AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​’ ನಟ ಮನೋಜ್​ ಬಾಜ್​ಪಾಯಿ​ ಲೋಕಸಭಾ ಚುನಾವಣೆಗೆ ನಿಲ್ತಾರಾ? ಸಿಕ್ತು ಸ್ಪಷ್ಟನೆ

ಅನೇಕ ಕಲಾವಿದರು ರಾಜಕೀಯಕ್ಕೆ ಕಾಲಿಟ್ಟು ಯಶಸ್ವಿ ಆಗಿದ್ದಾರೆ. ಮನೋಜ್​ ಬಾಜ್​ಪಾಯಿ ಕೂಡ ಅದೇ ಹಾದಿಯಲ್ಲಿದ್ದಾರಾ ಎಂಬ ಅನುಮಾನ ಕೆಲವರಿಗೆ ಮೂಡಿದೆ. ಬಿಹಾರದ ಪಶ್ಚಿಮ ಚಂಪಾರಣ್​ ಕ್ಷೇತ್ರದಿಂದ ಅವರು ಸ್ಪರ್ಧಿಸುತ್ತಾರೆ ಎಂದು ಸುದ್ದಿ ಪ್ರಕಟ ಆಗಿದೆ. ಅದಕ್ಕೆ ಮನೋಜ್​ ಬಾಜ್​ಪಾಯಿ ಪ್ರತಿಕ್ರಿಯೆ ನೀಡಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್​’ ನಟ ಮನೋಜ್​ ಬಾಜ್​ಪಾಯಿ​ ಲೋಕಸಭಾ ಚುನಾವಣೆಗೆ ನಿಲ್ತಾರಾ? ಸಿಕ್ತು ಸ್ಪಷ್ಟನೆ
ಮನೋಜ್​ ಬಾಜ್​ಪಾಯಿ
ಮದನ್​ ಕುಮಾರ್​
|

Updated on: Jan 05, 2024 | 12:47 PM

Share

ನಟ ಮನೋಜ್​ ಬಾಜ್​ಪಾಯಿ (Manoj Bajpayee) ಅವರಿಗೆ ಸಖತ್​ ಬೇಡಿಕೆ ಇದೆ. ಸಿನಿಮಾ ಮಾತ್ರವಲ್ಲದೇ ವೆಬ್​ ಸಿರೀಸ್​ ಲೋಕದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅನೇಕ ಸಾಮಾಜಿಕ ವಿಚಾರಗಳ ಬಗ್ಗೆ ಅವರು ಆಗಾಗ ಮಾತನಾಡುತ್ತಾರೆ. ಹಾಗಾಗಿ ಅವರು ಎಲೆಕ್ಷನ್​ಗೆ ನಿಲ್ಲುವ ಸಾಧ್ಯತೆ ಇದೆ ಎಂಬ ಸುದ್ದಿ ಹರಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಅವರು ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿಬಂದಿದೆ. ಅದಕ್ಕೆ ಸ್ವತಃ ಮನೋಜ್​ ಬಾಜ್​ಪಾಯಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸುದ್ದಿಯಲ್ಲಿ ಹುರುಳಿಲ್ಲ ಎಂದು ಅವರು ಹೇಳಿದ್ದಾರೆ.

ಜನಪ್ರಿಯ ನಟರಿಗೂ ರಾಜಕೀಯಕ್ಕೂ ಹತ್ತಿರದ ನಂಟು ಇದೆ. ಅನೇಕ ಕಲಾವಿದರು ರಾಜಕೀಯಕ್ಕೆ ಕಾಲಿಟ್ಟು ಯಶಸ್ವಿ ಆಗಿದ್ದಾರೆ. ಮನೋಜ್​ ಬಾಜ್​ಪಾಯಿ ಕೂಡ ಅದೇ ಹಾದಿಯಲ್ಲಿದ್ದಾರಾ ಎಂಬ ಅನುಮಾನ ಕೆಲವರಿಗೆ ಮೂಡಿದೆ. ಬಿಹಾರದ ಪಶ್ಚಿಮ ಚಂಪಾರಣ್​ ಕ್ಷೇತ್ರದಿಂದ ಅವರು ಸ್ಪರ್ಧಿಸುತ್ತಾರೆ ಎಂದು ಸುದ್ದಿ ಪ್ರಕಟ ಆಗಿದೆ. ಅದಕ್ಕೆ ಟ್ವಿಟರ್​ ಮೂಲಕ ಪ್ರತಿಕ್ರಿಯೆ ನೀಡಿರುವ ಮನೋಜ್​ ಬಾಜ್​ಪಾಯಿ ಅವರು ತಮ್ಮದೇ ರೀತಿಯಲ್ಲಿ ಉತ್ತರಿಸಿದ್ದಾರೆ.

Manoj Bajpayee: ಶೂ ಇಲ್ಲದೇ ಬಡವನಂತೆ ನಿಂತಿದ್ದ ಮನೋಜ್​ ಬಾಜಪಾಯಿ ಜೊತೆ ಶಾರುಖ್​ ನಡೆದುಕೊಂಡಿದ್ದು ಹೇಗೆ?​

‘ಈ ವಿಷಯವನ್ನು ನಿಮಗೆ ಯಾರು ಹೇಳಿದ್ದಾರೆ ಎಂಬುದನ್ನು ತಿಳಿಸಿ ಅಥವಾ ನಿನ್ನೆ ರಾತ್ರಿ ನಿಮಗೆ ಈ ರೀತಿ ಕನಸು ಬಿದ್ದಿತ್ತಾ’ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮ ರಾಜಕೀಯದ ಎಂಟ್ರಿ ಕುರಿತ ಸುದ್ದಿಯಲ್ಲಿ ಹುರುಳಿಲ್ಲ ಎಂಬುದನ್ನು ಮನೋಜ್​ ಬಾಜ್​ಪಾಯಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಅವರು ಕೆಲವು ರಾಜಕೀಯ ನಾಯಕರನ್ನು ಭೇಟಿ ಆಗಿದ್ದರು. ಆ ಬಳಿಕ ಕೆಲವು ಅಂತೆ-ಕಂತೆಗಳು ಹುಟ್ಟಿಕೊಂಡವು.

ಹಲವು ವರ್ಷಗಳಿಂದ ಮನೋಜ್​ ಬಾಜ್​ಪಾಯಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರ ಅಭಿಮಾನಿ ಬಳಗ ಕೂಡ ಹಿರಿದಾಗಿದೆ. ಹಿಂದಿ, ತೆಲುಗು, ತಮಿಳಿನ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸರಣಿಯ ಮೂಲಕ ಅವರು ಒಟಿಟಿ ಕ್ಷೇತ್ರದಲ್ಲಿ ಫೇಮಸ್​ ಆಗಿದ್ದಾರೆ. ‘ಪದ್ಮಶ್ರೀ’ ಪ್ರಶಸ್ತಿ ಕೂಡ ಅವರಿಗೆ ಸಿಕ್ಕಿದೆ. ಸದ್ಯ ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ..

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?