AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​’ ನಟ ಮನೋಜ್​ ಬಾಜ್​ಪಾಯಿ​ ಲೋಕಸಭಾ ಚುನಾವಣೆಗೆ ನಿಲ್ತಾರಾ? ಸಿಕ್ತು ಸ್ಪಷ್ಟನೆ

ಅನೇಕ ಕಲಾವಿದರು ರಾಜಕೀಯಕ್ಕೆ ಕಾಲಿಟ್ಟು ಯಶಸ್ವಿ ಆಗಿದ್ದಾರೆ. ಮನೋಜ್​ ಬಾಜ್​ಪಾಯಿ ಕೂಡ ಅದೇ ಹಾದಿಯಲ್ಲಿದ್ದಾರಾ ಎಂಬ ಅನುಮಾನ ಕೆಲವರಿಗೆ ಮೂಡಿದೆ. ಬಿಹಾರದ ಪಶ್ಚಿಮ ಚಂಪಾರಣ್​ ಕ್ಷೇತ್ರದಿಂದ ಅವರು ಸ್ಪರ್ಧಿಸುತ್ತಾರೆ ಎಂದು ಸುದ್ದಿ ಪ್ರಕಟ ಆಗಿದೆ. ಅದಕ್ಕೆ ಮನೋಜ್​ ಬಾಜ್​ಪಾಯಿ ಪ್ರತಿಕ್ರಿಯೆ ನೀಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​’ ನಟ ಮನೋಜ್​ ಬಾಜ್​ಪಾಯಿ​ ಲೋಕಸಭಾ ಚುನಾವಣೆಗೆ ನಿಲ್ತಾರಾ? ಸಿಕ್ತು ಸ್ಪಷ್ಟನೆ
ಮನೋಜ್​ ಬಾಜ್​ಪಾಯಿ
ಮದನ್​ ಕುಮಾರ್​
|

Updated on: Jan 05, 2024 | 12:47 PM

Share

ನಟ ಮನೋಜ್​ ಬಾಜ್​ಪಾಯಿ (Manoj Bajpayee) ಅವರಿಗೆ ಸಖತ್​ ಬೇಡಿಕೆ ಇದೆ. ಸಿನಿಮಾ ಮಾತ್ರವಲ್ಲದೇ ವೆಬ್​ ಸಿರೀಸ್​ ಲೋಕದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅನೇಕ ಸಾಮಾಜಿಕ ವಿಚಾರಗಳ ಬಗ್ಗೆ ಅವರು ಆಗಾಗ ಮಾತನಾಡುತ್ತಾರೆ. ಹಾಗಾಗಿ ಅವರು ಎಲೆಕ್ಷನ್​ಗೆ ನಿಲ್ಲುವ ಸಾಧ್ಯತೆ ಇದೆ ಎಂಬ ಸುದ್ದಿ ಹರಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಅವರು ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿಬಂದಿದೆ. ಅದಕ್ಕೆ ಸ್ವತಃ ಮನೋಜ್​ ಬಾಜ್​ಪಾಯಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸುದ್ದಿಯಲ್ಲಿ ಹುರುಳಿಲ್ಲ ಎಂದು ಅವರು ಹೇಳಿದ್ದಾರೆ.

ಜನಪ್ರಿಯ ನಟರಿಗೂ ರಾಜಕೀಯಕ್ಕೂ ಹತ್ತಿರದ ನಂಟು ಇದೆ. ಅನೇಕ ಕಲಾವಿದರು ರಾಜಕೀಯಕ್ಕೆ ಕಾಲಿಟ್ಟು ಯಶಸ್ವಿ ಆಗಿದ್ದಾರೆ. ಮನೋಜ್​ ಬಾಜ್​ಪಾಯಿ ಕೂಡ ಅದೇ ಹಾದಿಯಲ್ಲಿದ್ದಾರಾ ಎಂಬ ಅನುಮಾನ ಕೆಲವರಿಗೆ ಮೂಡಿದೆ. ಬಿಹಾರದ ಪಶ್ಚಿಮ ಚಂಪಾರಣ್​ ಕ್ಷೇತ್ರದಿಂದ ಅವರು ಸ್ಪರ್ಧಿಸುತ್ತಾರೆ ಎಂದು ಸುದ್ದಿ ಪ್ರಕಟ ಆಗಿದೆ. ಅದಕ್ಕೆ ಟ್ವಿಟರ್​ ಮೂಲಕ ಪ್ರತಿಕ್ರಿಯೆ ನೀಡಿರುವ ಮನೋಜ್​ ಬಾಜ್​ಪಾಯಿ ಅವರು ತಮ್ಮದೇ ರೀತಿಯಲ್ಲಿ ಉತ್ತರಿಸಿದ್ದಾರೆ.

Manoj Bajpayee: ಶೂ ಇಲ್ಲದೇ ಬಡವನಂತೆ ನಿಂತಿದ್ದ ಮನೋಜ್​ ಬಾಜಪಾಯಿ ಜೊತೆ ಶಾರುಖ್​ ನಡೆದುಕೊಂಡಿದ್ದು ಹೇಗೆ?​

‘ಈ ವಿಷಯವನ್ನು ನಿಮಗೆ ಯಾರು ಹೇಳಿದ್ದಾರೆ ಎಂಬುದನ್ನು ತಿಳಿಸಿ ಅಥವಾ ನಿನ್ನೆ ರಾತ್ರಿ ನಿಮಗೆ ಈ ರೀತಿ ಕನಸು ಬಿದ್ದಿತ್ತಾ’ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮ ರಾಜಕೀಯದ ಎಂಟ್ರಿ ಕುರಿತ ಸುದ್ದಿಯಲ್ಲಿ ಹುರುಳಿಲ್ಲ ಎಂಬುದನ್ನು ಮನೋಜ್​ ಬಾಜ್​ಪಾಯಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಅವರು ಕೆಲವು ರಾಜಕೀಯ ನಾಯಕರನ್ನು ಭೇಟಿ ಆಗಿದ್ದರು. ಆ ಬಳಿಕ ಕೆಲವು ಅಂತೆ-ಕಂತೆಗಳು ಹುಟ್ಟಿಕೊಂಡವು.

ಹಲವು ವರ್ಷಗಳಿಂದ ಮನೋಜ್​ ಬಾಜ್​ಪಾಯಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರ ಅಭಿಮಾನಿ ಬಳಗ ಕೂಡ ಹಿರಿದಾಗಿದೆ. ಹಿಂದಿ, ತೆಲುಗು, ತಮಿಳಿನ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸರಣಿಯ ಮೂಲಕ ಅವರು ಒಟಿಟಿ ಕ್ಷೇತ್ರದಲ್ಲಿ ಫೇಮಸ್​ ಆಗಿದ್ದಾರೆ. ‘ಪದ್ಮಶ್ರೀ’ ಪ್ರಶಸ್ತಿ ಕೂಡ ಅವರಿಗೆ ಸಿಕ್ಕಿದೆ. ಸದ್ಯ ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ..

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ