‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದರು. ಆಪ್ತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಸಲ್ಮಾನ್ ಖಾನ್​ಗೆ ಸಹಾಯ ಮಾಡುತ್ತಾರೆ ಎಂಬ ಕಾರಣದಿಂದಲೇ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಯಿತು. ಆ ಬಳಿಕ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಈಗ ಸಲ್ಮಾನ್ ಖಾನ್ ಬಳಿ ಒಬ್ಬರು ಕ್ಷಮೆ ಕೇಳಿದ್ದಾರೆ.

‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ
ಸಲ್ಮಾನ್ ಖಾನ್
Follow us
|

Updated on: Oct 22, 2024 | 12:52 PM

ಸಲ್ಮಾನ್ ಖಾನ್ ಅವರಿಗೆ ಸಾಕಷ್ಟು ಬೆದರಿಕೆಗಳು ಇವೆ. ಇದಕ್ಕೆಲ್ಲ ಕಾರಣ ಆಗಿರೋದು ಲಾರೆನ್ಸ್ ಬಿಷ್ಣೋಯ್. ಈತ ಸಲ್ಮಾನ್ ಖಾನ್​ನ ಕೊಲೆ ಮಾಡೋದಾಗಿ ನಿರಂತರವಾಗಿ ಬೆದರಿಕೆ ಹಾಕುತ್ತಲೇ ಇದ್ದ. ಈ ಪ್ರಕರಣವನ್ನು ಸೆಟಲ್​ಮೆಂಟ್ ಮಾಡಿಸೋದಾಗಿ ವ್ಯಕ್ತಿಯೋರ್ವ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದ. ಇದಕ್ಕಾಗಿ ಆತ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಈಗ ಈ ವ್ಯಕ್ತಿ ಕ್ಷಮೆ ಕೇಳಿದ್ದಾನೆ. ‘ಮಿಸ್ ಆಗಿ ಮೆಸೇಜ್ ಹೋಯ್ತು’ ಎಂದಿದ್ದಾನೆ.

‘ಸಲ್ಮಾನ್ ಖಾನ್ ಹತ್ಯೆ ಬಾಬಾ ಸಿದ್ಧಿಕಿ ಹತ್ಯೆಗಿಂತಲೂ ಭೀಕರವಾಗಿರುತ್ತದೆ’ ಎನ್ನುವ ಸಂದೇಶ ಬಂದಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರೇ ಮಾಡಿರಬಹುದು ಎಂದು ಊಹಿಸಲಾಗಿತ್ತು. ಇದಾದ ಬಳಿಕ ಪ್ರಕರಣ ಸೆಟಲ್​ ಮಾಡಲು ಐದು ಕೋಟಿ ರೂಪಾಯಿ ಕೇಳಿದ್ದ. ಈಗ ಇದೇ ವ್ಯಕ್ತಿ ಕ್ಷಮೆ ಕೇಳಿದ್ದಾನೆ.

‘ನನ್ನ ಸಂದೇಶ ಮಿಸ್ ಆಗಿ ಹೋಗಿದೆ. ಈ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ’ ಎಂದು ಆತ ಈಗ ಸಂದೇಶ ಕಳುಹಿಸಿದ್ದಾನೆ. ಇದಾದ ಬಳಿಕವೂ ಪೊಲೀಸರು ಪ್ರಕರಣವನ್ನು ಹಗುರವಾಗಿ ಸ್ವೀಕರಿಸಿಲ್ಲ. ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಸಂದೇಶ ಬಂದಿದ್ದು ಜಾರ್ಖಂಡದಿಂದ ಎನ್ನಲಾಗಿದೆ. ಆ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆತ ಕ್ಷಮೆ ಕೇಳಿದ ಹೊರತಾಗಿಯೂ ಆತನ ಬಂಧನಕ್ಕೆ ಹುಡುಕಾಟ ನಡೆದಿದೆ.

ಸಲ್ಮಾನ್ ಖಾನ್​ಗೆ ಈ ರೀತಿ ಬೆದರಿಕೆ ಬಂದಿರೋದು ಇದೇ ಮೊದಲೇನು ಅಲ್ಲ. ಇದಕ್ಕೆ ಸಂಬಂಧಿಸಿದ ಅನೇಕ ಘಟನೆಗಳು ನಡೆದಿವೆ. ಅದರಲ್ಲೂ ಬಿಷ್ಣೋಯ್ ಗ್ಯಾಂಗ್​ನವರು ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ. ಆತ ಜೈಲಿನಲ್ಲಿ ಇದ್ದುಕೊಂಡೇ ಎಲ್ಲವನ್ನೂ ಹ್ಯಾಂಡಲ್ ಮಾಡುತ್ತಿದ್ದಾನೆ.

ಇದನ್ನೂ ಓದಿ: ‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಲ್ಲು ಆಪ್ತ ಎನಿಸಿಕೊಂಡಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿಯನ್ನು ಬಿಷ್ಣೋಯ್ ಗ್ಯಾಂಗ್​ನವರೇ ಹತ್ಯೆ ಮಾಡಿದ್ದಾರೆ. ಇದಾದ ಬಳಿಕ ಸಲ್ಲು ವಿಚಲಿತರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು