AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದರು. ಆಪ್ತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಸಲ್ಮಾನ್ ಖಾನ್​ಗೆ ಸಹಾಯ ಮಾಡುತ್ತಾರೆ ಎಂಬ ಕಾರಣದಿಂದಲೇ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಯಿತು. ಆ ಬಳಿಕ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಈಗ ಸಲ್ಮಾನ್ ಖಾನ್ ಬಳಿ ಒಬ್ಬರು ಕ್ಷಮೆ ಕೇಳಿದ್ದಾರೆ.

‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Oct 22, 2024 | 12:52 PM

Share

ಸಲ್ಮಾನ್ ಖಾನ್ ಅವರಿಗೆ ಸಾಕಷ್ಟು ಬೆದರಿಕೆಗಳು ಇವೆ. ಇದಕ್ಕೆಲ್ಲ ಕಾರಣ ಆಗಿರೋದು ಲಾರೆನ್ಸ್ ಬಿಷ್ಣೋಯ್. ಈತ ಸಲ್ಮಾನ್ ಖಾನ್​ನ ಕೊಲೆ ಮಾಡೋದಾಗಿ ನಿರಂತರವಾಗಿ ಬೆದರಿಕೆ ಹಾಕುತ್ತಲೇ ಇದ್ದ. ಈ ಪ್ರಕರಣವನ್ನು ಸೆಟಲ್​ಮೆಂಟ್ ಮಾಡಿಸೋದಾಗಿ ವ್ಯಕ್ತಿಯೋರ್ವ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದ. ಇದಕ್ಕಾಗಿ ಆತ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಈಗ ಈ ವ್ಯಕ್ತಿ ಕ್ಷಮೆ ಕೇಳಿದ್ದಾನೆ. ‘ಮಿಸ್ ಆಗಿ ಮೆಸೇಜ್ ಹೋಯ್ತು’ ಎಂದಿದ್ದಾನೆ.

‘ಸಲ್ಮಾನ್ ಖಾನ್ ಹತ್ಯೆ ಬಾಬಾ ಸಿದ್ಧಿಕಿ ಹತ್ಯೆಗಿಂತಲೂ ಭೀಕರವಾಗಿರುತ್ತದೆ’ ಎನ್ನುವ ಸಂದೇಶ ಬಂದಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರೇ ಮಾಡಿರಬಹುದು ಎಂದು ಊಹಿಸಲಾಗಿತ್ತು. ಇದಾದ ಬಳಿಕ ಪ್ರಕರಣ ಸೆಟಲ್​ ಮಾಡಲು ಐದು ಕೋಟಿ ರೂಪಾಯಿ ಕೇಳಿದ್ದ. ಈಗ ಇದೇ ವ್ಯಕ್ತಿ ಕ್ಷಮೆ ಕೇಳಿದ್ದಾನೆ.

‘ನನ್ನ ಸಂದೇಶ ಮಿಸ್ ಆಗಿ ಹೋಗಿದೆ. ಈ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ’ ಎಂದು ಆತ ಈಗ ಸಂದೇಶ ಕಳುಹಿಸಿದ್ದಾನೆ. ಇದಾದ ಬಳಿಕವೂ ಪೊಲೀಸರು ಪ್ರಕರಣವನ್ನು ಹಗುರವಾಗಿ ಸ್ವೀಕರಿಸಿಲ್ಲ. ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಸಂದೇಶ ಬಂದಿದ್ದು ಜಾರ್ಖಂಡದಿಂದ ಎನ್ನಲಾಗಿದೆ. ಆ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆತ ಕ್ಷಮೆ ಕೇಳಿದ ಹೊರತಾಗಿಯೂ ಆತನ ಬಂಧನಕ್ಕೆ ಹುಡುಕಾಟ ನಡೆದಿದೆ.

ಸಲ್ಮಾನ್ ಖಾನ್​ಗೆ ಈ ರೀತಿ ಬೆದರಿಕೆ ಬಂದಿರೋದು ಇದೇ ಮೊದಲೇನು ಅಲ್ಲ. ಇದಕ್ಕೆ ಸಂಬಂಧಿಸಿದ ಅನೇಕ ಘಟನೆಗಳು ನಡೆದಿವೆ. ಅದರಲ್ಲೂ ಬಿಷ್ಣೋಯ್ ಗ್ಯಾಂಗ್​ನವರು ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ. ಆತ ಜೈಲಿನಲ್ಲಿ ಇದ್ದುಕೊಂಡೇ ಎಲ್ಲವನ್ನೂ ಹ್ಯಾಂಡಲ್ ಮಾಡುತ್ತಿದ್ದಾನೆ.

ಇದನ್ನೂ ಓದಿ: ‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಲ್ಲು ಆಪ್ತ ಎನಿಸಿಕೊಂಡಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿಯನ್ನು ಬಿಷ್ಣೋಯ್ ಗ್ಯಾಂಗ್​ನವರೇ ಹತ್ಯೆ ಮಾಡಿದ್ದಾರೆ. ಇದಾದ ಬಳಿಕ ಸಲ್ಲು ವಿಚಲಿತರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?