AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದರು. ಆಪ್ತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಸಲ್ಮಾನ್ ಖಾನ್​ಗೆ ಸಹಾಯ ಮಾಡುತ್ತಾರೆ ಎಂಬ ಕಾರಣದಿಂದಲೇ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಯಿತು. ಆ ಬಳಿಕ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಈಗ ಸಲ್ಮಾನ್ ಖಾನ್ ಬಳಿ ಒಬ್ಬರು ಕ್ಷಮೆ ಕೇಳಿದ್ದಾರೆ.

‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Oct 22, 2024 | 12:52 PM

Share

ಸಲ್ಮಾನ್ ಖಾನ್ ಅವರಿಗೆ ಸಾಕಷ್ಟು ಬೆದರಿಕೆಗಳು ಇವೆ. ಇದಕ್ಕೆಲ್ಲ ಕಾರಣ ಆಗಿರೋದು ಲಾರೆನ್ಸ್ ಬಿಷ್ಣೋಯ್. ಈತ ಸಲ್ಮಾನ್ ಖಾನ್​ನ ಕೊಲೆ ಮಾಡೋದಾಗಿ ನಿರಂತರವಾಗಿ ಬೆದರಿಕೆ ಹಾಕುತ್ತಲೇ ಇದ್ದ. ಈ ಪ್ರಕರಣವನ್ನು ಸೆಟಲ್​ಮೆಂಟ್ ಮಾಡಿಸೋದಾಗಿ ವ್ಯಕ್ತಿಯೋರ್ವ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದ. ಇದಕ್ಕಾಗಿ ಆತ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಈಗ ಈ ವ್ಯಕ್ತಿ ಕ್ಷಮೆ ಕೇಳಿದ್ದಾನೆ. ‘ಮಿಸ್ ಆಗಿ ಮೆಸೇಜ್ ಹೋಯ್ತು’ ಎಂದಿದ್ದಾನೆ.

‘ಸಲ್ಮಾನ್ ಖಾನ್ ಹತ್ಯೆ ಬಾಬಾ ಸಿದ್ಧಿಕಿ ಹತ್ಯೆಗಿಂತಲೂ ಭೀಕರವಾಗಿರುತ್ತದೆ’ ಎನ್ನುವ ಸಂದೇಶ ಬಂದಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರೇ ಮಾಡಿರಬಹುದು ಎಂದು ಊಹಿಸಲಾಗಿತ್ತು. ಇದಾದ ಬಳಿಕ ಪ್ರಕರಣ ಸೆಟಲ್​ ಮಾಡಲು ಐದು ಕೋಟಿ ರೂಪಾಯಿ ಕೇಳಿದ್ದ. ಈಗ ಇದೇ ವ್ಯಕ್ತಿ ಕ್ಷಮೆ ಕೇಳಿದ್ದಾನೆ.

‘ನನ್ನ ಸಂದೇಶ ಮಿಸ್ ಆಗಿ ಹೋಗಿದೆ. ಈ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ’ ಎಂದು ಆತ ಈಗ ಸಂದೇಶ ಕಳುಹಿಸಿದ್ದಾನೆ. ಇದಾದ ಬಳಿಕವೂ ಪೊಲೀಸರು ಪ್ರಕರಣವನ್ನು ಹಗುರವಾಗಿ ಸ್ವೀಕರಿಸಿಲ್ಲ. ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಸಂದೇಶ ಬಂದಿದ್ದು ಜಾರ್ಖಂಡದಿಂದ ಎನ್ನಲಾಗಿದೆ. ಆ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆತ ಕ್ಷಮೆ ಕೇಳಿದ ಹೊರತಾಗಿಯೂ ಆತನ ಬಂಧನಕ್ಕೆ ಹುಡುಕಾಟ ನಡೆದಿದೆ.

ಸಲ್ಮಾನ್ ಖಾನ್​ಗೆ ಈ ರೀತಿ ಬೆದರಿಕೆ ಬಂದಿರೋದು ಇದೇ ಮೊದಲೇನು ಅಲ್ಲ. ಇದಕ್ಕೆ ಸಂಬಂಧಿಸಿದ ಅನೇಕ ಘಟನೆಗಳು ನಡೆದಿವೆ. ಅದರಲ್ಲೂ ಬಿಷ್ಣೋಯ್ ಗ್ಯಾಂಗ್​ನವರು ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ. ಆತ ಜೈಲಿನಲ್ಲಿ ಇದ್ದುಕೊಂಡೇ ಎಲ್ಲವನ್ನೂ ಹ್ಯಾಂಡಲ್ ಮಾಡುತ್ತಿದ್ದಾನೆ.

ಇದನ್ನೂ ಓದಿ: ‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಲ್ಲು ಆಪ್ತ ಎನಿಸಿಕೊಂಡಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿಯನ್ನು ಬಿಷ್ಣೋಯ್ ಗ್ಯಾಂಗ್​ನವರೇ ಹತ್ಯೆ ಮಾಡಿದ್ದಾರೆ. ಇದಾದ ಬಳಿಕ ಸಲ್ಲು ವಿಚಲಿತರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!