಲಕ ನಾಯಕಿ ಆಗಿ ಮಿಂಚಿದರು. ಅವರು ಬೋಲ್ಡ್ ಪಾತ್ರಗಳನ್ನು ಮಾಡಿದ್ದೇ ಹೆಚ್ಚು. ಈ ಕಾರಣಕ್ಕೆ ಅವರನ್ನು ನೋಡುವ ರೀತಿ ಬೇರೆ ಆಯಿತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ