AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ

ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದರು. ಆಪ್ತನ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಸಲ್ಮಾನ್ ಖಾನ್​ಗೆ ಸಹಾಯ ಮಾಡುತ್ತಾರೆ ಎಂಬ ಕಾರಣದಿಂದಲೇ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಯಿತು. ಆ ಬಳಿಕ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಯಿತು. ಈಗ ಸಲ್ಮಾನ್ ಖಾನ್ ಬಳಿ ಒಬ್ಬರು ಕ್ಷಮೆ ಕೇಳಿದ್ದಾರೆ.

‘ಆ ಮೆಸೇಜ್ ಮಿಸ್ ಆಗಿ ಹೋಯ್ತು’; ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿ ಕ್ಷಮೆ ಕೇಳಿದ ವ್ಯಕ್ತಿ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Oct 22, 2024 | 12:52 PM

Share

ಸಲ್ಮಾನ್ ಖಾನ್ ಅವರಿಗೆ ಸಾಕಷ್ಟು ಬೆದರಿಕೆಗಳು ಇವೆ. ಇದಕ್ಕೆಲ್ಲ ಕಾರಣ ಆಗಿರೋದು ಲಾರೆನ್ಸ್ ಬಿಷ್ಣೋಯ್. ಈತ ಸಲ್ಮಾನ್ ಖಾನ್​ನ ಕೊಲೆ ಮಾಡೋದಾಗಿ ನಿರಂತರವಾಗಿ ಬೆದರಿಕೆ ಹಾಕುತ್ತಲೇ ಇದ್ದ. ಈ ಪ್ರಕರಣವನ್ನು ಸೆಟಲ್​ಮೆಂಟ್ ಮಾಡಿಸೋದಾಗಿ ವ್ಯಕ್ತಿಯೋರ್ವ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದ. ಇದಕ್ಕಾಗಿ ಆತ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಈಗ ಈ ವ್ಯಕ್ತಿ ಕ್ಷಮೆ ಕೇಳಿದ್ದಾನೆ. ‘ಮಿಸ್ ಆಗಿ ಮೆಸೇಜ್ ಹೋಯ್ತು’ ಎಂದಿದ್ದಾನೆ.

‘ಸಲ್ಮಾನ್ ಖಾನ್ ಹತ್ಯೆ ಬಾಬಾ ಸಿದ್ಧಿಕಿ ಹತ್ಯೆಗಿಂತಲೂ ಭೀಕರವಾಗಿರುತ್ತದೆ’ ಎನ್ನುವ ಸಂದೇಶ ಬಂದಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರೇ ಮಾಡಿರಬಹುದು ಎಂದು ಊಹಿಸಲಾಗಿತ್ತು. ಇದಾದ ಬಳಿಕ ಪ್ರಕರಣ ಸೆಟಲ್​ ಮಾಡಲು ಐದು ಕೋಟಿ ರೂಪಾಯಿ ಕೇಳಿದ್ದ. ಈಗ ಇದೇ ವ್ಯಕ್ತಿ ಕ್ಷಮೆ ಕೇಳಿದ್ದಾನೆ.

‘ನನ್ನ ಸಂದೇಶ ಮಿಸ್ ಆಗಿ ಹೋಗಿದೆ. ಈ ಘಟನೆ ಬಗ್ಗೆ ಕ್ಷಮೆ ಕೇಳುತ್ತೇನೆ’ ಎಂದು ಆತ ಈಗ ಸಂದೇಶ ಕಳುಹಿಸಿದ್ದಾನೆ. ಇದಾದ ಬಳಿಕವೂ ಪೊಲೀಸರು ಪ್ರಕರಣವನ್ನು ಹಗುರವಾಗಿ ಸ್ವೀಕರಿಸಿಲ್ಲ. ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಸಂದೇಶ ಬಂದಿದ್ದು ಜಾರ್ಖಂಡದಿಂದ ಎನ್ನಲಾಗಿದೆ. ಆ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆತ ಕ್ಷಮೆ ಕೇಳಿದ ಹೊರತಾಗಿಯೂ ಆತನ ಬಂಧನಕ್ಕೆ ಹುಡುಕಾಟ ನಡೆದಿದೆ.

ಸಲ್ಮಾನ್ ಖಾನ್​ಗೆ ಈ ರೀತಿ ಬೆದರಿಕೆ ಬಂದಿರೋದು ಇದೇ ಮೊದಲೇನು ಅಲ್ಲ. ಇದಕ್ಕೆ ಸಂಬಂಧಿಸಿದ ಅನೇಕ ಘಟನೆಗಳು ನಡೆದಿವೆ. ಅದರಲ್ಲೂ ಬಿಷ್ಣೋಯ್ ಗ್ಯಾಂಗ್​ನವರು ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ. ಆತ ಜೈಲಿನಲ್ಲಿ ಇದ್ದುಕೊಂಡೇ ಎಲ್ಲವನ್ನೂ ಹ್ಯಾಂಡಲ್ ಮಾಡುತ್ತಿದ್ದಾನೆ.

ಇದನ್ನೂ ಓದಿ: ‘ಸಿಂಘಂ ಅಗೇನ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಪಾತ್ರವೇ ಕ್ಯಾನ್ಸಲ್; ಕಾರಣ ಏನು?

ಸಲ್ಮಾನ್ ಖಾನ್ ಅವರು ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಸಲ್ಲು ಆಪ್ತ ಎನಿಸಿಕೊಂಡಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿಯನ್ನು ಬಿಷ್ಣೋಯ್ ಗ್ಯಾಂಗ್​ನವರೇ ಹತ್ಯೆ ಮಾಡಿದ್ದಾರೆ. ಇದಾದ ಬಳಿಕ ಸಲ್ಲು ವಿಚಲಿತರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!