AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್​ ಸಿನಿಮಾಗಳ ಎದುರು ಹಿಂದಿ ಚಿತ್ರಗಳು ಸೋತಿದ್ದು ಯಾಕೆ? ಎಲ್ಲವನ್ನೂ ವಿವರಿಸಿದ ಮನೋಜ್​ ಬಾಜ್​ಪಾಯಿ

Manoj Bajpayee: ‘ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳುವುದಿಲ್ಲ. ಮುಖ್ಯಧಾರೆಯ ಸಿನಿಮಾಗಳನ್ನು ಹೇಗೆ ಮಾಡಬೇಕು ಎಂಬ ಪಾಠವನ್ನು ದಕ್ಷಿಣ ಭಾರತದವರನ್ನು ನೋಡಿ ಬಾಲಿವುಡ್​ನವರು ಕಲಿಯಬೇಕು’ ಎಂದು ಮನೋಜ್​ ಬಾಜ್​ಪಾಯಿ ಹೇಳಿದ್ದಾರೆ.

ಸೌತ್​ ಸಿನಿಮಾಗಳ ಎದುರು ಹಿಂದಿ ಚಿತ್ರಗಳು ಸೋತಿದ್ದು ಯಾಕೆ? ಎಲ್ಲವನ್ನೂ ವಿವರಿಸಿದ ಮನೋಜ್​ ಬಾಜ್​ಪಾಯಿ
ಮನೋಜ್​ ಬಾಜ್​ಪಾಯಿ
TV9 Web
| Edited By: |

Updated on: Apr 30, 2022 | 10:20 AM

Share

ದಕ್ಷಿಣ ಭಾರತದ ಸಿನಿಮಾಗಳು ಮಾಡುತ್ತಿರುವ ಮೋಡಿ ಕಂಡು ಬಾಲಿವುಡ್​ ಮಂದಿ ಬೆರಗಾಗಿದ್ದಾರೆ. ಕನ್ನಡ ಮತ್ತು ತೆಲುಗಿನ ಸಿನಿಮಾಗಳು ಹಿಂದಿ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿವೆ. ‘ಕೆಜಿಎಫ್​: ಚಾಪ್ಟರ್​ 2’ (KGF 2), ‘ಪುಷ್ಪ’, ‘ಆರ್​ಆರ್​ಆರ್​’ ಮುಂತಾದ ಸಿನಿಮಾಗಳು ಧೂಳೆಬ್ಬಿಸಿವೆ. ದಕ್ಷಿಣ ಭಾರತದ ಸಿನಿಮಾಗಳ ಎದುರು ಪೈಪೋಟಿ ನೀಡಲು ಬಾಲಿವುಡ್​ ಸ್ಟಾರ್​ ಹೀರೋಗಳಿಗೂ ಸಾಧ್ಯವಾಗುತ್ತಿಲ್ಲ. ಉತ್ತರ ಭಾರತದ ಜನರು ದಕ್ಷಿಣದ ಡಬ್ಬಿಂಗ್​ ಸಿನಿಮಾಗಳಿಗೆ ಹೆಚ್ಚು ಮನ್ನಣೆ ನೀಡುತ್ತಿದ್ದಾರೆ. ಮೂಲ ಹಿಂದಿ ಚಿತ್ರಗಳು ಸೋತು ಸುಣ್ಣ ಆಗುತ್ತಿವೆ. ಬಾಲಿವುಡ್​ (Bollywood) ಮಂದಿಗೆ ಇಂಥ ಪರಿಸ್ಥಿತಿ ಯಾಕೆ ಬಂತು ಎಂಬುದನ್ನು ಈಗ ಚರ್ಚೆ ಮಾಡಲಾಗುತ್ತಿದೆ. ಸ್ವತಃ ಬಾಲಿವುಡ್​ ಸೆಲೆಬ್ರಿಟಿಗಳೇ ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಖ್ಯಾತ ನಟ ಮನೋಜ್​ ಬಾಜ್​ಪಾಯಿ (Manoj Bajpayee) ಅವರು ಕೂಡ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ದಕ್ಷಿಣ ಭಾರತದ ಚಿತ್ರರಂಗಕ್ಕೂ ಬಾಲಿವುಡ್​ಗೂ ಇರುವ ವ್ಯತ್ಯಾಸ ಏನು ಎಂಬುದನ್ನು ಅವರು ಗುರುತಿಸಿದ್ದಾರೆ. ಸೌತ್​ ಸಿನಿಮಾಗಳನ್ನು ನೋಡಿ ಹಿಂದಿ ಚಿತ್ರರಂಗದವರು ಕಲಿಯಬೇಕಿದೆ ಎಂದು ಅವರು ಹೇಳಿದ್ದಾರೆ.

‘ದಕ್ಷಿಣ ಭಾರತದ ಸಿನಿಮಾಗಳು ಯಾವ ಮಟ್ಟಕ್ಕೆ ಬ್ಲಾಕ್​ ಬಸ್ಟರ್​ ಆಗುತ್ತಿವೆ ಎಂದರೆ ನನ್ನ ವಿಷಯ ಬಿಡಿ, ಬಾಲಿವುಡ್​ನ ಪ್ರಮುಖ ಫಿಲ್ಮ್​ ಮೇಕರ್​ಗಳಿಗೆ ಭಯ ಹುಟ್ಟಿದೆ. ಏನು ಮಾಡಬೇಕು ಎಂಬುದೇ ಅವರಿಗೆ ತೋಚುತ್ತಿಲ್ಲ.​ ದಕ್ಷಿಣ ಭಾರತದವರು ತುಂಬ ಪ್ಯಾಷನೇಟ್​ ಆಗಿ ಸಿನಿಮಾ ಮಾಡುತ್ತಾರೆ. ಯಾವುದರಲ್ಲೂ ರಾಜಿ ಆಗಲ್ಲ. ತಾವು ಜಗತ್ತಿನ ದಿ ಬೆಸ್ಟ್​ ದೃಶ್ಯವನ್ನು ಚಿತ್ರೀಕರಿಸುತ್ತಿದ್ದೇವೆ ಎಂಬ ಭಾವನೆಯಲ್ಲೇ ಅವರು ಶೂಟಿಂಗ್​ ಮಾಡುತ್ತಾರೆ. ತುಂಬ ಆಲೋಚನೆ ಮಾಡುತ್ತಾರೆ. ಪ್ರೇಕ್ಷಕರ ಬಗ್ಗೆ ಹಗುರವಾಗಿ ಒಮ್ಮೆ ಕೂಡ ಮಾತನಾಡುವುದಿಲ್ಲ’ ಎಂದು ಮನೋಜ್​ ಬಾಜ್​ಪಾಯಿ ಹೇಳಿದ್ದಾರೆ.

‘ಇದು ಮಾಸ್​ ಆಗಿದೆ, ಹಾಗಾಗಿ ನಡೆದು ಬಿಡುತ್ತೆ ಅಂತ ದಕ್ಷಿಣ ಭಾರತದವರು ಹೇಳಲ್ಲ. ಕೆಜಿಎಫ್​ 2, ಪುಷ್ಪ, ಆರ್​ಆರ್​ಆರ್​ ಸಿನಿಮಾಗಳ ಮೇಕಿಂಗ್​ ಗಮನಿಸಿ. ಅವು ತುಂಬ ನೀಟ್ ಆಗಿವೆ. ಇದು ಮಾಡು ಇಲ್ಲವೇ ಮಡಿ ಎಂಬಂತಹ ಸನ್ನಿವೇಶ ಎಂಬ ರೀತಿಯಲ್ಲೇ ಅವರು ಪ್ರತಿ ದೃಶ್ಯದ ಚಿತ್ರೀಕರಣ ಮಾಡುತ್ತಾರೆ. ಆ ಗುಣದ ಕೊರತೆ ನಮ್ಮಲ್ಲಿ ಇದೆ. ನಾವು ಬರೀ ಹಣದ ದೃಷ್ಟಿಯಿಂದ ಸಿನಿಮಾ ಬಗ್ಗೆ ಯೋಚಿಸುತ್ತೇನೆ. ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳುವುದಿಲ್ಲ. ಮುಖ್ಯಧಾರೆಯ ಸಿನಿಮಾಗಳನ್ನು ಹೇಗೆ ಮಾಡಬೇಕು ಎಂಬ ಪಾಠವನ್ನು ದಕ್ಷಿಣ ಭಾರತದವರನ್ನು ನೋಡಿ ಬಾಲಿವುಡ್​ನವರು ಕಲಿಯಬೇಕು’ ಎಂದು ಮನೋಜ್​ ಬಾಜ್​ಪಾಯಿ ಹೇಳಿದ್ದಾರೆ.

ಇದೇ ರೀತಿ ಅನೇಕ ನಟರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ ಇದ್ದಾರೆ. ಇತ್ತೀಚೆಗೆ ನವಾಜುದ್ದೀನ್​ ಸಿದ್ದಿಕಿ ಅವರು ಕೂಡ ಬಾಲಿವುಡ್​ನ ಕೆಲವು ಲೋಪಗಳ ಬಗ್ಗೆ ಮಾತನಾಡಿದ್ದರು. ದಕ್ಷಿಣ ಭಾರತದ ಹಲವು ಚಿತ್ರಗಳು ಹಿಂದಿಗೆ ರಿಮೇಕ್ ಆಗುತ್ತಿವೆ. ಇದು ತಪ್ಪು ಅನ್ನೋದು ನವಾಜುದ್ದೀನ್ ಅವರ ಅಭಿಪ್ರಾಯ. ‘ನಮ್ಮಿಂದ ಒಂದು ತಪ್ಪು ನಡೆದಿದೆ. ನಾವು ಸೌತ್ ಚಿತ್ರಗಳನ್ನು ರೀಮೇಕ್ ಮಾಡುತ್ತಲೇ ಇದ್ದೇವೆ. ನಾವು ಒರಿಜಿನಲ್​ ಸ್ಟೋರಿಗಳನ್ನು ಮಾಡುತ್ತಿಲ್ಲ. ನಾವು ರಿಮೇಕ್​ ಮೇಲೆ ಅವಲಂಬಿತರಾಗಿದ್ದೇವೆ. ನಮ್ಮ ತಪ್ಪುಗಳಿಂದ ನಾವು ಪಾಠ ಕಲಿಯಬೇಕು. ಮೂಲ ಕಥೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಬೇಕಿದೆ’ ಎಂದಿದ್ದಾರೆ ನವಾಜುದ್ದೀನ್ ಸಿದ್ದಿಕಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ