AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಮನೆಗೆ ನುಗ್ಗಿದ ಯುವಕ; ಬಾಂದ್ರಾ ಪೊಲೀಸರಿಂದ ಬಂಧನ

ಅಭಿಮಾನಿ ಎಂದು ಹೇಳಿಕೊಂಡು ಬಂದಿರುವ 23 ವರ್ಷದ ಯುವಕನೊಬ್ಬ ಸಲ್ಮಾನ್ ಖಾನ್ ಮನೆಗೆ ನುಗ್ಗಿದ್ದಾನೆ. ಬಾಂದ್ರಾದಲ್ಲಿ ಇರುವ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ಗೆ ನುಗ್ಗಿರುವ ಆತನನ್ನು ಪೊಲೀಸರು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ಭದ್ರತೆ ನೀಡಿದ್ದರೂ ಕೂಡ ಇಂಥ ಘಟನೆಗಳು ನಡೆದಿದ್ದು, ಫ್ಯಾನ್ಸ್​ಗೆ ಆತಂಕ ಮೂಡಿದೆ.

ಸಲ್ಮಾನ್ ಖಾನ್ ಮನೆಗೆ ನುಗ್ಗಿದ ಯುವಕ; ಬಾಂದ್ರಾ ಪೊಲೀಸರಿಂದ ಬಂಧನ
Salman Khan
ಮದನ್​ ಕುಮಾರ್​
|

Updated on:May 22, 2025 | 3:17 PM

Share

ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಈಗಾಗಲೇ ಜೀವ ಬೆದರಿಕೆ ಇದೆ. ಹಾಗಾಗಿ ಅವರ ಮನೆಗೆ ಭದ್ರತೆ ನೀಡಲಾಗಿದೆ. ಆದರೂ ಕೂಡ ಭದ್ರತಾ ಲೋಪ ಆಗಿದೆ. ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್​ಮೆಂಟ್ (Galaxy Apartment) ಒಳಗೆ ನುಗ್ಗಿದ್ದಾನೆ. ಕೂಡಲೇ ಆತನನ್ನು ಬಂಧಿಸಲಾಗಿದೆ. ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡುವ ಸಲುವಾಗಿ ಅಪಾರ್ಟ್​ಮೆಂಟ್​ಗೆ ನುಗ್ಗಿದ್ದಾಗಿ ಆತ ಹೇಳಿಕೊಂಡಿದ್ದಾನೆ. ಸದ್ಯಕ್ಕೆ ಬಾಂದ್ರಾ ಪೊಲೀಸರು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ. ಈ ಘಟನೆ ಬಳಿಕ ಸಲ್ಮಾನ್ ಖಾನ್ ಮನೆ ಬಳಿ ಭದ್ರತೆ ಹೆಚ್ಚಿಸಲಾಗಿದೆ.

ಈ ಘಟನೆ ನಡೆದಿರುವುದು ಮೇ 20ರ ಸಂಜೆ 7.15ರ ಸುಮಾರಿಗೆ. ಸಲ್ಮಾನ್ ಖಾನ್ ಅವರ ಅಪಾರ್ಟ್​ಮೆಂಟ್​ಗೆ ನುಗ್ಗಿರುವ ವ್ಯಕ್ತಿಯನ್ನು 23 ವರ್ಷದ ಜಿತೇಂದ್ರ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಆತ ಛತ್ತಿಸ್​ಗಡ ಮೂಲದವನು. ಆತನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಆತ ಈ ರೀತಿ ನಡೆದುಕೊಂಡಿದ್ದರ ಹಿಂದೆ ಬೇರೆ ಏನಾದರೂ ಉದ್ದೇಶ ಇದೆಯೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ಈ ಮೊದಲು ಸಲ್ಮಾನ್ ಖಾನ್ ಅವರ ಮನೆ ಮೇಲೆ ಗುಂಡಿನ ದಾಳಿ ಮಾಡಲಾಗಿತ್ತು. ಆ ಘಟನೆ ನಡೆದ ನಂತರ ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ಭದ್ರತೆ ನೀಡಲಾಯಿತು. ಇಷ್ಟೆಲ್ಲ ಸೆಕ್ಯುರಿಟಿ ನೀಡಲಾಗಿದ್ದರೂ ಕೂಡ ಅಪರಿಚಿತ ವ್ಯಕ್ತಿಯು ಗ್ಯಾಲಕ್ಸಿ ಅಪಾರ್ಟ್​ಮೆಂಟ್ ಒಳಗೆ ನುಗ್ಗಿದ್ದಾನೆ. ಇದರಿಂದ ಭದ್ರತಾ ಲೋಪ ಆಗಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಈ ಸುದ್ದಿ ಕೇಳಿದ ಬಳಿಕ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಆದ್ದರಿಂದ ಸಲ್ಮಾನ್ ಖಾನ್ ಅವರು ಯಾವಾಗಲೂ ಜೀವ ಭಯದಲ್ಲೇ ಇರುವಂತಾಗಿದೆ. ಅದರ ನಡುವೆ ಕೆಲವರು ಮನೆಗೆ ನುಗ್ಗಲು ಯತ್ನಿಸಿರುವುದರಿಂದ ಅನುಮಾನ ಹೆಚ್ಚಾಗಿದೆ.

ಇದನ್ನೂ ಓದಿ: ಆಪರೇಷನ್ ಸಿಂದೂರ್ ಬಗ್ಗೆ ಸಲ್ಮಾನ್ ಖಾನ್ ಮೌನ; ಕದನ ವಿರಾಮಕ್ಕೆ ಖುಷಿ: ಜಾಡಿಸಿದ ನೆಟ್ಟಿಗರು

ಇದಲ್ಲದೇ ಮಹಿಳೆಯೊಬ್ಬರು ಕೂಡ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್​​ಮೆಮೆಂಟ್​ಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಆಕೆಯನ್ನು ಕೂಡ ಬಂಧಿಸಲಾಗಿದೆ. ಈ ಬಗ್ಗೆ ಎಎನ್​ಐ ವರದಿ ಮಾಡಿದೆ. ಮಹಿಳೆ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:16 pm, Thu, 22 May 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು