Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿನ್ನರ್ ಅಖಾಡ ಮಹಾಮಂಡಲೇಶ್ವರ ಸ್ಥಾನಕ್ಕೆ ರಾಜಿನಾಮೆ ನೀಡಿದ ಮಮತಾ ಕುಲಕರ್ಣಿ

ಸಾಕಷ್ಟು ವಿವಾದಗಳಿಂದ ಸುದ್ದಿ ಮಾಡಿದ ಮಾಜಿ ನಟಿ, ಸನ್ಯಾಸಿನಿ ಮಮತಾ ಕುಲಕರ್ಣಿ ಅವರು ಮಹಾಮಂಡಲೇಶ್ವರ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರ ಬಗ್ಗೆ ಸಖತ್ ಸುದ್ದಿ ಆಗಿತ್ತು. ಈಗ ಅವರು ವಿಡಿಯೋ ಮೂಲಕ ಕೆಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜಿನಾಮೆ ನೀಡಿದ್ದನ್ನು ಖಚಿತಪಡಿಸಿದ್ದಾರೆ.

ಕಿನ್ನರ್ ಅಖಾಡ ಮಹಾಮಂಡಲೇಶ್ವರ ಸ್ಥಾನಕ್ಕೆ ರಾಜಿನಾಮೆ ನೀಡಿದ ಮಮತಾ ಕುಲಕರ್ಣಿ
Mamta Kulkarni
Follow us
ಮದನ್​ ಕುಮಾರ್​
|

Updated on: Feb 10, 2025 | 6:41 PM

ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದ ಮಮತಾ ಕುಲಕರ್ಣಿ ಅವರು ಸನ್ಯಾಸತ್ವ ಸ್ವೀಕರಿಸಿದ್ದರು. ಇತ್ತೀಚೆಗೆ ಅವರಿಗೆ ಕಿನ್ನರ್ ಅಖಾಡದ ಮಹಾಮಂಡಲೇಶ್ವರ ಸ್ಥಾನವನ್ನು ನೀಡಲಾಗಿತ್ತು. ಅವರಿಗೆ ಈ ಸ್ಥಾನ ನೀಡಿದ ಬಳಿಕ ವಿರೋಧ ವ್ಯಕ್ತವಾಗಿತ್ತು. ಆದ್ದರಿಂದ ಅವರನ್ನು ಮಹಾಮಂಡಲೇಶ್ವರ ಸ್ಥಾನದಿಂದ ವಜಾ ಮಾಡಲಾಗಿತ್ತು. ಈಗ ಮಮತಾ ಕುಲಕರ್ಣಿ ಅವರು ರಾಜಿನಾಮೆ ನೀಡಿದ್ದಾರೆ. ವಿಡಿಯೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಮಮತಾ ಕುಲಕರ್ಣಿಗೆ ಮಹಾಮಂಡಲೇಶ್ವರ ಸ್ಥಾನ ನೀಡಿದ್ದಕ್ಕೆ ಆಚಾರ್ಯ ಮಹಾಮಂಡಲೇಶ್ವರ್ ಲಕ್ಷ್ಮಿ ನಾರಾಯಣ್ ತ್ರಿಪಾಠಿ ಹಾಗೂ ಕಿನ್ನರ್ ಅಖಾಡ ಸಂಸ್ಥಾಪಕ ರಿಷಿ ಅಜಯ್ ದಾಸ್ ನಡುವೆ ಬಿರುಕು ಮೂಡಿತ್ತು. ‘ಈಗ ನಾನು ಮಹಾಮಂಡಲೇಶ್ವರ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. 25 ವರ್ಷಗಳಿಂದ ನಾನು ಸಾಧ್ವಿ ಆಗಿದ್ದೇನೆ. ನಾನು ಸಾಧ್ವಿ ಆಗಿಯೇ ಉಳಿಯುತ್ತೇನೆ’ ಎಂದು ಮಮತಾ ಕುಲಕರ್ಣಿ ಹೇಳಿದ್ದಾರೆ.

ಇದನ್ನೂ ಓದಿ: ‘ಮಹಾಮಂಡಲೇಶ್ವರಿ’ ಪಟ್ಟ ಪಡೆಯಲು 10 ಕೋಟಿ ರೂಪಾಯಿ ನೀಡಿದ ನಟಿ ಮಮತಾ?

ಸನ್ಯಾನಿಸಿ ಆದ ಬಳಿಕ ಶ್ರೀ ಯಮಾಯಿ ಮಮತಾ ನಂದಗಿರಿ ಎಂಬ ಹೆಸರಿನಿಂದ ಮಮತಾ ಕುಲಕರ್ಣಿ ಅವರು ಗುರುತಿಸಿಕೊಂಡಿದ್ದರು. ಮಹಾಕುಂಭಮೇಳದಲ್ಲಿ ಜನವರಿ 24ರಂದು ಅವರನ್ನು ಕಿನ್ನರ್ ಅಖಾಡದ ಮಹಾಮಂಡಲೇಶ್ವರ ಆಗಿ ನೇಮಕ ಮಾಡಲಾಗಿತ್ತು. ಅದನ್ನು ಯೋಗ ಗುರು ಬಾಬಾ ರಾಮ್​ದೇವ್ ಅವರು ಟೀಕಿಸಿದ್ದರು. ಒಂದೇ ದಿನದಲ್ಲಿ ಯಾರೂ ಕೂಡ ಸನ್ಯಾಸತ್ವ ಪಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದರು.

‘ನಾನು ಮಹಾಮಂಡಲೇಶ್ವರ ಸ್ಥಾನಕ್ಕೆ ನೇಮಕ ಆದ ಬಳಿಕ ಎದ್ದಿರುವ ವಿವಾದ ಅನವಶ್ಯಕವಾಗಿದ್ದು. 25 ವರ್ಷಗಳ ಹಿಂದೆಯೇ ನಾನು ಬಾಲಿವುಡ್ ತೊರೆದಿದ್ದೆ. ಜನಪ್ರಿಯತೆಯಿಂದ ಮರೆಯಾಗಿದ್ದೆ. ಎಲ್ಲದರಿಂದಲೂ ದೂರ ಉಳಿದುಕೊಂಡೆ. ಈಗ ನಾನು ಮಾಡುವ ಎಲ್ಲ ಕೆಲಸಗಳನ್ನು ಜನರು ಟೀಕಿಸುತ್ತಿದ್ದಾರೆ. ಈಗ ನನ್ನನ್ನು ಮಹಾಮಂಡಲೇಶ್ವರ ಸ್ಥಾನಕ್ಕೆ ನೇಮಕ ಮಾಡಿದ್ದಕ್ಕೂ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಾನು ಕೈಲಾಸಕ್ಕೆ ಅಥವಾ ಮಾನಸ ಸರೋವರಕ್ಕೆ ಹೋಗುವ ಅವಶ್ಯಕತೆ ಇಲ್ಲ’ ಎಂದು ಹೇಳಿದ್ದಾರೆ ಮಮತಾ ಕುಲಕರ್ಣಿ. ಅವರು ಹಂಚಿಕೊಂಡ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ
ಬಹಳಷ್ಟು ಪಡಿತರ ಅಂಗಡಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ವಂಚನೆ
ಬಹಳಷ್ಟು ಪಡಿತರ ಅಂಗಡಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ವಂಚನೆ
ಕಾಳಿಂಗ ಸರ್ಪದೊಂದಿಗೆ ಭೀಕರ ಕಾಳಗ: ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ಕಾಳಿಂಗ ಸರ್ಪದೊಂದಿಗೆ ಭೀಕರ ಕಾಳಗ: ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ